Andolana originals

ಇರುವ ಇಬ್ಬರು ಅಧಿಕಾರಿಗಳಿಗೆ ಅಧಿಕ ಕಾರ್ಯಭಾರ

ಮಂಜು ಕೋಟೆ

ತಾರಕ, ಹೆಬ್ಬಾಳ ಜಲಾಶಯಗಳ ನಾಲಾ ವ್ಯಾಪ್ತಿಯಲ್ಲಿ ೬ ಮಂದಿ ಅಧಿಕಾರಿಗಳಿಲ್ಲದೆ ಸಮಸ್ಯೆ

ಎಚ್.ಡಿ.ಕೋಟೆ: ತಾಲ್ಲೂಕಿನ ಜೀವನದಿ ತಾರಕ ಜಲಾಶಯ ವಾರದಲ್ಲಿ ಎರಡು ಬಾರಿ ತುಂಬಿ ರೈತರಲ್ಲಿ ಸಂತಸ ಮೂಡಿಸಿದ್ದರೂ ಜಲಾಶಯದ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಬೇಕಾಗಿದ್ದ ೬ ಮಂದಿ ಅಧಿಕಾರಿಗಳೇ ಇಲ್ಲದಿರುವುದರಿಂದ ಇರುವ ಇಬ್ಬರು ಕಾರ್ಯದ ಒತ್ತಡದಿಂದ ಕಂಗಾಲಾಗಿದ್ದಾರೆ.

ತಾಲ್ಲೂಕಿನಲ್ಲಿ ಕಬಿನಿ, ನುಗು, ತಾರಕ, ಹೆಬ್ಬಾಳ ಈ ನಾಲ್ಕು ಜಲಾಶಯಗಳಿದ್ದರೂತಾಲ್ಲೂಕಿನ ರೈತರಿಗೆ ತಾರಕ ಮತ್ತು ಹೆಬ್ಬಾಳದ ಜಲಾಶಯ ಮಾತ್ರ ಉಪಯುಕ್ತವಾಗಿವೆ. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಈ ಎರಡೂ ಜಲಾಶಯಗಳು ಭರ್ತಿಯಾಗಿ ಭಾರಿ ಪ್ರಮಾಣದ ನೀರನ್ನು ಇದೇ ವಾರದಲ್ಲಿ ಎರಡು ಬಾರಿ ಹೊರಬಿಡಲಾಗಿತ್ತು.

ತಾರಕ ಮತ್ತು ಹೆಬ್ಬಾಳ ಜಲಾಶಯಗಳಿಂದ ರೈತರ ೧೫,೦೦೦ ಎಕರೆ ಪ್ರದೇಶದ ಜಮೀನುಗಳಿಗೆ ನೀರು ಬಿಡಲು ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ ಈಗ ಇರುವ ಇಬ್ಬರು ಅಧಿಕಾರಿಗಳಾದ ಎಇಇ ನಟಶೇಖರ ಮೂರ್ತಿ, ಜೆಇ ಗೌಶಿಯ ಅವರು ಎರಡೂ ಜಲಾಶಯ ಗಳು ಮತ್ತು ನಾಲೆಗಳ ವ್ಯಾಪ್ತಿಯ ಪ್ರದೇಶದಲ್ಲಿ ಕೆಲಸ ನಿರ್ವಹಿಸಲು ಹರಸಾಹಸ ಪಡುವಂತಾಗಿದೆ.

