Andolana originals

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ ವರದಿಯ ಹಿನ್ನೆಲೆಯಲ್ಲಿ ಈ ಗ್ರಾಮಗಳಿಗೆ ಸಾರಿಗೆ ಬಸ್ ಬಿಡಲಾಗಿದೆ.

ಏಪ್ರಿಲ್ ೮ರಂದು ಈ ವಿಚಾರವಾಗಿ ಸಮಗ್ರವಾಗಿ ವರದಿ ಮಾಡಲಾಗಿತ್ತು. ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಅವರು ಇಲಾಖೆ ಅಧಿಕಾರಿಗಳಿಂದ ಸರ್ವೇ ಮಾಡಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದರು.

ಅದರಂತೆ, ಸರ್ವೇ ಮಾಡಿಸಿ ಕಾಡಳ್ಳಿ, ಕಿರಗಸೂರು, ಭೋಗಾಪುರ, ಹನಹಳ್ಳಿ, ಮೂಕಳ್ಳಿ, ಸಪ್ಪಯ್ಯನಪುರ, ಯಾಲಕ್ಕೂರು, ಕುದೇರು, ಉಮ್ಮತ್ತೂರು, ಜನ್ನೂರು ಹೊಸೂರು, ಆಲ್ದೂರು ಮೂಲಕ ತಿ.ನರಸೀಪುರ ತಲುಪುವಂತೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ ೭.೧೫ಕ್ಕೆ ತಿ.ನರಸೀಪುರ ಬಿಟ್ಟು ಈ ಗ್ರಾಮಗಳ ಮೂಲಕ ಚಾಮರಾಜನಗರವನ್ನು ೯.೩೦ಕ್ಕೆ ತಲುಪುತ್ತದೆ. ಸಂಜೆ ೪.೩೦ಕ್ಕೆ ಚಾ.ನಗರ ನಿಲ್ದಾಣದಿಂದ ಹೊರಟು ಈ ಗ್ರಾಮಗಳ ಮೂಲಕ ತಿ.ನರಸೀಪುರ ತಲುಪಲಿದೆ. ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಅವರು ‘ಆಂದೋಲನ ’ವರದಿಗೆ ಸ್ಪಂದಿಸಿ ಶನಿವಾರದಿಂದಲೇ (ಏ.೨೫) ಬಸ್ ಬಿಟ್ಟಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕೋಶಾಧ್ಯಕ್ಷರಾದ ಯಾಲಕ್ಕೂರು ಲಿಂಗರಾಜು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

2 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

3 hours ago

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

14 hours ago