Andolana originals

ಈ ರಸ್ತೆಯಲ್ಲಿ ಸಂಚಾರ ಪ್ರಾಣಕ್ಕೆ ಸಂಚಕಾರ!

ಶ್ರೀಧರ್ ಆರ್. ಭಟ್

ದೇವರಸನಹಳ್ಳಿ ರಸ್ತೆ ಅವ್ಯವಸ್ಥೆಯಿಂದ ಹೈರಾಣಾದ ಸವಾರರು; ರಸ್ತೆ ಅಭಿವೃದ್ಧಿಗೆ ಆಗ್ರಹ

ನಂಜನಗೂಡು: ‘ಸುಲಭ ಹೆರಿಗೆಗಾಗಿ ಈ ರಸ್ತೆಯಲ್ಲಿ ಸಂಚರಿಸಿ’ ಎಂದು ಫಲಕವನ್ನಂತೂ ಇಲ್ಲಿ ಹಾಕಿಲ್ಲ. ಆದರೆ ಈ ರಸ್ತೆಯಲ್ಲಿ ಸಂಚರಿಸಿದವರ ಬಾಯಲ್ಲಿ ಈ ಉದ್ಗಾರ ಬರಿಸುತ್ತದೆ ದೇವರಸನಹಳ್ಳಿ ರಸ್ತೆ ಅವ್ಯವಸ್ಥೆ.

ಪ್ರತಿನಿತ್ಯ ಸಾವಿರಾರು ಜನರು ಹಾಗೂ ವಾಹನಗಳು ಸಂಚರಿಸುವ ನಂಜನಗೂಡು ರಸಬಾಳೆ ಖ್ಯಾತಿಯ ದೇವರಸನಹಳ್ಳಿಗೆ ತಲುಪುವ ಮುಖ್ಯ ರಸ್ತೆಯಲ್ಲಿ ಗುಂಡಿಯಲ್ಲಿ ರಸ್ತೆಯೋ ಅಥವಾ ರಸ್ತೆಯಲ್ಲೇ ಗುಂಡಿಗಳೋ ಎಂಬುದೇ ತಿಳಿಯದಂತಾಗಿದೆ.

ನಂಜನಗೂಡು ನಗರದ ಹಳ್ಳದಕೇರಿಯಿಂದ ದೇವರಸನಹಳ್ಳಿ ಮೂಲಕ ಹೊಸೂರು, ಮಾಡ್ರಳ್ಳಿ, ಕೆಬ್ಬೇಪುರ, ಉಪ್ಪನಳ್ಳಿ, ಶ್ರೀನಗರ ಮೂಲಕ ಎಡಕ್ಕೆ ತಿರುಗಿದರೆ ಹೆಡತಲೆ, ಬಲಕ್ಕೆ ತೆರಳಿದರೆ ಕಳಲೆ ಗೇಟ್ ತಲುಪಬಹುದಾದ ಕೃಷಿಕರು, ಕಾರ್ಮಿಕರು, ಶಾಲಾ ಬಾಲಕ-ಬಾಲಕಿಯರು ನಿತ್ಯ ಸಂಚರಿಸುವ ಲೋಕೋಪಯೋಗಿ ಇಲಾಖೆಯ ಈ ರಸ್ತೆ ಈ ದಶಕದ ಆರಂಭದಲ್ಲಿ ಡಾಂಬರು ಕಂಡಿದ್ದು ಬಿಟ್ಟರೆ ಮುಂದೆಂದೂ ದುರಸ್ತಿ ಕಂಡೇ ಇಲ್ಲ ಎನ್ನುತ್ತಾರೆ ಇಲ್ಲಿನ ಗ್ರಾಮಸ್ಥರು.

ದಕ್ಷಿಣ ಕಾಶಿ ಶ್ರೀಕಂಠೇಶ್ವರನ ಸನ್ನಿಧಿಯಿಂದ ಕೇವಲ ೩ ಕಿ.ಮೀ. ದೂರದ ದೇವರಸನಹಳ್ಳಿ ಹಾಗೂ ಮುಂದಿನ ಊರುಗಳ ಜನತೆಯ ಪಾಲಿಗೆ ಈ ರಸ್ತೆಯ ಪ್ರಯಾಣ ನರಕಯಾತನೆಯಾಗಿದೆ. ಎಡ-ಬಲದಲ್ಲಿ ಹುಲ್ಲಹಳ್ಳಿ ಕಬಿನಿ, ನುಗು ಹಾಗೂ ನರಸಾಂಬುಧಿ ಕೆರೆಯ ನೀರಿನ ಹಸಿರು ಗದ್ದೆಗಳ ಮಧ್ಯೆ ಸಾಗುವ ಇಲ್ಲಿ ವಾಹನ ಚಾಲಕರು ರಸ್ತೆಯ ಒಂದು ಗುಂಡಿ ತಪ್ಪಿಸಿಕೊಳ್ಳಲು ಪಕ್ಕಕ್ಕೆ ಸರಿದರೆ ಮೂರು ಗುಂಡಿಗಳನ್ನು ಹತ್ತಿಳಿಯಬೇಕಾದ ಅನಿವಾರ್ಯತೆಯಲ್ಲಿ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದಾರೆ.

