Andolana originals

ಸಾರಿಗೆ ಬಸ್ ಸೇವೆ ಕಡಿತ; ಪ್ರಯಾಣಿಕರ ಆಕ್ರೋಶ

ದಾಸೇಗೌಡ ಸರಗೂರು

ಸರಗೂರಿಗೆ ಹೆಚ್ಚಿನ ಬಸ್‌ಗಳ ಸೌಕರ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ

ಸರಗೂರು: ಎಚ್.ಡಿ.ಕೋಟೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದಿಂದ ಇತ್ತೀಚಿನವರೆಗೂ ಸರಗೂರು-ಹೆಚ್.ಡಿ ಕೋಟೆ ಮಾರ್ಗವಾಗಿ ರಾಜ್ಯದ ವಿವಿಧ ಭಾಗಗಳಿಗೆ ಹಲವಾರು ಬಸ್ ಗಳು ಸಂಚರಿಸುತ್ತಿದ್ದವು. ಆದರೆ, ಅನೇಕ ಮಾರ್ಗಗಳನ್ನು ರದ್ದುಪಡಿಸಿರುವುದರಿಂದ ಪ್ರಯಾಣಿಕರಲ್ಲಿ ತೀವ್ರ ಅಸಮಾಧಾನ ಮೂಡಿದೆ.

ಮಹದೇಶ್ವರ ಬೆಟ್ಟ, ಸೇಲಂ, ಶಿವಮೊಗ್ಗ, ಚಿಕ್ಕಮಗಳೂರು, ಸಿಗಂದೂರು, ದಾವಣಗೆರೆ, ಮಾನಂದವಾಡಿ, ಊಟಿ, ಬಾಳೆಲೆ, ಕುಟ್ಟ, ವಿರಾಜಪೇಟೆ, ಕೋಲಾರ, ಚಾಮರಾಜನಗರ ಮಾರ್ಗಗಳಿಗೆ ನೇರ ಹಾಗೂ ಮಧ್ಯಂತರ ಬಸ್ಗಳ ಸಂಚಾರ ಇತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇವುಗಳಲ್ಲಿ ಆದಾಯ ಇಲ್ಲವೆಂಬ ನೆಪದಲ್ಲಿ ಈ ಮಾರ್ಗಗಳನ್ನು ಬೇರೆ ಘಟಕಗಳಿಗೆ ಹಂಚಲಾ ಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಹೆಚ್.ಡಿ.ಕೋಟೆ ಘಟಕದಿಂದ ಕೋಟೆ- ಮೈಸೂರು ಹಾಗೂ ಸರಗೂರು- ಮೈಸೂರು ಮಾರ್ಗವಾಗಿ ನಾನ್‌ಸ್ಟಾಪ್ ಬಸ್ ಗಳ ಸಂಚಾರವನ್ನು ಪ್ರಾರಂಭಿಸಲಾಗಿದ್ದು ಕೋಟೆಗೆ ಮತ್ತು ಸರಗೂರಿಗೆ ತಲಾ ನಾಲ್ಕು ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಕೋಟೆಗೆ ಅರ್ಧ ಗಂಟೆಗೆ ಒಮ್ಮೆ ಬಸ್ ಸಿಗುತ್ತಿದ್ದರೆ, ಸರಗೂರಿಗೆ ಒಂದು ಗಂಟೆಗೆ ಒಮ್ಮೆ ಮಾತ್ರ ಬಸ್ ಇದೆ. ಅದರಲ್ಲಿಯೂ ಕೆಲವು ಬಸ್‌ಗಳು ನಿಗದಿತ ವೇಳೆಗೆ ಬರುವುದಿಲ್ಲವೆಂಬ ಆರೋಪ ಕೇಳಿಬಂದಿದೆ.

