Andolana originals

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ ವರದಿಯ ಹಿನ್ನೆಲೆಯಲ್ಲಿ ಈ ಗ್ರಾಮಗಳಿಗೆ ಸಾರಿಗೆ ಬಸ್ ಬಿಡಲಾಗಿದೆ.

ಏಪ್ರಿಲ್ ೮ರಂದು ಈ ವಿಚಾರವಾಗಿ ಸಮಗ್ರವಾಗಿ ವರದಿ ಮಾಡಲಾಗಿತ್ತು. ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಅವರು ಇಲಾಖೆ ಅಧಿಕಾರಿಗಳಿಂದ ಸರ್ವೇ ಮಾಡಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದರು.

ಅದರಂತೆ, ಸರ್ವೇ ಮಾಡಿಸಿ ಕಾಡಳ್ಳಿ, ಕಿರಗಸೂರು, ಭೋಗಾಪುರ, ಹನಹಳ್ಳಿ, ಮೂಕಳ್ಳಿ, ಸಪ್ಪಯ್ಯನಪುರ, ಯಾಲಕ್ಕೂರು, ಕುದೇರು, ಉಮ್ಮತ್ತೂರು, ಜನ್ನೂರು ಹೊಸೂರು, ಆಲ್ದೂರು ಮೂಲಕ ತಿ.ನರಸೀಪುರ ತಲುಪುವಂತೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ ೭.೧೫ಕ್ಕೆ ತಿ.ನರಸೀಪುರ ಬಿಟ್ಟು ಈ ಗ್ರಾಮಗಳ ಮೂಲಕ ಚಾಮರಾಜನಗರವನ್ನು ೯.೩೦ಕ್ಕೆ ತಲುಪುತ್ತದೆ. ಸಂಜೆ ೪.೩೦ಕ್ಕೆ ಚಾ.ನಗರ ನಿಲ್ದಾಣದಿಂದ ಹೊರಟು ಈ ಗ್ರಾಮಗಳ ಮೂಲಕ ತಿ.ನರಸೀಪುರ ತಲುಪಲಿದೆ. ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಅವರು ‘ಆಂದೋಲನ ’ವರದಿಗೆ ಸ್ಪಂದಿಸಿ ಶನಿವಾರದಿಂದಲೇ (ಏ.೨೫) ಬಸ್ ಬಿಟ್ಟಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕೋಶಾಧ್ಯಕ್ಷರಾದ ಯಾಲಕ್ಕೂರು ಲಿಂಗರಾಜು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

2 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

2 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

2 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

2 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

2 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

5 hours ago