ತಾರಕ ಜಲಾಶಯದ ಕಚೇರಿಯ ವ್ಯಾಪ್ತಿಯಲ್ಲಿ ೨ ಎಇ, ೪ ಜೆಇಗಳ ಹುದ್ದೆ ಖಾಲಿಯಾಗಿರು ವುದರಿಂದ ಹಾಲಿ ಇರುವ ಇಬ್ಬರು ಅಧಿಕಾರಿಗಳು ಜಲಾಶಯದ ಅಥವಾ ನಾಲೆಗಳ ಕೆಲಸವನ್ನು ಎಷ್ಟರಮಟ್ಟಿಗೆ ನಿಭಾಯಿ ಸಲು ಸಾಧ್ಯ ಎಂಬ ಪ್ರಶ್ನೆ ಉದ್ಭವಿಸಿದೆ. ಕೇರಳದ ವಯನಾಡು ಮತ್ತು ಮಡಿಕೇರಿ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಲಾಶಯಕ್ಕೆ ಯಾವ ಕ್ಷಣದಲ್ಲಾದರೂ ಒಳಹರಿವಿನ ಪ್ರಮಾಣ ಹೆಚ್ಚಾಗಲಿದ್ದು, ಜಲಾಶಯದ ಹಿತದೃಷ್ಟಿಯಿಂದ ಈ ಅಧಿಕಾರಿಗಳು ಅಲ್ಲೇ ವಾಸ್ತವ್ಯ ಮಾಡಬೇಕಿದೆ. ಶೀಘ್ರದಲ್ಲೇ ನಾಲೆಗಳ ಮೂಲಕ ರೈತರ ಜಮೀನುಗಳಿಗೆ ನೀರು ಹರಿಸುವುದರಿಂದ ಈ ಭಾಗದಲ್ಲಿ ಉಂಟಾಗುವ ಸಮಸ್ಯೆಗಳನ್ನು ಬಗೆಹರಿಸಿ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಹೋಗುವ ರೀತಿಯಲ್ಲಿ ಕೆಲಸವನ್ನು ಈ ಅಧಿಕಾರಿಗಳೇ ಮಾಡಬೇಕಿದೆ.

ಜಲಾಶಯ ಮತ್ತು ರೈತರ ಜಮೀನುಗಳ ನಾಲೆಗಳ ಕೆಲಸದ ನಿರ್ವಹಣೆಯನ್ನು ಒಟ್ಟಿಗೆ ನಿರ್ವಹಿಸಿದರೆ ಸಮರ್ಪಕವಾಗಿ ಕೆಲಸ ನಡೆಯದೆ ಯಾವುದಾದರೂ ಸಮಸ್ಯೆಗಳು ಎದುರಾಗಲಿದೆ ಎಂಬ ಆತಂಕ ಉಂಟಾಗಿದೆ. ಆದ್ದರಿಂದ ತಾರಕ ಮತ್ತು ಹೆಬ್ಬಾಳ ಜಲಾಶಯಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಿ ರೈತರ ಮತ್ತು ಜಲಾಶಯದ ಹಿತ ಕಾಪಾಡಲು ಮೇಲಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಬೇಕಿದೆ.

” ಈ ಸಾಲಿನಲ್ಲಿ ಜುಲೈ ತಿಂಗಳಿನಲ್ಲೇ ಜಲಾಶಯ ಭರ್ತಿಯಾಗಿದ್ದು, ತಾರಕ ಬಲದಂಡೆ ಮತ್ತು ಎಡದಂಡೆ ನಾಲೆ ಹಾಗೂ ಹೆಬ್ಬಾಳ ಎಡದಂಡೆ ನಾಲೆ ವ್ಯಾಪ್ತಿಯ ಪೂರ್ಣ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಉದ್ದೇಶಿಸಲಾಗಿದೆ. ಕಚೇರಿಯಲ್ಲಿ ಇಂಜಿನಿಯರ್, ಸಿಬ್ಬಂದಿ ಕೊರತೆ ಇದ್ದರೂ ಇರುವ ಅಧಿಕಾರಿಗಳು ಶ್ರಮವಹಿಸಿ ರೈತರಸಹಕಾರದೊಂದಿಗೆ ನೀರು ಹರಿಸಲು ಉದ್ದೇಶಿಸಲಾಗಿದೆ. ಲಭ್ಯವಿರುವ ಅನುದಾನದಲ್ಲೇ ಅಗತ್ಯ ತುರ್ತು ಕಾಮಗಾರಿಗಳನ್ನು ಕೈಗೊಂಡು ನೀರು ಸರಬರಾಜು ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ.”

-ನಟಶೇಖರಮೂರ್ತಿ, ಎಇಇ, ತಾರಕ ಮತ್ತು ಹೆಬ್ಬಾಳ ಜಲಾಶಯ, ಕೋಟೆ 

ಆಂದೋಲನ ಡೆಸ್ಕ್

Recent Posts

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…

27 mins ago

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್‌…

1 hour ago

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

5 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

5 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

5 hours ago