ಈ ಹಿಂದೆ ಕೋಟೆಯಲ್ಲಿ ಸಾರಿಗೆ ಘಟಕ ಇಲ್ಲದಿದ್ದರೂ ಮೈಸೂರು ಘಟಕ ಹಾಗೂ ಚಾಮರಾಜನಗರ ಘಟಕದಿಂದ ಸರಗೂರು ಭಾಗಕ್ಕೆ, ಮಲೆ ಮಹದೇಶ್ವರ ಬೆಟ್ಟಕ್ಕೆ ೩೦ರಿಂದ ೪೦ ಬಸ್‌ಗಳನ್ನು ಬಿಟ್ಟಿದ್ದರು. ಆದರೆ, ಈಗ ಈ ಭಾಗಕ್ಕೆ ಸಮರ್ಪಕ ಬಸ್ ವ್ಯವಸ್ಥೆಯಿಲ್ಲ ಎಂದು ಹೋಟೆಲ್ ಮಾಲೀಕ ಕೊತ್ತೆಗಾಲ ಮಹದೇವು ತಿಳಿಸಿದರು. ಅಲ್ಲದೆ, ಈ ಘಟಕದ ಬಸ್‌ಗಳೆಲ್ಲ ಭಾರೀ ಹಳೆಯದಾಗಿದ್ದು, ರಸ್ತೆಯಲ್ಲಿ ಕೆಟ್ಟು ನಿಲ್ಲುವುದು ಸಾಮಾನ್ಯವಾಗಿದೆ.

ಶಕ್ತಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣಿಸುತ್ತಿರುವುದರಿಂದ ಬಸ್ಸುಗಳಲ್ಲಿ ದಟ್ಟಣೆ ಇರುತ್ತದೆ. ಇದರಿಂದ ವಿದ್ಯಾರ್ಥಿಗಳು, ಇತರ ಪ್ರಯಾಣಿಕರಿಗೆ ಆಸನಗಳೇ ಸಿಗದಂತಾಗಿದೆ. ಅಲ್ಲದೆ, ಹತ್ತುವಾಗ, ಇಳಿಯುವಾಗ ಬಿದ್ದು ಗಾಯಗೊಂಡಿರುವ ಅನೇಕ ಉದಾಹರಣೆಗಳಿವೆ.

” ಸರಗೂರಿನಿಂದ ಹೆಚ್.ಡಿ.ಕೋಟೆ ಕಡೆಗೆ ಬಸ್ಗಳ ಕೊರತೆ ಇರುವ ಬಗ್ಗೆ ಮಾಹಿತಿ ಇದೆ. ಶಾಲಾ- ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಗಮನಕ್ಕೆ ಬಂದಿದೆ. ಅಮಾವಾಸ್ಯೆ ಸಂದರ್ಭದಲ್ಲಿ ಬೇಲದಕುಪ್ಪೆ, ಭೀಮನಕೊಲ್ಲಿ ದೇವಸ್ಥಾನಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡುವ ವೇಳೆ ಉಂಟಾಗುವ ವ್ಯತ್ಯಾಸವನ್ನು ಶೀಘ್ರದಲ್ಲೇ ಸರಿಪಡಿಸಲಾಗುತ್ತದೆ.”

-ತ್ಯಾಗರಾಜ್, ಘಟಕ ವ್ಯವಸ್ಥಾಪಕರು,

” ಹೆಚ್.ಡಿ.ಕೋಟೆ ಸರಗೂರು ಭಾಗದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು. ಹಳೆಯ ಬಸ್‌ಗಳನ್ನು ಬದಲಿಸಿ ಹೊಸ ಬಸ್‌ಗಳನ್ನು ಒದಗಿಸಬೇಕು ಹಾಗೂ ರದ್ದಾದ ಮಾರ್ಗಗಳನ್ನು ಮರುಪ್ರಾರಂಭಿಸಬೇಕು.”

-ಗೋವಿಂದಯ್ಯ, ಪ್ರಯಾಣಿಕರು

 

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

10 mins ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

2 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

16 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

20 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

20 hours ago