ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ
ದಾಸೇಗೌಡ
ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್ಟಿಸಿ ಬಸ್ ಕೇವಲ 3 ಬಾರಿ ಮಾತ್ರ ಸಂಚರಿಸುವುದರಿಂದ ಮತ್ತು ಸಂಜೆಯ ನಂತರ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ.
ಗ್ರಾಮಕ್ಕೆ ಪ್ರತಿದಿನ ಕೆಎಸ್ ಆರ್ ಟಿಸಿ ಬಸ್ಸು ಮೂರು ಬಾರಿ ಬಂದು ಹೋಗುತ್ತದೆ. ಸಂಜೆ 5.30ರ ನಂತರ ಬಸ್ ವ್ಯವಸ್ಥೆ ಇಲ್ಲ. ದುಪ್ಪಟ್ಟು ಹಣ ನೀಡಿ ಆಟೋ, ಇನ್ನಿತರ ವಾಹನಗಳನ್ನು ಅವಲಂಬಿಸಬೇಕಿದೆ ಎನ್ನುವುದು ಗ್ರಾಮಸ್ಥರ ಆರೋಪ.
ಗ್ರಾಮಕ್ಕೆ ಸರಗೂರು ಕಡೆಯಿಂದ ಸೇತುವೆ ನಿರ್ಮಾಣವಾಗಬೇಕು. ಈ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈ ಸಂಬಂಧರಗಿನ ಶಾಸಕರಾಗಲಿ, ಸಂಸದರಾಗಲಿ ಗಮನಹರಿಸಿ ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕುಎನ್ನುವುದು ಗ್ರಾಮಸ್ಥರ ಒತ್ತಾಯವಾಗಿದೆ.
ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ರಾತ್ರಿ ವೇಳೆ ತುರ್ತು ಸಂದರ್ಭಗಳಲ್ಲಿ, ಅನಾರೋಗ್ಯಕ್ಕೀಡಾದರೆ ಮಾಗುಡಿಲು ಗ್ರಾಮದಿಂದ ಸರಗೂರಿಗೆ 12 ರಿಂದ 13ಕಿ.ಮೀ. ಬಳಸಿಕೊಂಡು ಹೋಗಬೇಕಾಗಿದೆ. ಇಲ್ಲಿಂದ ಶಾಲೆ ಮಕ್ಕಳು, ಸಾರ್ವಜನಿಕರು ಸರಗೂರಿಗೆ ನದಿ ದಾಟುವ ಮೂಲಕ ಹೋದರೆ ಕೇವಲ ಒಂದೂವರೆ ಕಿಲೋ ಮೀಟರ್ ಆಗುತ್ತದೆ. ಜತೆಗೆ 30ರಿಂದ 35 ಹಳ್ಳಿಗಳ ಜನರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಸೇತುವೆಯನ್ನು ಆದಷ್ಟು ಬೇಗ ನಿರ್ಮಿಸಬೇಕೆಂಬುದು ಗ್ರಾಮಸ್ಥರ ಆಗ್ರಹ.
ಚಾಮರಾಜನಗರ, ಗುಂಡ್ಲುಪೇಟೆ, ನಂಜನಗೂಡು ಕಡೆಯಿಂದ ಎಸ್.ಬೇಗೂರು ಮಾರ್ಗ ಅಥವಾ ಹುರ, ಹುಲ್ಲಹಳ್ಳಿ ಮಾರ್ಗದಲ್ಲಿ ಧರ್ಮಸ್ಥಳ ಇನ್ನಿತರ ಕಡೆಗೆ ಹೋಗುವ ಕೆಲ ಬಸ್ಗಳು ಈ ಮಾರ್ಗದಲ್ಲಿ ಸಂಚರಿಸಿದರೆ ಎಸ್. ಬೇಗೂರು, ಬೀರ್ವಾಳ್, ಸರಗೂರು, ಹೆಚ್.ಡಿ.ಕೋಟೆ, ಹುಣಸೂರು ಮಾರ್ಗ ದಲ್ಲಿ ಪ್ರಯಾಣದ ಅವಧಿ, ಸಮಯ ಉಳಿಯುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.
ಮಾಗಡಿಲು ಗ್ರಾಮಕ್ಕೆ ತನ್ನದೇ ಇತಿಹಾಸವಿದ್ದು, ಇಲ್ಲಿ ಪ್ರಸಿದ್ಧವಾದ ಶ್ರೀ ನೀಲಕಂಠೇಶ್ವರ ದೇವಸ್ಥಾನವಿದೆ. ಇದು 16ನೇ ಶತಮಾನದ ಚಾಲುಕ್ಯರ ಕಾಲದ ದೇವಸ್ಥಾನವಾಗಿದೆ. ಕಪಿಲಾ ನದಿ ಪಶ್ಚಿಮವಾಹಿನಿಯ ತೀರದಲ್ಲಿ ಈ ದೇವಸ್ಥಾನ ಇದೆ. ಇನ್ನಾದರೂ ಈ ಭಾಗಕ್ಕೆ ಆದಷ್ಟು ಬೇಗ ಸೇತುವೆ ನಿರ್ಮಿಸಬೇಕು.
-ರಾಜಣ್ಣ ಶಾಸ್ತ್ರಿ, ಮಾಗುಡಿಲು ನಿವಾಸಿ
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…