Andolana originals

ದುರ್ನಾತದ ಮಾರ್ಗ ಅಗ್ರಹಾರದ ಬಸವೇಶ್ವರ ರಸ್ತೆ

ಮೂಗು ಮುಚ್ಚಿಕೊಂಡು ಸಂಚರಿಸುವ ನಿವಾಸಿಗಳು; ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ
• ಸಿಂಧುವಳ್ಳಿ ಸುಧೀರ

ಮೈಸೂರು: ದಸರಾ ಮಹೋತ್ಸವದ ವೇಳೆ ಎಲ್ಲೆಡೆ ಸ್ವಚ್ಛತೆ ಸಾಮಾನ್ಯ… ಬಡಾವಣೆಗಳು, ರಸ್ತೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲಾಗುತ್ತದೆ. ಆದರೆ, ಅಗ್ರಹಾರದ ಬಸವೇಶ್ವರ ಮುಖ್ಯರಸ್ತೆಯ 12ನೇ ಕ್ರಾಸ್ ಬಳಿಯ ರಸ್ತೆ ಮಾತ್ರ ದಸರಾ ಮಹೋತ್ಸವದ ವೇಳೆಯೂ ಸ್ವಚ್ಛತೆ ಕಾಣದೆ ಅಶುಚಿತ್ವದ ಗೂಡಾಗಿದೆ. ಎಲ್ಲೆಂದರಲ್ಲಿ ಕಸ ಕಡ್ಡಿಗಳು ಹರಡಿಕೊಂಡು ದುರ್ನಾತ ಬೀರುತ್ತಿವೆ.

ನಾಡಹಬ್ಬ ದಸರಾ ಬಂದರೂ ಅಷ್ಟೇ, ಯಾವುದೇ ಹಬ್ಬವಾದರೂ ಅಷ್ಟೇ ಸ್ವಚ್ಛತೆ ಎಂಬುದು ಅಷ್ಟಕ್ಕಷ್ಟೇ ಎಂಬಂತಾಗಿದೆ. ಹಸಿ ಮತ್ತು ಒಣ ಕಸಕ್ಕೆ ಮಳೆ ನೀರು ಬಿದ್ದ ಪರಿಣಾಮ ತ್ಯಾಜ್ಯಗಳೆಲ್ಲ ಕೊಳೆತು ನಿವಾಸಿಗಳು-ಬೈಕ್ ಸವಾರರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಅಗ್ರಹಾರದ ವಿವಿಧ ರಸ್ತೆಗಳ ನಿವಾಸಿಗಳು ಬೈಕ್‌ಗಳಲ್ಲಿ, ಪ್ಲಾಸ್ಟಿಕ್ ಕವರ್ ಮತ್ತು ಚೀಲಗಳಲ್ಲಿ ಕಸ ತುಂಬಿಕೊಂಡು ಬಂದು ಇಲ್ಲಿ ಸುರಿದು ಹೋಗುತ್ತಿದ್ದಾರೆ. ನಗರಪಾಲಿಕೆ ಸಿಬ್ಬಂದಿ ಬೆಳಿಗ್ಗೆ ಕಸ ವಿಲೇವಾರಿ ಮಾಡಿದರೆ, ರಾತ್ರಿ ವೇಳೆಗೆ ಮತ್ತಷ್ಟು ಕಸ ರಸ್ತೆಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುತ್ತದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಇದೇ ಗೋಳಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಹಬ್ಬ ಬಂತೆಂದರೆ ಮನೆಯಲ್ಲಿ ಅಳಿದುಳಿದ ಆಹಾರ, ಬಳಸಿದ ಬಾಳೆ ಎಲೆ, ಪ್ಲಾಸ್ಟಿಕ್ ಲೋಟ ಮತ್ತು ಎಲೆ, ಹಳೆಯ ಬಟ್ಟೆ ಬರೆ, ಹಾಸಿಗೆ ಹೀಗೆ ಗೃಹಬಳಕೆಯ ಎಲ್ಲ ತ್ಯಾಜ್ಯಗಳನ್ನೂ ಈ ರಸ್ತೆಯ ಅಂಚಿನಲ್ಲಿಯೇ ತಂದು ಬಿಸಾಡಿ ಹೋಗುತ್ತಿದ್ದಾರೆ. ಇದರಿಂದ ಅಶುಚಿತ್ವದ ಜತೆಗೆ ಸಾಂಕ್ರಾಮಿಕ ಕಾಯಿಲೆಗಳೂ ಹರಡುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಎಲ್ಲಿಂದಲೋ ಬರುವ ಜನರು ಕಸ ತಂದು ಇಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ನಗರಪಾಲಿಕೆಯವರು ಸ್ವಚ್ಛಗೊಳಿಸಿದರೂ ರಾತ್ರೋರಾತ್ರಿ ಕಸದ ರಾಶಿ ಈ ರಸ್ತೆಯಲ್ಲಿ ತುಂಬಿ ತುಳುಕುತ್ತದೆ. ಆದ್ದರಿಂದ ಈ ರಸ್ತೆಯಲ್ಲಿ ಕಸ ಹಾಕದ ರೀತಿ ಶಾಶ್ವತವಾದ ಕ್ರಮವನ್ನು ಕೈಗೊಳ್ಳಬೇಕು.
-ನಾಗೇಶ್, ಸ್ಥಳೀಯ ನಿವಾಸಿ.

ಆಂದೋಲನ ಡೆಸ್ಕ್

Recent Posts

ಶಿವಾಜಿ ಮುಸ್ಲಿಂರ ವಿರೋಧಿಯಾಗಿರಲಿಲ್ಲ :ಸಚಿವ ಕಾರ್ಮಿಕ ಸಂತೋಷ ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

30 mins ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…

1 hour ago

ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…

1 hour ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

3 hours ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

4 hours ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

6 hours ago