Andolana originals

ಮಾರ್ಚ್‌ಗೆ ಟ್ರಾಮಾ ಸೆಂಟರ್‌ ಕಾರ್ಯಾರಂಭ

ನವೀನ್ ಡಿಸೋಜ

೪೩ ಕೋಟಿ ರೂ. ವೆಚ್ಚದ ಕಾಮಗಾರಿ; ಅಂತಿಮ ಹಂತದಲ್ಲಿ ಕೆಲಸ

ಮಡಿಕೇರಿ: ಮಾರ್ಚ್ ವೇಳೆಗೆ ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಕಾರ್ಯಾರಂಭಿಸಲಿದೆ. ಇದರೊಂದಿಗೆ ಮಹಿಳೆಯರು ಮತ್ತು ಮಕ್ಕಳ ವಿಭಾಗದಲ್ಲಿ ರೋಗಿಗಳ ಸಂಬಂಧಿಕರು ಉಳಿದುಕೊಳ್ಳಲು ಧರ್ಮಶಾಲಾ ಕಟ್ಟಡ ಸದ್ಯದಲ್ಲೇ ಸೇವೆಗೆ ಸಿದ್ಧಗೊಳ್ಳಲಿದೆ.

ಕೊಯಿಮ್ಸ್‌ನಲ್ಲಿ ೪೩ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕ್ರಿಟಿಕಲ್ ಕೇರ್ ಯುನಿಟ್‌ನ ಕಟ್ಟಡ ಕಾಮಗಾರಿ ಭರದಿಂದ ಸಾಗಿದ್ದು, ಅಂತಿಮ ಹಂತದ ಕೆಲಸಗಳು ಸಾಗಿವೆ. ಕೆಲ ಭಾಗಗಳಿಗೆ ಪ್ಲಾಸ್ಟರಿಂಗ್ ಸೇರಿದಂತೆ ಯಂತ್ರೋಪಕರಣಗಳ ಅಳವಡಿಕೆ ಕಾರ್ಯ ಆಗಬೇಕಿದೆ. ಟ್ರಾಮಾ ಕೇರ್ ಯುನಿಟ್‌ಗೆ ಬೇಕಾದ ಉಪಕರಣಗಳಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆಯೂ ನಡೆದಿದೆ ಎಂದು ಕೊಯಿಮ್ಸ್‌ನ ನಿರ್ದೇಶಕರಾದ ಡಾ.ಲೋಕೇಶ್ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್ ಅಡಿಯಲ್ಲಿ ಈ ಮಹತ್ವದ ಕೆಲಸ ಅನುಷ್ಠಾನಗೊಳ್ಳುತ್ತಿದ್ದು, ರಾಜ್ಯ ಸರ್ಕಾರದ ಪಾಲು ಈ ಯೋಜನೆಯಲ್ಲಿದೆ. ಕ್ರಿಟಿಕಲ್ ಕೇರ್ ಸೆಂಟರ್(ಟ್ರಾಮ ಸೆಂಟರ್) ಆರಂಭವಾದರೆ ಈಗಿರುವ ತುರ್ತು ಚಿಕಿತ್ಸಾ ಘಟಕ ಅಲ್ಲಿಗೆ ಸ್ಥಳಾಂತರಗೊಳ್ಳಲಿದ್ದು, ತುರ್ತು ಚಿಕಿತ್ಸೆಗಾಗಿಯೇ ಈ ಕೇಂದ್ರ ಸಂಪೂರ್ಣವಾಗಿ ಕೆಲಸ ಮಾಡಲಿದೆ. ಕೆಲವೊಮ್ಮೆ ತುರ್ತು ಶಸ್ತ್ರಚಿಕಿತ್ಸೆ ಮಾಡಬೇಕಾದಾಗ ಅದೇ ಸಮಯದಲ್ಲಿ ಆಪರೇಷನ್ ಥಿಯೇಟರ್‌ಗಳಲ್ಲಿ ಬೇರೆ ಶಸ್ತ್ರಚಿಕಿತ್ಸೆ ನಿಗದಿಯಾಗಿದ್ದರೇ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ರೋಗಿಯನ್ನು ಅನಿವಾರ್ಯವಾಗಿ ಬೇರೆ ಆಸ್ಪತ್ರೆಗೆ ರೆಫರ್ ಮಾಡಬೇಕಿತ್ತು. ಟ್ರಾಮಾ ಕೇರ್ ಸೆಂಟರ್ ಆರಂಭವಾದರೆ ಈ ರೀತಿಯ ಸಮಸ್ಯೆಗೆ ಮುಕ್ತಿ ಸಿಗಲಿದೆ.

