ಮೂಗು ಮುಚ್ಚಿಕೊಂಡು ಸಂಚರಿಸುವ ನಿವಾಸಿಗಳು; ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ
• ಸಿಂಧುವಳ್ಳಿ ಸುಧೀರ
ಮೈಸೂರು: ದಸರಾ ಮಹೋತ್ಸವದ ವೇಳೆ ಎಲ್ಲೆಡೆ ಸ್ವಚ್ಛತೆ ಸಾಮಾನ್ಯ… ಬಡಾವಣೆಗಳು, ರಸ್ತೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲಾಗುತ್ತದೆ. ಆದರೆ, ಅಗ್ರಹಾರದ ಬಸವೇಶ್ವರ ಮುಖ್ಯರಸ್ತೆಯ 12ನೇ ಕ್ರಾಸ್ ಬಳಿಯ ರಸ್ತೆ ಮಾತ್ರ ದಸರಾ ಮಹೋತ್ಸವದ ವೇಳೆಯೂ ಸ್ವಚ್ಛತೆ ಕಾಣದೆ ಅಶುಚಿತ್ವದ ಗೂಡಾಗಿದೆ. ಎಲ್ಲೆಂದರಲ್ಲಿ ಕಸ ಕಡ್ಡಿಗಳು ಹರಡಿಕೊಂಡು ದುರ್ನಾತ ಬೀರುತ್ತಿವೆ.
ನಾಡಹಬ್ಬ ದಸರಾ ಬಂದರೂ ಅಷ್ಟೇ, ಯಾವುದೇ ಹಬ್ಬವಾದರೂ ಅಷ್ಟೇ ಸ್ವಚ್ಛತೆ ಎಂಬುದು ಅಷ್ಟಕ್ಕಷ್ಟೇ ಎಂಬಂತಾಗಿದೆ. ಹಸಿ ಮತ್ತು ಒಣ ಕಸಕ್ಕೆ ಮಳೆ ನೀರು ಬಿದ್ದ ಪರಿಣಾಮ ತ್ಯಾಜ್ಯಗಳೆಲ್ಲ ಕೊಳೆತು ನಿವಾಸಿಗಳು-ಬೈಕ್ ಸವಾರರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅಗ್ರಹಾರದ ವಿವಿಧ ರಸ್ತೆಗಳ ನಿವಾಸಿಗಳು ಬೈಕ್ಗಳಲ್ಲಿ, ಪ್ಲಾಸ್ಟಿಕ್ ಕವರ್ ಮತ್ತು ಚೀಲಗಳಲ್ಲಿ ಕಸ ತುಂಬಿಕೊಂಡು ಬಂದು ಇಲ್ಲಿ ಸುರಿದು ಹೋಗುತ್ತಿದ್ದಾರೆ. ನಗರಪಾಲಿಕೆ ಸಿಬ್ಬಂದಿ ಬೆಳಿಗ್ಗೆ ಕಸ ವಿಲೇವಾರಿ ಮಾಡಿದರೆ, ರಾತ್ರಿ ವೇಳೆಗೆ ಮತ್ತಷ್ಟು ಕಸ ರಸ್ತೆಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುತ್ತದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಇದೇ ಗೋಳಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಹಬ್ಬ ಬಂತೆಂದರೆ ಮನೆಯಲ್ಲಿ ಅಳಿದುಳಿದ ಆಹಾರ, ಬಳಸಿದ ಬಾಳೆ ಎಲೆ, ಪ್ಲಾಸ್ಟಿಕ್ ಲೋಟ ಮತ್ತು ಎಲೆ, ಹಳೆಯ ಬಟ್ಟೆ ಬರೆ, ಹಾಸಿಗೆ ಹೀಗೆ ಗೃಹಬಳಕೆಯ ಎಲ್ಲ ತ್ಯಾಜ್ಯಗಳನ್ನೂ ಈ ರಸ್ತೆಯ ಅಂಚಿನಲ್ಲಿಯೇ ತಂದು ಬಿಸಾಡಿ ಹೋಗುತ್ತಿದ್ದಾರೆ. ಇದರಿಂದ ಅಶುಚಿತ್ವದ ಜತೆಗೆ ಸಾಂಕ್ರಾಮಿಕ ಕಾಯಿಲೆಗಳೂ ಹರಡುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಎಲ್ಲಿಂದಲೋ ಬರುವ ಜನರು ಕಸ ತಂದು ಇಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ನಗರಪಾಲಿಕೆಯವರು ಸ್ವಚ್ಛಗೊಳಿಸಿದರೂ ರಾತ್ರೋರಾತ್ರಿ ಕಸದ ರಾಶಿ ಈ ರಸ್ತೆಯಲ್ಲಿ ತುಂಬಿ ತುಳುಕುತ್ತದೆ. ಆದ್ದರಿಂದ ಈ ರಸ್ತೆಯಲ್ಲಿ ಕಸ ಹಾಕದ ರೀತಿ ಶಾಶ್ವತವಾದ ಕ್ರಮವನ್ನು ಕೈಗೊಳ್ಳಬೇಕು.
-ನಾಗೇಶ್, ಸ್ಥಳೀಯ ನಿವಾಸಿ.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…