mysurru
ಮೈಸೂರು: ಮಳೆಯ ಸಂದರ್ಭದಲ್ಲಿ ಪ್ರಮುಖ ವಾಗಿ ಒಳಚರಂಡಿ ವ್ಯವಸ್ಥೆಯಲ್ಲಿನ ತೊಂದರೆಗಳಿಗೆ ಸಂಬಂಧಿಸಿದಂತೆ ಹೆಚ್ಚು ದೂರುಗಳು ದಾಖಲಾಗುತ್ತವೆ. ಇದಕ್ಕಾಗಿಯೇ ನಗರಪಾಲಿಕೆ ಯಲ್ಲಿ ಪ್ರತ್ಯೇಕ ಯುಜಿಡಿ ವಿಭಾಗವಿದೆ. ಇಲ್ಲಿ ಸುಮಾರು ೧೨ಕ್ಕೂ ಹೆಚ್ಚು ಮಂದಿ ಕಾರ್ಯ ನಿರ್ವಹಿಸುತ್ತಾರೆ. ಅವರಲ್ಲಿ ಕಾರ್ಯಪಾಲಕ ಇಂಜಿನಿಯರ್ ಅಶ್ವಿನ್ ಕೂಡ ಒಬ್ಬರು. ಮಳೆಯ ಸಂದರ್ಭದಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅವರು ‘ಆಂದೋಲನ’ ದಿನಪತ್ರಿಕೆಯೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ಆಂದೋಲನ: ಮಳೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನನುಕೂಲವಾಗದಂತೆ ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೀರಿ?
ಅಶ್ವಿನ್: ಮಳೆಯ ಸಂದರ್ಭದಲ್ಲಿ ಒಳಚರಂಡಿ ಸಮಸ್ಯೆಗಳಿಗೆ ಸಂಬಂಽಸಿದಂತೆ ನಿತ್ಯ ಸರಾಸರಿ ೩೦ ದೂರುಗಳು ದಾಖಲಾಗುತ್ತವೆ. ದೂರು ಬಂದ ತಕ್ಷಣವೇ ನಮ್ಮ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸಮಸ್ಯೆ ಪರಿಹರಿಸುತ್ತಾರೆ.
ಆಂದೋಲನ: ಸಮಸ್ಯೆ ಸರಿಪಡಿಸಲು ಅಗತ್ಯ ಯಂತ್ರೋಪಕರಣಗಳು ಲಭ್ಯವಿವೆಯೇ?
ಅಶ್ವಿನ್: ಹೌದು, ನಮ್ಮಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲು ೧೬ ಜೆಟ್ಟಿಂಗ್ ಯಂತ್ರಗಳು, ೩೫ ಜೆಸಿಬಿ ಯಂತ್ರಗಳಿವೆ. ಮಳೆಯ ಸಂದರ್ಭದಲ್ಲಿ ರಾತ್ರಿ ಪಾಳಿಯಲ್ಲಿಯೂ ನಮ್ಮ ಸಿಬ್ಬಂದಿ ಕೆಲಸ ನಿರ್ವಹಿಸುತ್ತಾರೆ.
ಆಂದೋಲನ: ಮಳೆಗಾಲ ಆರಂಭಕ್ಕೂ ಮುನ್ನ ಯಾವ ರೀತಿ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತೀರಿ? ಅಶ್ವಿನ್: ಮಳೆಗಾಲ ಆರಂಭಕ್ಕೂ ಎರಡು ತಿಂಗಳು ಮುಂಚೆಯೇ ದೊಡ್ಡ ಹಾಗೂ ಸಣ್ಣ ಮೋರಿಗಳಲ್ಲಿ ಹೂಳು ಎತ್ತುವ ಕೆಲಸ ಮಾಡಲಾಗುತ್ತದೆ. ಇದರ ಜೊತೆಗೆ ಬಡಾವಣೆಗಳಲ್ಲಿಯೂ ಮೋರಿಗಳು ಹಾಗೂ ಒಳ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತದೆ.
ಆಂದೋಲನ: ನಗರಪಾಲಿಕೆ ವತಿಯಿಂದ ಹೆಚ್ಚುವರಿ ಯಂತ್ರಗಳ ಖರೀದಿ ಆಗುತ್ತಿದೆಯೇ? ಅಶ್ವಿನ್: ಹೌದು. ನಗರ ಹೆಚ್ಚು ಹೆಚ್ಚು ಬೆಳವಣಿಗೆ ಯಾಗುತ್ತಿದೆ. ಈಗಿರುವ ಜೊತೆಗೆ ಮತ್ತಷ್ಟು ಉಪ ಕರಣಗಳ ಅಗತ್ಯವಿದೆ. ಹೀಗಾಗಿ ೬ ಜೆಟ್ಟಿಂಗ್ ಯಂತ್ರಗಳ ಖರೀದಿಗೆ ಹಣ ಬಿಡುಗಡೆಯಾಗಿದೆ. ಜೆಸಿಬಿ ಯತ್ರಗಳ ಖರೀದೀಗೂ ಚಿಂತನೆ ನಡೆದಿದೆ. ಹೀಗಾದಲ್ಲಿ ಮುಂದಿನ ದಿನಗಳಲ್ಲಿ ಸಮಸ್ಯೆ ಕಡಿಮೆಯಾಗುತ್ತದೆ.
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…