ಒಟ್ಟು ೫೦ ಹಾಸಿಗೆಗಳ ಮಿನಿ ಐಸಿಯು ಈ ಕೇಂದ್ರದಲ್ಲಿ ಬರಲಿದ್ದು, ಕಿಡ್ನಿ ಸಂಬಂಽತ ತುರ್ತು ಚಿಕಿತ್ಸಾ ಸೇವೆಗಳೂ ಸೇರಿದಂತೆ, ಅಪಘಾತ ಹಾಗೂ ತುರ್ತು ಸೇವೆಗಳು, ನ್ಯೂರಾಲಜಿ, ನ್ಯೂರೋ ಸರ್ಜನ್, ಆರ್ಥೋ, ಅನಸ್ತೇಷಿಯಾ ಸೇರಿದಂತೆ ಎಲ್ಲಾ ಮಾದರಿಗಳ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ. ಸದ್ಯ ತುರ್ತು ಸಂದರ್ಭದಲ್ಲಿ ಬಹುತೇಕ ರೋಗಿಗಳನ್ನು ಹೊರ ಜಿಲ್ಲೆಗಳಿಗೆ ಶಿಫಾರಸು ಮಾಡಲಾಗುತ್ತಿದ್ದು, ಇಂತಹ ಸಮಸ್ಯೆಗೆ ಟ್ರಾಮಾ ಕೇರ್ ಸೆಂಟರ್ ಮೂಲಕ ಪರಿಹಾರ ಸಿಗುವ ನಿರೀಕ್ಷೆಯಿದೆ.

ಕಾರ್ಡಿಯಾ, ಕಿಮೋ ಥೆರಪಿ ಕೇಂದ್ರ ಆರಂಭದ ನಿರೀಕ್ಷೆ..!:  ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದ್ರೋಗ ಘಟಕ ಆರಂಭಿಸಲು ಮಡಿಕೇರಿ ಶಾಸಕ ಡಾ.ಮಂಥರ್‌ಗೌಡ ಹಾಗೂ ಕೊಯಿಮ್ಸ್‌ನ ಹಿರಿಯ ಅಧಿಕಾರಿಗಳಿಂದ ನಿರಂತರ ಪ್ರಯತ್ನ ನಡೆದಿದೆ. ಅದರ ಪ್ರಕ್ರಿಯೆಗಳು ನಡೆಯುತ್ತಿದ್ದು, ಈ ವರ್ಷ ಹೃದ್ರೋಗ ಘಟಕ ಆರಂಭವಾಗುವ ನಿರೀಕ್ಷೆಯಿದೆ. ಇದರೊಂದಿಗೆ ಕ್ಯಾನ್ಸರ್ ರೋಗಿಗಳಿಗೆ ಅನುಕೂಲವಾಗಲು ಡೇ ಕೇರ್ ಕಿಮೋಥೆರಪಿ ಕೇಂದ್ರದ ಆರಂಭವೂ ಕೆಲ ತಾಂತ್ರಿಕ ಸಮಸ್ಯೆಯಿಂದ ವಿಳಂಬವಾಗಿದ್ದು, ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೆ ಇಲ್ಲಿಯೇ ಚಿಕಿತ್ಸೆ ಸಿಗಬೇಕೆನ್ನುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ಎರಡೂ ಪ್ರಮುಖ ಘಟಕಗಳು ಕೊಯಿಮ್ಸ್ ನಲ್ಲಿ ಈ ವರ್ಷ ಆರಂಭವಾಗಲಿವೆ.

