Andolana originals

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಶಕ್ತಿ’ ಯೋಜನೆಯಿಂದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳು ನಿಶ್ಶಕ್ತಿಗೆ ಒಳಗಾಗುತ್ತಿದ್ದರೆ, ಸಾರಿಗೆ ನಿಗಮಗಳಿಗೆ ಸರ್ಕಾರ ಸಕಾಲಕ್ಕೆ ಶಕ್ತಿ ಯೋಜನೆಯ ಹಣ ಬಿಡುಗಡೆ ಮಾಡದೆ ಕೋಟಿ ಕೋಟಿ ರೂ. ಹಣ ಬಾಕಿ ಉಳಿಸಿ ಕೊಳ್ಳುತ್ತಿರುವುದರಿಂದ ಸಾರಿಗೆ ನಿಗಮಗಳು ಏದುಸಿರು ಬಿಡು ವಂತಾಗಿದೆ.

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ನೀಡಿದ್ದ ಪಂಚ ಗ್ಯಾರಂಟಿ ಯೋಜನೆಯ ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ೨೦೨೩ರ ಜೂನ್ ೧೧ರಂದು ಜಾರಿಗೊಳಿಸಿದ ನಂತರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ಸಾರಿಗೆ ನಿಗಮ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ೨೦೨೫ರ ನವೆಂಬರ್ ೨೫ರವರೆಗೆ ೬೫೦ ಕೋಟಿ ಟ್ರಿಪ್‌ಗಳಲ್ಲಿ ಫಲಾನುಭವಿಗಳು ಪ್ರಯಾಣ ಮಾಡಿದ್ದಾರೆ ಎಂದು ಸರ್ಕಾರ ಬೀಗುತ್ತಿದೆ. ಆದರೆ, ಇದೇ ಅವಽಯಲ್ಲಿ ಅಂದಾಜು ೫೪ ಆಸನಗಳ ಸಾಮರ್ಥ್ಯದ ಸಾರಿಗೆ ಬಸ್‌ಗಳು ದಿನದ ಪೀಕ್ ಅವಧಿಯಲ್ಲಿ ಹಾಗೂ ವಾರಾಂತ್ಯ, ಸರ್ಕಾರಿ ರಜಾ ದಿನಗಳಲ್ಲಿ ಸರಿಸುಮಾರು ೯೦ರಿಂದ ೧೦೦ ಪ್ರಯಾಣಿಕರನ್ನು ಹೊತ್ತು ಸಾಗಿಸಬೇಕಾದ ಅನಿವಾರ್ಯತೆಗೆ ಸಿಲುಕಿ, ಅಽಕ ಭಾರವನ್ನು ಹೊತ್ತು ಏದುಸಿರು ಬಿಡುತ್ತಾ ರಸ್ತೆಗಳಲ್ಲಿ ಸಾಗುವ ದೃಶ್ಯ ಸಾಮಾನ್ಯವಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶಗಳಿಂದ ತಾಲ್ಲೂಕು ಕೇಂದ್ರಗಳಿಗೆ, ತಾಲ್ಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಗಳಿಗೆ ಕಾಲೇಜಿಗೆ ಹೋಗಿ ಬರುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಬಸ್‌ಗಳಲ್ಲಿ ಸೀಟು ಸಿಕ್ಕು ಕುಳಿತು ಪ್ರಯಾಣಿಸುವುದಿರಲಿ, ಸಾವಕಾಶವಾಗಿ ನಿಂತು ಪ್ರಯಾಣಿಸಲೂ ಸಾಧ್ಯವಾಗದೆ, ಈ ಬಸ್ ಬಿಟ್ಟರೆ ಕಾಲೇಜು, ಕಚೇರಿ ಕೆಲಸ ತಪ್ಪಿಸಿಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕೆ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಾ ಪ್ರಯಾಣಿಸುವ ಸ್ಥಿತಿ ಬಂದೊದಗಿದೆ.

ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳು ಆರ್ಥಿಕ ನಷ್ಟದಲ್ಲಿಲ್ಲ. ಬದಲಿಗೆ ಲಾಭದಲ್ಲಿವೆ ಎಂದು ಸರ್ಕಾರ ಹೇಳುತ್ತಲೇ ಬರುತ್ತಿದ್ದರೂ ವಾಸ್ತವದಲ್ಲಿ ಅಧಿಕೃತ ಅಂಕಿ ಆಂಶಗಳ ಪ್ರಕಾರ ಶಕ್ತಿ ಯೋಜನೆಯ ಬಾಕಿ ಹಣದಿಂದಾಗಿ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಸರ್ಕಾರ ಒಟ್ಟಾರೆ ೪,೦೦೬.೪೭ ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಇದರ ಪರಿಣಾಮ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಸರ್ಕಾರದಿಂದ ಸಾರಿಗೆ ನಿಗಮಗಳಿಗೆ ಸರಿಯಾಗಿ ಹಣ ಪಾವತಿಯಾದೇ ಸಾರಿಗೆ ನಿಗಮಗಳು ನಷ್ಟದ ಹಾದಿಗೆ ದೂಡಲ್ಪಟ್ಟಿವೆ.

ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ:  ವಿಪಕ್ಷ ಟೀಕೆಗಳಿಂದಾಗಿ ಕಡೆಗೂ ಸರ್ಕಾರ ಗುರುವಾರನವೆಂಬರ್ ತಿಂಗಳ ಅನುದಾನವಾಗಿ ಸಾರಿಗೆ ಇಲಾಖೆಗೆ ೪೪೧ ಕೋಟಿ ರೂ. ಬಿಡುಗಡೆ ಮಾಡಿದೆ. ಕೆಎಸ್‌ಆರ್‌ಟಿಸಿಗೆ ೧೭೧.೪೧ ಕೋಟಿ ರೂ., ಬಿಎಂಟಿಸಿಗೆ ೭೫.೬೫ ಕೋಟಿ ರೂ., ಕೆಕೆಆರ್‌ಟಿಸಿಗೆ ೮೬.೯೨ ಕೋಟಿ ರೂ. ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ೧೦೭.೬೭ ಕೋಟಿ ರೂ. ಬಿಡುಗಡೆ ಮಾಡಿದೆ. ಆದರೆ, ಶಕ್ತಿ ಯೋಜನೆಯ ೪,೦೦೬ ಕೋಟಿ ರೂ. ಬಾಕಿ ಹಾಗೆಯೇ ಉಳಿದಿದೆ.

 ಗಿರೀಶ್ ಹುಣಸೂರು

ಆಂದೋಲನ ಡೆಸ್ಕ್

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

56 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago