Andolana originals

ಒಳಚರಂಡಿ ಸಮಸ್ಯೆ : ದೂರು ಬಂದ್ರೆ ತಕ್ಷಣವೇ ಕ್ರಮ

ಮೈಸೂರು: ಮಳೆಯ ಸಂದರ್ಭದಲ್ಲಿ ಪ್ರಮುಖ ವಾಗಿ ಒಳಚರಂಡಿ ವ್ಯವಸ್ಥೆಯಲ್ಲಿನ ತೊಂದರೆಗಳಿಗೆ ಸಂಬಂಧಿಸಿದಂತೆ ಹೆಚ್ಚು ದೂರುಗಳು ದಾಖಲಾಗುತ್ತವೆ. ಇದಕ್ಕಾಗಿಯೇ ನಗರಪಾಲಿಕೆ ಯಲ್ಲಿ ಪ್ರತ್ಯೇಕ ಯುಜಿಡಿ ವಿಭಾಗವಿದೆ. ಇಲ್ಲಿ ಸುಮಾರು ೧೨ಕ್ಕೂ ಹೆಚ್ಚು ಮಂದಿ ಕಾರ್ಯ ನಿರ್ವಹಿಸುತ್ತಾರೆ. ಅವರಲ್ಲಿ ಕಾರ್ಯಪಾಲಕ ಇಂಜಿನಿಯರ್ ಅಶ್ವಿನ್ ಕೂಡ ಒಬ್ಬರು. ಮಳೆಯ ಸಂದರ್ಭದಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅವರು ‘ಆಂದೋಲನ’ ದಿನಪತ್ರಿಕೆಯೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ಆಂದೋಲನ: ಮಳೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನನುಕೂಲವಾಗದಂತೆ ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೀರಿ?
ಅಶ್ವಿನ್: ಮಳೆಯ ಸಂದರ್ಭದಲ್ಲಿ ಒಳಚರಂಡಿ ಸಮಸ್ಯೆಗಳಿಗೆ ಸಂಬಂಽಸಿದಂತೆ ನಿತ್ಯ ಸರಾಸರಿ ೩೦ ದೂರುಗಳು ದಾಖಲಾಗುತ್ತವೆ. ದೂರು ಬಂದ ತಕ್ಷಣವೇ ನಮ್ಮ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸಮಸ್ಯೆ ಪರಿಹರಿಸುತ್ತಾರೆ.

ಆಂದೋಲನ: ಸಮಸ್ಯೆ ಸರಿಪಡಿಸಲು ಅಗತ್ಯ ಯಂತ್ರೋಪಕರಣಗಳು ಲಭ್ಯವಿವೆಯೇ?
ಅಶ್ವಿನ್: ಹೌದು, ನಮ್ಮಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲು ೧೬ ಜೆಟ್ಟಿಂಗ್ ಯಂತ್ರಗಳು, ೩೫ ಜೆಸಿಬಿ ಯಂತ್ರಗಳಿವೆ. ಮಳೆಯ ಸಂದರ್ಭದಲ್ಲಿ ರಾತ್ರಿ ಪಾಳಿಯಲ್ಲಿಯೂ ನಮ್ಮ ಸಿಬ್ಬಂದಿ ಕೆಲಸ ನಿರ್ವಹಿಸುತ್ತಾರೆ.

ಆಂದೋಲನ: ಮಳೆಗಾಲ ಆರಂಭಕ್ಕೂ ಮುನ್ನ ಯಾವ ರೀತಿ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತೀರಿ? ಅಶ್ವಿನ್: ಮಳೆಗಾಲ ಆರಂಭಕ್ಕೂ ಎರಡು ತಿಂಗಳು ಮುಂಚೆಯೇ ದೊಡ್ಡ ಹಾಗೂ ಸಣ್ಣ ಮೋರಿಗಳಲ್ಲಿ ಹೂಳು ಎತ್ತುವ ಕೆಲಸ ಮಾಡಲಾಗುತ್ತದೆ. ಇದರ ಜೊತೆಗೆ ಬಡಾವಣೆಗಳಲ್ಲಿಯೂ ಮೋರಿಗಳು ಹಾಗೂ ಒಳ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತದೆ.

ಆಂದೋಲನ: ನಗರಪಾಲಿಕೆ ವತಿಯಿಂದ ಹೆಚ್ಚುವರಿ ಯಂತ್ರಗಳ ಖರೀದಿ ಆಗುತ್ತಿದೆಯೇ? ಅಶ್ವಿನ್: ಹೌದು. ನಗರ ಹೆಚ್ಚು ಹೆಚ್ಚು ಬೆಳವಣಿಗೆ ಯಾಗುತ್ತಿದೆ. ಈಗಿರುವ ಜೊತೆಗೆ ಮತ್ತಷ್ಟು ಉಪ ಕರಣಗಳ ಅಗತ್ಯವಿದೆ. ಹೀಗಾಗಿ ೬ ಜೆಟ್ಟಿಂಗ್ ಯಂತ್ರಗಳ ಖರೀದಿಗೆ ಹಣ ಬಿಡುಗಡೆಯಾಗಿದೆ. ಜೆಸಿಬಿ ಯತ್ರಗಳ ಖರೀದೀಗೂ ಚಿಂತನೆ ನಡೆದಿದೆ. ಹೀಗಾದಲ್ಲಿ ಮುಂದಿನ ದಿನಗಳಲ್ಲಿ ಸಮಸ್ಯೆ ಕಡಿಮೆಯಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

45 mins ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

2 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

3 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

3 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

5 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

5 hours ago