ಗುಂಡಿಗಳಿಂದಲೇ ಆವೃತವಾದ ಇಲ್ಲಿ ಬೇಸಿಗೆಯಾದರೆ ದೂಳಿನ ಸ್ನಾನ, ಮಳೆಗಾಲವಾದರೆ ಕೆಸರಿನ ಗದ್ದೆಯಲ್ಲಿ ಓಡಾಡಿದಂತಾಗುತ್ತದೆ. ಹೀಗಾಗಿ ಸವಾರರು ಜೀವ ಕೈನಲ್ಲಿ ಹಿಡಿದುಕೊಂಡು ಭಯದಿಂದಲೇ ವಾಹನ ಚಾಲನೆ ಮಾಡಬೇಕಾಗಿದೆ. ಈಗಾಗಲೇ ನೂರಾರು ಜನರು ಇಲ್ಲಿ ಬಿದ್ದು ಮೂಳೆ ಮುರಿದುಕೊಂಡಿದ್ದಾರೆ.

” ಹಿಂದಿನ ಜನಪ್ರತಿನಿಽಗಳ ತಾತ್ಸಾರದಿಂದಾಗಿ ಈ ರಸ್ತೆ ದುಸ್ಥಿತಿಗೆ ತಲುಪಿದೆ. ರಸ್ತೆ ದುರಸ್ತಿಗಾಗಿ   ಒತ್ತಾಯಿಸಿ ಅನೇಕ ಪ್ರತಿಭಟನೆಗಳನ್ನು ನಡೆಸಿ ಕಂಡ ಕಂಡವರಿಗೆ ಮನವಿ ನೀಡಿದ್ದು, ಈವರೆಗೂ ಪ್ರಯೋಜನವಾಗಿಲ್ಲ. ಈ ರಸ್ತೆ ಅವ್ಯವಸ್ಥೆಯನ್ನು ಕಂಡ ಹಾಲಿ ಶಾಸಕರು ದೇವರಸನಹಳ್ಳಿ ರಸ್ತೆಯ ಅಭಿವೃದ್ಧಿಗಾಗಿ ೧೮ ಕೋಟಿ ರೂ. ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿದ್ದು ಕೆಲವೇ ದಿನಗಳಲ್ಲಿ ಅದು ಮಂಜೂರಾಗಿ ಕೆಲಸ ಆರಂಭವಾಗಬಹುದು.”

-ಮುದ್ದುಮಾದಶೆಟ್ಟಿ, ದೇವರಸನಹಳ್ಳಿ ಗ್ರಾಪಂ ಸದಸ್ಯ

” ಇದೇ ರಸ್ತೆಯಲ್ಲಿ ನಿತ್ಯ ಸಂಚರಿಸುವ ಪಂಚಾಯಿತಿಯವರು ಏನೂ ಮಾಡಿಲ್ಲ. ರಸ್ತೆ ಅವ್ಯವಸ್ಥೆ ಕುರಿತಂತೆ ಒಂದು ನಿರ್ಣಯವನ್ನೂ ಕೈಗೊಂಡಿಲ್ಲ. ಶಾಸಕರು, ಸಂಸದರಾದವರು ಇತ್ತ ಮುಖ ಮಾಡಿಲ್ಲ. ಹಿಂದಿನ ಸರ್ಕಾರದಲ್ಲಿ ಕಳಲೆಯವರೆಗೂ ಈ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನಡೆಯಿತು. ಆದರೆ ದುರಸ್ತಿ ಕಳಲೆ ಗೇಟ್ ದಾಟಿ ಮುಂದೆ ಬಂದೇ ಇಲ್ಲ. ಬಿಡುಗಡೆಯಾದ ಹಣ ಏನಾಯಿತು ಎಂಬುದು ಯಾರಿಗೂ ಗೊತ್ತಿಲ್ಲ. ೧೦ ವರ್ಷಗಳಿಂದ ಈ ರಸ್ತೆಯಲ್ಲಿ ಆಟೋ ಚಲಾಯಿಸಿ ಜೀವನವೇ ಸಾಕು ಎಂಬಂತಾಗಿದೆ.”

ಸಿದ್ದರಾಜು, ಆಟೋ ಚಾಲಕ

” ೨೦ ವರ್ಷಗಳಿಂದ ನಮ್ಮೂರ ರಸ್ತೆಗೆ ಡಾಂಬರು ಹಾಕುವುದು ಇರಲಿ, ಹಿಡಿ ಮಣ್ಣನ್ನೂ ಹಾಕಿಲ್ಲ. ಹಾಗಾಗಿ ರಸ್ತೆ ಈ ಹಂತ ತಲುಪಿದೆ. ಈಗಲೂ ರಸ್ತೆ ಅಭಿವೃದ್ಧಿಯಾಗದಿದ್ದರೆ ಮುಂದಿನ ಮಳೆಗಾಲ ಕಳೆಯುವುದರೊಳಗೆ ಇಲ್ಲೊಂದು ರಸ್ತೆ ಇತ್ತಾ ಎಂದು ಕೇಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.”

-ರಾಜು, ದೇವರಸನಹಳ್ಳಿ

ಆಂದೋಲನ ಡೆಸ್ಕ್

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

3 mins ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

5 mins ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

7 mins ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

9 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

16 mins ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

20 mins ago