Andolana originals

ದುರ್ನಾತದ ಮಾರ್ಗ ಅಗ್ರಹಾರದ ಬಸವೇಶ್ವರ ರಸ್ತೆ

ಮೂಗು ಮುಚ್ಚಿಕೊಂಡು ಸಂಚರಿಸುವ ನಿವಾಸಿಗಳು; ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ
• ಸಿಂಧುವಳ್ಳಿ ಸುಧೀರ

ಮೈಸೂರು: ದಸರಾ ಮಹೋತ್ಸವದ ವೇಳೆ ಎಲ್ಲೆಡೆ ಸ್ವಚ್ಛತೆ ಸಾಮಾನ್ಯ… ಬಡಾವಣೆಗಳು, ರಸ್ತೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲಾಗುತ್ತದೆ. ಆದರೆ, ಅಗ್ರಹಾರದ ಬಸವೇಶ್ವರ ಮುಖ್ಯರಸ್ತೆಯ 12ನೇ ಕ್ರಾಸ್ ಬಳಿಯ ರಸ್ತೆ ಮಾತ್ರ ದಸರಾ ಮಹೋತ್ಸವದ ವೇಳೆಯೂ ಸ್ವಚ್ಛತೆ ಕಾಣದೆ ಅಶುಚಿತ್ವದ ಗೂಡಾಗಿದೆ. ಎಲ್ಲೆಂದರಲ್ಲಿ ಕಸ ಕಡ್ಡಿಗಳು ಹರಡಿಕೊಂಡು ದುರ್ನಾತ ಬೀರುತ್ತಿವೆ.

ನಾಡಹಬ್ಬ ದಸರಾ ಬಂದರೂ ಅಷ್ಟೇ, ಯಾವುದೇ ಹಬ್ಬವಾದರೂ ಅಷ್ಟೇ ಸ್ವಚ್ಛತೆ ಎಂಬುದು ಅಷ್ಟಕ್ಕಷ್ಟೇ ಎಂಬಂತಾಗಿದೆ. ಹಸಿ ಮತ್ತು ಒಣ ಕಸಕ್ಕೆ ಮಳೆ ನೀರು ಬಿದ್ದ ಪರಿಣಾಮ ತ್ಯಾಜ್ಯಗಳೆಲ್ಲ ಕೊಳೆತು ನಿವಾಸಿಗಳು-ಬೈಕ್ ಸವಾರರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಅಗ್ರಹಾರದ ವಿವಿಧ ರಸ್ತೆಗಳ ನಿವಾಸಿಗಳು ಬೈಕ್‌ಗಳಲ್ಲಿ, ಪ್ಲಾಸ್ಟಿಕ್ ಕವರ್ ಮತ್ತು ಚೀಲಗಳಲ್ಲಿ ಕಸ ತುಂಬಿಕೊಂಡು ಬಂದು ಇಲ್ಲಿ ಸುರಿದು ಹೋಗುತ್ತಿದ್ದಾರೆ. ನಗರಪಾಲಿಕೆ ಸಿಬ್ಬಂದಿ ಬೆಳಿಗ್ಗೆ ಕಸ ವಿಲೇವಾರಿ ಮಾಡಿದರೆ, ರಾತ್ರಿ ವೇಳೆಗೆ ಮತ್ತಷ್ಟು ಕಸ ರಸ್ತೆಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುತ್ತದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಇದೇ ಗೋಳಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಹಬ್ಬ ಬಂತೆಂದರೆ ಮನೆಯಲ್ಲಿ ಅಳಿದುಳಿದ ಆಹಾರ, ಬಳಸಿದ ಬಾಳೆ ಎಲೆ, ಪ್ಲಾಸ್ಟಿಕ್ ಲೋಟ ಮತ್ತು ಎಲೆ, ಹಳೆಯ ಬಟ್ಟೆ ಬರೆ, ಹಾಸಿಗೆ ಹೀಗೆ ಗೃಹಬಳಕೆಯ ಎಲ್ಲ ತ್ಯಾಜ್ಯಗಳನ್ನೂ ಈ ರಸ್ತೆಯ ಅಂಚಿನಲ್ಲಿಯೇ ತಂದು ಬಿಸಾಡಿ ಹೋಗುತ್ತಿದ್ದಾರೆ. ಇದರಿಂದ ಅಶುಚಿತ್ವದ ಜತೆಗೆ ಸಾಂಕ್ರಾಮಿಕ ಕಾಯಿಲೆಗಳೂ ಹರಡುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಎಲ್ಲಿಂದಲೋ ಬರುವ ಜನರು ಕಸ ತಂದು ಇಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ನಗರಪಾಲಿಕೆಯವರು ಸ್ವಚ್ಛಗೊಳಿಸಿದರೂ ರಾತ್ರೋರಾತ್ರಿ ಕಸದ ರಾಶಿ ಈ ರಸ್ತೆಯಲ್ಲಿ ತುಂಬಿ ತುಳುಕುತ್ತದೆ. ಆದ್ದರಿಂದ ಈ ರಸ್ತೆಯಲ್ಲಿ ಕಸ ಹಾಕದ ರೀತಿ ಶಾಶ್ವತವಾದ ಕ್ರಮವನ್ನು ಕೈಗೊಳ್ಳಬೇಕು.
-ನಾಗೇಶ್, ಸ್ಥಳೀಯ ನಿವಾಸಿ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago