Andolana originals

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ ವರದಿಯ ಹಿನ್ನೆಲೆಯಲ್ಲಿ ಈ ಗ್ರಾಮಗಳಿಗೆ ಸಾರಿಗೆ ಬಸ್ ಬಿಡಲಾಗಿದೆ.

ಏಪ್ರಿಲ್ ೮ರಂದು ಈ ವಿಚಾರವಾಗಿ ಸಮಗ್ರವಾಗಿ ವರದಿ ಮಾಡಲಾಗಿತ್ತು. ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಅವರು ಇಲಾಖೆ ಅಧಿಕಾರಿಗಳಿಂದ ಸರ್ವೇ ಮಾಡಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದರು.

ಅದರಂತೆ, ಸರ್ವೇ ಮಾಡಿಸಿ ಕಾಡಳ್ಳಿ, ಕಿರಗಸೂರು, ಭೋಗಾಪುರ, ಹನಹಳ್ಳಿ, ಮೂಕಳ್ಳಿ, ಸಪ್ಪಯ್ಯನಪುರ, ಯಾಲಕ್ಕೂರು, ಕುದೇರು, ಉಮ್ಮತ್ತೂರು, ಜನ್ನೂರು ಹೊಸೂರು, ಆಲ್ದೂರು ಮೂಲಕ ತಿ.ನರಸೀಪುರ ತಲುಪುವಂತೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ ೭.೧೫ಕ್ಕೆ ತಿ.ನರಸೀಪುರ ಬಿಟ್ಟು ಈ ಗ್ರಾಮಗಳ ಮೂಲಕ ಚಾಮರಾಜನಗರವನ್ನು ೯.೩೦ಕ್ಕೆ ತಲುಪುತ್ತದೆ. ಸಂಜೆ ೪.೩೦ಕ್ಕೆ ಚಾ.ನಗರ ನಿಲ್ದಾಣದಿಂದ ಹೊರಟು ಈ ಗ್ರಾಮಗಳ ಮೂಲಕ ತಿ.ನರಸೀಪುರ ತಲುಪಲಿದೆ. ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಅವರು ‘ಆಂದೋಲನ ’ವರದಿಗೆ ಸ್ಪಂದಿಸಿ ಶನಿವಾರದಿಂದಲೇ (ಏ.೨೫) ಬಸ್ ಬಿಟ್ಟಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕೋಶಾಧ್ಯಕ್ಷರಾದ ಯಾಲಕ್ಕೂರು ಲಿಂಗರಾಜು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago