Andolana originals

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ

ದಾಸೇಗೌಡ

ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ ಬಸ್ ಕೇವಲ 3 ಬಾರಿ ಮಾತ್ರ ಸಂಚರಿಸುವುದರಿಂದ ಮತ್ತು ಸಂಜೆಯ ನಂತರ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ.

ಗ್ರಾಮಕ್ಕೆ ಪ್ರತಿದಿನ ಕೆಎಸ್‌ ಆರ್ ಟಿಸಿ ಬಸ್ಸು ಮೂರು ಬಾರಿ ಬಂದು ಹೋಗುತ್ತದೆ. ಸಂಜೆ 5.30ರ ನಂತರ ಬಸ್ ವ್ಯವಸ್ಥೆ ಇಲ್ಲ. ದುಪ್ಪಟ್ಟು ಹಣ ನೀಡಿ ಆಟೋ, ಇನ್ನಿತರ ವಾಹನಗಳನ್ನು ಅವಲಂಬಿಸಬೇಕಿದೆ ಎನ್ನುವುದು ಗ್ರಾಮಸ್ಥರ ಆರೋಪ.

ಗ್ರಾಮಕ್ಕೆ ಸರಗೂರು ಕಡೆಯಿಂದ ಸೇತುವೆ ನಿರ್ಮಾಣವಾಗಬೇಕು. ಈ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈ ಸಂಬಂಧರಗಿನ ಶಾಸಕರಾಗಲಿ, ಸಂಸದರಾಗಲಿ ಗಮನಹರಿಸಿ ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕುಎನ್ನುವುದು ಗ್ರಾಮಸ್ಥರ ಒತ್ತಾಯವಾಗಿದೆ.

ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ರಾತ್ರಿ ವೇಳೆ ತುರ್ತು ಸಂದರ್ಭಗಳಲ್ಲಿ, ಅನಾರೋಗ್ಯಕ್ಕೀಡಾದರೆ ಮಾಗುಡಿಲು ಗ್ರಾಮದಿಂದ ಸರಗೂರಿಗೆ 12 ರಿಂದ 13ಕಿ.ಮೀ. ಬಳಸಿಕೊಂಡು ಹೋಗಬೇಕಾಗಿದೆ. ಇಲ್ಲಿಂದ ಶಾಲೆ ಮಕ್ಕಳು, ಸಾರ್ವಜನಿಕರು ಸರಗೂರಿಗೆ ನದಿ ದಾಟುವ ಮೂಲಕ ಹೋದರೆ ಕೇವಲ ಒಂದೂವರೆ ಕಿಲೋ ಮೀಟರ್ ಆಗುತ್ತದೆ. ಜತೆಗೆ 30ರಿಂದ 35 ಹಳ್ಳಿಗಳ ಜನರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಸೇತುವೆಯನ್ನು ಆದಷ್ಟು ಬೇಗ ನಿರ್ಮಿಸಬೇಕೆಂಬುದು ಗ್ರಾಮಸ್ಥರ ಆಗ್ರಹ.

ಚಾಮರಾಜನಗರ, ಗುಂಡ್ಲುಪೇಟೆ, ನಂಜನಗೂಡು ಕಡೆಯಿಂದ ಎಸ್.ಬೇಗೂರು ಮಾರ್ಗ ಅಥವಾ ಹುರ, ಹುಲ್ಲಹಳ್ಳಿ ಮಾರ್ಗದಲ್ಲಿ ಧರ್ಮಸ್ಥಳ ಇನ್ನಿತರ ಕಡೆಗೆ ಹೋಗುವ ಕೆಲ ಬಸ್‌ಗಳು ಈ ಮಾರ್ಗದಲ್ಲಿ ಸಂಚರಿಸಿದರೆ ಎಸ್. ಬೇಗೂರು, ಬೀರ್ವಾಳ್, ಸರಗೂರು, ಹೆಚ್.ಡಿ.ಕೋಟೆ, ಹುಣಸೂರು ಮಾರ್ಗ ದಲ್ಲಿ ಪ್ರಯಾಣದ ಅವಧಿ, ಸಮಯ ಉಳಿಯುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಮಾಗಡಿಲು ಗ್ರಾಮಕ್ಕೆ ತನ್ನದೇ ಇತಿಹಾಸವಿದ್ದು, ಇಲ್ಲಿ ಪ್ರಸಿದ್ಧವಾದ ಶ್ರೀ ನೀಲಕಂಠೇಶ್ವರ ದೇವಸ್ಥಾನವಿದೆ. ಇದು 16ನೇ ಶತಮಾನದ ಚಾಲುಕ್ಯರ ಕಾಲದ ದೇವಸ್ಥಾನವಾಗಿದೆ. ಕಪಿಲಾ ನದಿ ಪಶ್ಚಿಮವಾಹಿನಿಯ ತೀರದಲ್ಲಿ ಈ ದೇವಸ್ಥಾನ ಇದೆ. ಇನ್ನಾದರೂ ಈ ಭಾಗಕ್ಕೆ ಆದಷ್ಟು ಬೇಗ ಸೇತುವೆ ನಿರ್ಮಿಸಬೇಕು.
-ರಾಜಣ್ಣ ಶಾಸ್ತ್ರಿ, ಮಾಗುಡಿಲು ನಿವಾಸಿ

ಆಂದೋಲನ ಡೆಸ್ಕ್

Recent Posts

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

36 mins ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

43 mins ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

2 hours ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

8 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

9 hours ago