” ಟಿಕಲ್ ಕೇರ್ ಸೆಂಟರ್ ಕಾಮಗಾರಿ ಭರದಿಂದ ಸಾಗಿದೆ. ಅಂತಿಮ ಹಂತದ ಕಾಮಗಾರಿಗಳು ಮಾತ್ರ ಬಾಕಿಯಿದ್ದು, ಸದ್ಯದಲ್ಲೇ ಮುಕ್ತಾಯವಾಗುವ ಹಂತದಲ್ಲಿವೆ. ಮಾರ್ಚ್ ವೇಳೆಗೆ ಕಾರ್ಯಾರಂಭವಾಗುವ ವಿಶ್ವಾಸವಿದೆ. ಇದರೊಂದಿಗೆ ಮಹಿಳೆಯರು ಮತ್ತು ಮಕ್ಕಳ ವಿಭಾಗದಲ್ಲಿ ರೋಗಿಗಳ ಸಂಬಂಧಿಕರು ಉಳಿದುಕೊಳ್ಳಲು ಧರ್ಮಶಾಲಾ ಆರಂಭಿಸಲು ಚಿಂತನೆ ನಡೆಸಿದ್ದು ಕೆಲಸ ಪ್ರಗತಿಯಲ್ಲಿದೆ.”

-ಡಾ.ಎ.ಜೆ.ಲೋಕೇಶ್, ಡೀನ್ ಮತ್ತು ನಿರ್ದೇಶಕರು, ಕೊಯಿಮ್ಸ್‌

ರೋಗಿಗಳ ಸಂಬಂಧಿಗಳು ಉಳಿಯಲು ಭವನ..!: 

” ಸದ್ಯ ಕೊಯಿಮ್ಸ್‌ನಲ್ಲಿ ರೋಗಿಗಳ ಸಂಬಂಧಿಗಳು ಉಳಿದುಕೊಳ್ಳಲು ಪ್ರತ್ಯೇಕ ಸ್ಥಳವಿಲ್ಲ. ಹೀಗಾಗಿ ಅವರು ಅನಿವಾರ್ಯವಾಗಿ ವಾರ್ಡ್ ಸುತ್ತಮುತ್ತ ಎಲ್ಲೆಂದರಲ್ಲಿ ಮಲಗುತ್ತಿದ್ದರು. ದೂರದ ಊರುಗಳಿಂದ ಬರುವ ರೋಗಿಗಳ ಸಂಬಂಧಿಕರಿಗೆ ಇದರಿಂದ ತೀವ್ರ ಸಮಸ್ಯೆಯಾಗುತ್ತಿದೆ. ಹೀಗಾಗಿ ಈಗ ಆಸ್ಪತ್ರೆ ಆವರಣದಲ್ಲೇ ಧರ್ಮಶಾಲಾ ಆರಂಭಿಸಲು ಕೊಯಿಮ್ಸ್ ಸಿದ್ಧತೆ ನಡೆಸಿದೆ. ಆಸ್ಪತ್ರೆ ಆವರಣದ ಮಹಿಳಾ ಮತ್ತು ಮಕ್ಕಳ ವಿಭಾಗದ ಸಮೀಪದಲ್ಲಿ ೨ ಅಂತಸ್ತಿನ ಕಟ್ಟಡವೊಂದನ್ನು ಇದಕ್ಕಾಗಿ ಮೀಸಲಿಡಲಾಗುತ್ತಿದ್ದು, ಈಗಾಗಲೇ ಕೆಲಸ ಆರಂಭಿಸಲಾಗಿದೆ. ರೋಗಿಗಳ ಸಂಬಂಧಿಕರು (ಅಟೆಂಡರ್ಸ್) ಉಳಿದುಕೊಳ್ಳಲು ಡಾರ್ಮೆಟರಿ ಮಾದರಿಯ ವ್ಯವಸ್ಥೆ ಮಾಡಲಾಗುತ್ತಿದ್ದು, ಇದು ಶೌಚಾಲಯ, ಸ್ನಾನಗೃಹಗಳನ್ನೂ ಒಳಗೊಂಡಿರಲಿದೆ.”

 

 

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

13 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

14 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

15 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

15 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

16 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

16 hours ago