Andolana originals

ಮಾರ್ಚ್‌ಗೆ ಟ್ರಾಮಾ ಸೆಂಟರ್‌ ಕಾರ್ಯಾರಂಭ

ನವೀನ್ ಡಿಸೋಜ

೪೩ ಕೋಟಿ ರೂ. ವೆಚ್ಚದ ಕಾಮಗಾರಿ; ಅಂತಿಮ ಹಂತದಲ್ಲಿ ಕೆಲಸ

ಮಡಿಕೇರಿ: ಮಾರ್ಚ್ ವೇಳೆಗೆ ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಕಾರ್ಯಾರಂಭಿಸಲಿದೆ. ಇದರೊಂದಿಗೆ ಮಹಿಳೆಯರು ಮತ್ತು ಮಕ್ಕಳ ವಿಭಾಗದಲ್ಲಿ ರೋಗಿಗಳ ಸಂಬಂಧಿಕರು ಉಳಿದುಕೊಳ್ಳಲು ಧರ್ಮಶಾಲಾ ಕಟ್ಟಡ ಸದ್ಯದಲ್ಲೇ ಸೇವೆಗೆ ಸಿದ್ಧಗೊಳ್ಳಲಿದೆ.

ಕೊಯಿಮ್ಸ್‌ನಲ್ಲಿ ೪೩ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕ್ರಿಟಿಕಲ್ ಕೇರ್ ಯುನಿಟ್‌ನ ಕಟ್ಟಡ ಕಾಮಗಾರಿ ಭರದಿಂದ ಸಾಗಿದ್ದು, ಅಂತಿಮ ಹಂತದ ಕೆಲಸಗಳು ಸಾಗಿವೆ. ಕೆಲ ಭಾಗಗಳಿಗೆ ಪ್ಲಾಸ್ಟರಿಂಗ್ ಸೇರಿದಂತೆ ಯಂತ್ರೋಪಕರಣಗಳ ಅಳವಡಿಕೆ ಕಾರ್ಯ ಆಗಬೇಕಿದೆ. ಟ್ರಾಮಾ ಕೇರ್ ಯುನಿಟ್‌ಗೆ ಬೇಕಾದ ಉಪಕರಣಗಳಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆಯೂ ನಡೆದಿದೆ ಎಂದು ಕೊಯಿಮ್ಸ್‌ನ ನಿರ್ದೇಶಕರಾದ ಡಾ.ಲೋಕೇಶ್ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್ ಅಡಿಯಲ್ಲಿ ಈ ಮಹತ್ವದ ಕೆಲಸ ಅನುಷ್ಠಾನಗೊಳ್ಳುತ್ತಿದ್ದು, ರಾಜ್ಯ ಸರ್ಕಾರದ ಪಾಲು ಈ ಯೋಜನೆಯಲ್ಲಿದೆ. ಕ್ರಿಟಿಕಲ್ ಕೇರ್ ಸೆಂಟರ್(ಟ್ರಾಮ ಸೆಂಟರ್) ಆರಂಭವಾದರೆ ಈಗಿರುವ ತುರ್ತು ಚಿಕಿತ್ಸಾ ಘಟಕ ಅಲ್ಲಿಗೆ ಸ್ಥಳಾಂತರಗೊಳ್ಳಲಿದ್ದು, ತುರ್ತು ಚಿಕಿತ್ಸೆಗಾಗಿಯೇ ಈ ಕೇಂದ್ರ ಸಂಪೂರ್ಣವಾಗಿ ಕೆಲಸ ಮಾಡಲಿದೆ. ಕೆಲವೊಮ್ಮೆ ತುರ್ತು ಶಸ್ತ್ರಚಿಕಿತ್ಸೆ ಮಾಡಬೇಕಾದಾಗ ಅದೇ ಸಮಯದಲ್ಲಿ ಆಪರೇಷನ್ ಥಿಯೇಟರ್‌ಗಳಲ್ಲಿ ಬೇರೆ ಶಸ್ತ್ರಚಿಕಿತ್ಸೆ ನಿಗದಿಯಾಗಿದ್ದರೇ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ರೋಗಿಯನ್ನು ಅನಿವಾರ್ಯವಾಗಿ ಬೇರೆ ಆಸ್ಪತ್ರೆಗೆ ರೆಫರ್ ಮಾಡಬೇಕಿತ್ತು. ಟ್ರಾಮಾ ಕೇರ್ ಸೆಂಟರ್ ಆರಂಭವಾದರೆ ಈ ರೀತಿಯ ಸಮಸ್ಯೆಗೆ ಮುಕ್ತಿ ಸಿಗಲಿದೆ.

