Andolana originals

ಚಾಮುಂಡಿ ಕ್ರೀಡಾಂಗಣಕ್ಕೆ ಟ್ರಾನ್ಸ್‌ಪರೆಂಟ್‌ ಶೀಟ್‌!

ಮೈಸೂರು: ಚಾಮುಂಡಿವಿಹಾರ ಒಳಾಂಗಣ ಕ್ರೀಡಾಂಗಣದ ಚಾವಣಿಗೆ ಪಾರದರ್ಶಕ ಫೈಬರ್ ಶೀಟ್‌ಗಳನ್ನು ಅಳವಡಿಸಿ ಗ್ಲಾಸ್‌ಹೌಸ್ ಮಾದರಿಯ ಟ್ರಾನ್ಸ್‌ಪರೆಂಟ್ ಒಳಾಂಗಣ ಕ್ರೀಡಾಂಗಣವನ್ನಾಗಿ ಪರಿವರ್ತಿಸಲಾಗುತ್ತಿದೆ.

ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಒಳಾಂಗಣ ಕ್ರೀಡೆಗಳು ವಿದ್ಯುತ್ ಬೆಳಕಿನ ಬದಲಿಗೆ ಸೂರ್ಯನ ಬೆಳಕಿನಲ್ಲಿಯೇ ನಡೆಯಲಿವೆ. ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದ ಚಾವಣಿ ಕಬ್ಬಿಣದ ತಗಡುಗಳಿಂದ ಮಾಡಿದ ಜಿಂಕ್ ಶೀಟ್‌ಗಳಿಂದ ಆವೃತವಾಗಿತ್ತು. ಮೋಡ ಮುಸುಕಿದಾಗ ಮತ್ತು ಮಳೆ ಬಂದಾಗ ಸ್ವಲ್ಪ ಏರುಪೇರಾಗುತ್ತಿತ್ತು. ಹೀಗಾಗಿ ಈ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಬೇಕಾದರೆ ದಿನದ ೨೪ ಗಂಟೆಗಳೂ ವಿದ್ಯುತ್ ದೀಪ ಬಳಕೆ ಮಾಡಲಾಗುತ್ತಿತ್ತು.

ಇದೀಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ೫ ಕೋಟಿ ರೂ. ವೆಚ್ಚದಲ್ಲಿ ಪಾರದರ್ಶಕ ಫೈಬರ್ ಶೀಟ್ ಗಳನ್ನು ಚಾವಣಿಗೆ ಅಳವಡಿಸುತ್ತಿದೆ. ಈಗಾಗಲೇ ಶೇ. ೯೫ರಷ್ಟು ಕೆಲಸ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳು ಮುಗಿದ ಕೂಡಲೇ ಕ್ರೀಡಾಪಟುಗಳ ಬಳಕೆಗೆ ಸಜ್ಜಾಗಲಿದೆ. ಒಟ್ಟಾರೆ ದಸರೆಯಲ್ಲಿ ಒಳಾಂಗಣ ಕ್ರೀಡಾಕೂಟವನ್ನು ಸೂರ್ಯನ ಬೆಳಕಿನಲ್ಲಿಯೇ ಆಯೋಜಿಸಲಾಗುತ್ತದೆ. ಇದರಿಂದ ಹಗಲಿನ ವೇಳೆ ವಿದ್ಯುತ್ ಬಳಕೆಗೆ ತಗಲುತ್ತಿದ್ದ ವೆಚ್ಚ ಮತ್ತಷ್ಟು ಕಡಿತಗೊಳ್ಳಲಿದೆ.

ಜರ್ಮನಿ ಮೂಲದ ಶೀಟ್: ಅಂತರ ರಾಷ್ಟ್ರೀಯ ಗುಣಮಟ್ಟದ ಟೆನ್‌ಸೈಲ್ ಮೆಮ್ರನ್ ಎಂಬ ಪಾರದರ್ಶಕ -ಬರ್ ಶೀಟ್‌ಗಳನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಲಾ ಗಿದೆ. ಇದರ ಮೂಲಕ ಶೇ. ೫೦ರಷ್ಟು ಸೂರ್ಯನ ಬೆಳಕು ಹಾದು ಹೋಗುತ್ತದೆ. ಅಲ್ಲದೆ, ಈ ಅತ್ಯಾಧುನಿಕ ಶೀಟ್‌ಗಳ ಬಳಕೆಯಿಂದ ಮಳೆ ಬಂದಾಗ ಶಬ್ದ ಉಂಟಾಗುವುದಿಲ್ಲ.

