ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ ವರದಿಯ ಹಿನ್ನೆಲೆಯಲ್ಲಿ ಈ ಗ್ರಾಮಗಳಿಗೆ ಸಾರಿಗೆ ಬಸ್ ಬಿಡಲಾಗಿದೆ.
ಏಪ್ರಿಲ್ ೮ರಂದು ಈ ವಿಚಾರವಾಗಿ ಸಮಗ್ರವಾಗಿ ವರದಿ ಮಾಡಲಾಗಿತ್ತು. ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಅವರು ಇಲಾಖೆ ಅಧಿಕಾರಿಗಳಿಂದ ಸರ್ವೇ ಮಾಡಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, ಸರ್ವೇ ಮಾಡಿಸಿ ಕಾಡಳ್ಳಿ, ಕಿರಗಸೂರು, ಭೋಗಾಪುರ, ಹನಹಳ್ಳಿ, ಮೂಕಳ್ಳಿ, ಸಪ್ಪಯ್ಯನಪುರ, ಯಾಲಕ್ಕೂರು, ಕುದೇರು, ಉಮ್ಮತ್ತೂರು, ಜನ್ನೂರು ಹೊಸೂರು, ಆಲ್ದೂರು ಮೂಲಕ ತಿ.ನರಸೀಪುರ ತಲುಪುವಂತೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ ೭.೧೫ಕ್ಕೆ ತಿ.ನರಸೀಪುರ ಬಿಟ್ಟು ಈ ಗ್ರಾಮಗಳ ಮೂಲಕ ಚಾಮರಾಜನಗರವನ್ನು ೯.೩೦ಕ್ಕೆ ತಲುಪುತ್ತದೆ. ಸಂಜೆ ೪.೩೦ಕ್ಕೆ ಚಾ.ನಗರ ನಿಲ್ದಾಣದಿಂದ ಹೊರಟು ಈ ಗ್ರಾಮಗಳ ಮೂಲಕ ತಿ.ನರಸೀಪುರ ತಲುಪಲಿದೆ. ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಅವರು ‘ಆಂದೋಲನ ’ವರದಿಗೆ ಸ್ಪಂದಿಸಿ ಶನಿವಾರದಿಂದಲೇ (ಏ.೨೫) ಬಸ್ ಬಿಟ್ಟಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕೋಶಾಧ್ಯಕ್ಷರಾದ ಯಾಲಕ್ಕೂರು ಲಿಂಗರಾಜು ಸಂತಸ ವ್ಯಕ್ತಪಡಿಸಿದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…