ಮೂಗು ಮುಚ್ಚಿಕೊಂಡು ಸಂಚರಿಸುವ ನಿವಾಸಿಗಳು; ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ
• ಸಿಂಧುವಳ್ಳಿ ಸುಧೀರ
ಮೈಸೂರು: ದಸರಾ ಮಹೋತ್ಸವದ ವೇಳೆ ಎಲ್ಲೆಡೆ ಸ್ವಚ್ಛತೆ ಸಾಮಾನ್ಯ… ಬಡಾವಣೆಗಳು, ರಸ್ತೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲಾಗುತ್ತದೆ. ಆದರೆ, ಅಗ್ರಹಾರದ ಬಸವೇಶ್ವರ ಮುಖ್ಯರಸ್ತೆಯ 12ನೇ ಕ್ರಾಸ್ ಬಳಿಯ ರಸ್ತೆ ಮಾತ್ರ ದಸರಾ ಮಹೋತ್ಸವದ ವೇಳೆಯೂ ಸ್ವಚ್ಛತೆ ಕಾಣದೆ ಅಶುಚಿತ್ವದ ಗೂಡಾಗಿದೆ. ಎಲ್ಲೆಂದರಲ್ಲಿ ಕಸ ಕಡ್ಡಿಗಳು ಹರಡಿಕೊಂಡು ದುರ್ನಾತ ಬೀರುತ್ತಿವೆ.
ನಾಡಹಬ್ಬ ದಸರಾ ಬಂದರೂ ಅಷ್ಟೇ, ಯಾವುದೇ ಹಬ್ಬವಾದರೂ ಅಷ್ಟೇ ಸ್ವಚ್ಛತೆ ಎಂಬುದು ಅಷ್ಟಕ್ಕಷ್ಟೇ ಎಂಬಂತಾಗಿದೆ. ಹಸಿ ಮತ್ತು ಒಣ ಕಸಕ್ಕೆ ಮಳೆ ನೀರು ಬಿದ್ದ ಪರಿಣಾಮ ತ್ಯಾಜ್ಯಗಳೆಲ್ಲ ಕೊಳೆತು ನಿವಾಸಿಗಳು-ಬೈಕ್ ಸವಾರರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅಗ್ರಹಾರದ ವಿವಿಧ ರಸ್ತೆಗಳ ನಿವಾಸಿಗಳು ಬೈಕ್ಗಳಲ್ಲಿ, ಪ್ಲಾಸ್ಟಿಕ್ ಕವರ್ ಮತ್ತು ಚೀಲಗಳಲ್ಲಿ ಕಸ ತುಂಬಿಕೊಂಡು ಬಂದು ಇಲ್ಲಿ ಸುರಿದು ಹೋಗುತ್ತಿದ್ದಾರೆ. ನಗರಪಾಲಿಕೆ ಸಿಬ್ಬಂದಿ ಬೆಳಿಗ್ಗೆ ಕಸ ವಿಲೇವಾರಿ ಮಾಡಿದರೆ, ರಾತ್ರಿ ವೇಳೆಗೆ ಮತ್ತಷ್ಟು ಕಸ ರಸ್ತೆಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುತ್ತದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಇದೇ ಗೋಳಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಹಬ್ಬ ಬಂತೆಂದರೆ ಮನೆಯಲ್ಲಿ ಅಳಿದುಳಿದ ಆಹಾರ, ಬಳಸಿದ ಬಾಳೆ ಎಲೆ, ಪ್ಲಾಸ್ಟಿಕ್ ಲೋಟ ಮತ್ತು ಎಲೆ, ಹಳೆಯ ಬಟ್ಟೆ ಬರೆ, ಹಾಸಿಗೆ ಹೀಗೆ ಗೃಹಬಳಕೆಯ ಎಲ್ಲ ತ್ಯಾಜ್ಯಗಳನ್ನೂ ಈ ರಸ್ತೆಯ ಅಂಚಿನಲ್ಲಿಯೇ ತಂದು ಬಿಸಾಡಿ ಹೋಗುತ್ತಿದ್ದಾರೆ. ಇದರಿಂದ ಅಶುಚಿತ್ವದ ಜತೆಗೆ ಸಾಂಕ್ರಾಮಿಕ ಕಾಯಿಲೆಗಳೂ ಹರಡುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಎಲ್ಲಿಂದಲೋ ಬರುವ ಜನರು ಕಸ ತಂದು ಇಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ನಗರಪಾಲಿಕೆಯವರು ಸ್ವಚ್ಛಗೊಳಿಸಿದರೂ ರಾತ್ರೋರಾತ್ರಿ ಕಸದ ರಾಶಿ ಈ ರಸ್ತೆಯಲ್ಲಿ ತುಂಬಿ ತುಳುಕುತ್ತದೆ. ಆದ್ದರಿಂದ ಈ ರಸ್ತೆಯಲ್ಲಿ ಕಸ ಹಾಕದ ರೀತಿ ಶಾಶ್ವತವಾದ ಕ್ರಮವನ್ನು ಕೈಗೊಳ್ಳಬೇಕು.
-ನಾಗೇಶ್, ಸ್ಥಳೀಯ ನಿವಾಸಿ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…