ಒಟ್ಟು ೫೦ ಹಾಸಿಗೆಗಳ ಮಿನಿ ಐಸಿಯು ಈ ಕೇಂದ್ರದಲ್ಲಿ ಬರಲಿದ್ದು, ಕಿಡ್ನಿ ಸಂಬಂಽತ ತುರ್ತು ಚಿಕಿತ್ಸಾ ಸೇವೆಗಳೂ ಸೇರಿದಂತೆ, ಅಪಘಾತ ಹಾಗೂ ತುರ್ತು ಸೇವೆಗಳು, ನ್ಯೂರಾಲಜಿ, ನ್ಯೂರೋ ಸರ್ಜನ್, ಆರ್ಥೋ, ಅನಸ್ತೇಷಿಯಾ ಸೇರಿದಂತೆ ಎಲ್ಲಾ ಮಾದರಿಗಳ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ. ಸದ್ಯ ತುರ್ತು ಸಂದರ್ಭದಲ್ಲಿ ಬಹುತೇಕ ರೋಗಿಗಳನ್ನು ಹೊರ ಜಿಲ್ಲೆಗಳಿಗೆ ಶಿಫಾರಸು ಮಾಡಲಾಗುತ್ತಿದ್ದು, ಇಂತಹ ಸಮಸ್ಯೆಗೆ ಟ್ರಾಮಾ ಕೇರ್ ಸೆಂಟರ್ ಮೂಲಕ ಪರಿಹಾರ ಸಿಗುವ ನಿರೀಕ್ಷೆಯಿದೆ.

ಕಾರ್ಡಿಯಾ, ಕಿಮೋ ಥೆರಪಿ ಕೇಂದ್ರ ಆರಂಭದ ನಿರೀಕ್ಷೆ..!:  ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದ್ರೋಗ ಘಟಕ ಆರಂಭಿಸಲು ಮಡಿಕೇರಿ ಶಾಸಕ ಡಾ.ಮಂಥರ್‌ಗೌಡ ಹಾಗೂ ಕೊಯಿಮ್ಸ್‌ನ ಹಿರಿಯ ಅಧಿಕಾರಿಗಳಿಂದ ನಿರಂತರ ಪ್ರಯತ್ನ ನಡೆದಿದೆ. ಅದರ ಪ್ರಕ್ರಿಯೆಗಳು ನಡೆಯುತ್ತಿದ್ದು, ಈ ವರ್ಷ ಹೃದ್ರೋಗ ಘಟಕ ಆರಂಭವಾಗುವ ನಿರೀಕ್ಷೆಯಿದೆ. ಇದರೊಂದಿಗೆ ಕ್ಯಾನ್ಸರ್ ರೋಗಿಗಳಿಗೆ ಅನುಕೂಲವಾಗಲು ಡೇ ಕೇರ್ ಕಿಮೋಥೆರಪಿ ಕೇಂದ್ರದ ಆರಂಭವೂ ಕೆಲ ತಾಂತ್ರಿಕ ಸಮಸ್ಯೆಯಿಂದ ವಿಳಂಬವಾಗಿದ್ದು, ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೆ ಇಲ್ಲಿಯೇ ಚಿಕಿತ್ಸೆ ಸಿಗಬೇಕೆನ್ನುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ಎರಡೂ ಪ್ರಮುಖ ಘಟಕಗಳು ಕೊಯಿಮ್ಸ್ ನಲ್ಲಿ ಈ ವರ್ಷ ಆರಂಭವಾಗಲಿವೆ.