ಯಾವ್ಯಾವ ಕ್ರೀಡೆಗಳಿಗೆ ಬಳಕೆ?: ಈ ಕ್ರೀಡಾಂಗಣದಲ್ಲಿ ವಾಲಿಬಾಲ್, ಬಾಸ್ಕೆಟ್ ಬಾಲ್, ಕರಾಟೆ, ಭಾರ ಎತ್ತುವ ಸ್ಪರ್ಧೆ, ದೇಹ ದಾರ್ಢ್ಯ ಸ್ಪರ್ಧೆ, ಚದುರಂಗ, ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಅಲ್ಲದೆ, ಕೆಲವೊಮ್ಮೆ ಕ್ರೀಡೆಗೆ ಸಂಬಂಽಸಿದ ಕಾರ್ಯ ಕ್ರಮಗಳನ್ನು ಆಯೋಜಿಸಲಾಗುತ್ತದೆ. ವಿದ್ಯುತ್ ಕಡಿತಗೊಂಡ ಸಂದರ್ಭದಲ್ಲಿ ವಿದ್ಯುತ್ ದೀಪದ ಬಳಕೆಗಾಗಿ ಡೀಸೆಲ್ ಇಂಧನ ದಿಂದ ಜನರೇಟರ್ ವಿದ್ಯುತ್ ಉಪಯೋಗಿಸಲಾಗುತ್ತದೆ. ಇದಕ್ಕೆ ಗಂಟೆಗೆ ೫೦ ಲೀ. ಡೀಸೆಲ್ ಬೇಕಾಗುತ್ತದೆ. ಪಾರದರ್ಶಕ ಶೀಟ್‌ಗಳ ಬಳಕೆ ಯಿಂದ ಹಗಲಿನ ವೇಳೆ ಈ ವೆಚ್ಚ ತಗ್ಗಲಿದೆ.

ಲೀಕೇಜ್‌ಗೆ ಕಡಿವಾಣ: ಒಳಾಂಗಣ ಕ್ರೀಡಾಂಗಣಕ್ಕೆ ಲಕ್ಷಾಂತರ ರೂ. ವ್ಯಯಿಸಿ ಮರದ ನೆಲಹಾಸು ಅಳವಡಿಸಲಾಗಿದೆ. ಹಾಲಿ ಜಿಂಕ್ ಶೀಟ್‌ಗಳಿಂದ ಮಳೆ ನೀರು ಸೋರಿಕೆಯಾಗಿ ಮರದ ಮೇಲೆ ಬೀಳುತ್ತಿತ್ತು. ಇದರಿಂದ ನೆಲಕ್ಕೆ ಅಳವಡಿಸಿರುವ ಮರದ ಹಲಗೆಗಳು ಎದ್ದು ಹೋಗುವ ಸಾಧ್ಯತೆ ಇತ್ತು. ಆದರೆ, ಸದ್ಯ ಅಳವಡಿಸುತ್ತಿರುವ ಶೀಟ್‌ಗಳಿಂದ ಲೀಕೇಜ್ ಸಮಸ್ಯೆ ಇರುವುದಿಲ್ಲ ಎಂದು ಹೇಳಲಾಗಿದೆ.

ಬೆಂಗಳೂರಿನ ಕೋರಮಂಗಲದಲ್ಲಿರುವ ಕ್ರೀಡಾಂಗಣವನ್ನು ಹೊರತುಪಡಿಸಿದರೆ ಈ ಮಾದರಿಯ ಅತ್ಯಾಧುನಿಕ ಫೈಬರ್ ಶೀಟ್ ಅಳವಡಿಸುತ್ತಿರುವ ರಾಜ್ಯದ ೨ನೇ ಕ್ರೀಡಾಂಗಣ ಇದಾಗಿದೆ. ದಸರಾ ಮಹೋತ್ಸವದಲ್ಲಿ ಇದನ್ನು ಬಳಕೆಗೆ ಮುಕ್ತಗೊಳಿಸಲಾಗುವುದು – ಭಾಸ್ಕರ್ ನಾಯಕ್, ಸಹಾಯಕ ನಿರ್ದೇಶಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ

 

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

25 mins ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

38 mins ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

2 hours ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

2 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

3 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

3 hours ago