” ಟಿಕಲ್ ಕೇರ್ ಸೆಂಟರ್ ಕಾಮಗಾರಿ ಭರದಿಂದ ಸಾಗಿದೆ. ಅಂತಿಮ ಹಂತದ ಕಾಮಗಾರಿಗಳು ಮಾತ್ರ ಬಾಕಿಯಿದ್ದು, ಸದ್ಯದಲ್ಲೇ ಮುಕ್ತಾಯವಾಗುವ ಹಂತದಲ್ಲಿವೆ. ಮಾರ್ಚ್ ವೇಳೆಗೆ ಕಾರ್ಯಾರಂಭವಾಗುವ ವಿಶ್ವಾಸವಿದೆ. ಇದರೊಂದಿಗೆ ಮಹಿಳೆಯರು ಮತ್ತು ಮಕ್ಕಳ ವಿಭಾಗದಲ್ಲಿ ರೋಗಿಗಳ ಸಂಬಂಧಿಕರು ಉಳಿದುಕೊಳ್ಳಲು ಧರ್ಮಶಾಲಾ ಆರಂಭಿಸಲು ಚಿಂತನೆ ನಡೆಸಿದ್ದು ಕೆಲಸ ಪ್ರಗತಿಯಲ್ಲಿದೆ.”

-ಡಾ.ಎ.ಜೆ.ಲೋಕೇಶ್, ಡೀನ್ ಮತ್ತು ನಿರ್ದೇಶಕರು, ಕೊಯಿಮ್ಸ್‌

ರೋಗಿಗಳ ಸಂಬಂಧಿಗಳು ಉಳಿಯಲು ಭವನ..!: 

” ಸದ್ಯ ಕೊಯಿಮ್ಸ್‌ನಲ್ಲಿ ರೋಗಿಗಳ ಸಂಬಂಧಿಗಳು ಉಳಿದುಕೊಳ್ಳಲು ಪ್ರತ್ಯೇಕ ಸ್ಥಳವಿಲ್ಲ. ಹೀಗಾಗಿ ಅವರು ಅನಿವಾರ್ಯವಾಗಿ ವಾರ್ಡ್ ಸುತ್ತಮುತ್ತ ಎಲ್ಲೆಂದರಲ್ಲಿ ಮಲಗುತ್ತಿದ್ದರು. ದೂರದ ಊರುಗಳಿಂದ ಬರುವ ರೋಗಿಗಳ ಸಂಬಂಧಿಕರಿಗೆ ಇದರಿಂದ ತೀವ್ರ ಸಮಸ್ಯೆಯಾಗುತ್ತಿದೆ. ಹೀಗಾಗಿ ಈಗ ಆಸ್ಪತ್ರೆ ಆವರಣದಲ್ಲೇ ಧರ್ಮಶಾಲಾ ಆರಂಭಿಸಲು ಕೊಯಿಮ್ಸ್ ಸಿದ್ಧತೆ ನಡೆಸಿದೆ. ಆಸ್ಪತ್ರೆ ಆವರಣದ ಮಹಿಳಾ ಮತ್ತು ಮಕ್ಕಳ ವಿಭಾಗದ ಸಮೀಪದಲ್ಲಿ ೨ ಅಂತಸ್ತಿನ ಕಟ್ಟಡವೊಂದನ್ನು ಇದಕ್ಕಾಗಿ ಮೀಸಲಿಡಲಾಗುತ್ತಿದ್ದು, ಈಗಾಗಲೇ ಕೆಲಸ ಆರಂಭಿಸಲಾಗಿದೆ. ರೋಗಿಗಳ ಸಂಬಂಧಿಕರು (ಅಟೆಂಡರ್ಸ್) ಉಳಿದುಕೊಳ್ಳಲು ಡಾರ್ಮೆಟರಿ ಮಾದರಿಯ ವ್ಯವಸ್ಥೆ ಮಾಡಲಾಗುತ್ತಿದ್ದು, ಇದು ಶೌಚಾಲಯ, ಸ್ನಾನಗೃಹಗಳನ್ನೂ ಒಳಗೊಂಡಿರಲಿದೆ.”

 

 

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

5 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

5 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

5 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

5 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

5 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

6 hours ago