Andolana originals

ಒಳಚರಂಡಿ ಸಮಸ್ಯೆ : ದೂರು ಬಂದ್ರೆ ತಕ್ಷಣವೇ ಕ್ರಮ

ಮೈಸೂರು: ಮಳೆಯ ಸಂದರ್ಭದಲ್ಲಿ ಪ್ರಮುಖ ವಾಗಿ ಒಳಚರಂಡಿ ವ್ಯವಸ್ಥೆಯಲ್ಲಿನ ತೊಂದರೆಗಳಿಗೆ ಸಂಬಂಧಿಸಿದಂತೆ ಹೆಚ್ಚು ದೂರುಗಳು ದಾಖಲಾಗುತ್ತವೆ. ಇದಕ್ಕಾಗಿಯೇ ನಗರಪಾಲಿಕೆ ಯಲ್ಲಿ ಪ್ರತ್ಯೇಕ ಯುಜಿಡಿ ವಿಭಾಗವಿದೆ. ಇಲ್ಲಿ ಸುಮಾರು ೧೨ಕ್ಕೂ ಹೆಚ್ಚು ಮಂದಿ ಕಾರ್ಯ ನಿರ್ವಹಿಸುತ್ತಾರೆ. ಅವರಲ್ಲಿ ಕಾರ್ಯಪಾಲಕ ಇಂಜಿನಿಯರ್ ಅಶ್ವಿನ್ ಕೂಡ ಒಬ್ಬರು. ಮಳೆಯ ಸಂದರ್ಭದಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅವರು ‘ಆಂದೋಲನ’ ದಿನಪತ್ರಿಕೆಯೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ಆಂದೋಲನ: ಮಳೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನನುಕೂಲವಾಗದಂತೆ ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೀರಿ?
ಅಶ್ವಿನ್: ಮಳೆಯ ಸಂದರ್ಭದಲ್ಲಿ ಒಳಚರಂಡಿ ಸಮಸ್ಯೆಗಳಿಗೆ ಸಂಬಂಽಸಿದಂತೆ ನಿತ್ಯ ಸರಾಸರಿ ೩೦ ದೂರುಗಳು ದಾಖಲಾಗುತ್ತವೆ. ದೂರು ಬಂದ ತಕ್ಷಣವೇ ನಮ್ಮ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸಮಸ್ಯೆ ಪರಿಹರಿಸುತ್ತಾರೆ.

ಆಂದೋಲನ: ಸಮಸ್ಯೆ ಸರಿಪಡಿಸಲು ಅಗತ್ಯ ಯಂತ್ರೋಪಕರಣಗಳು ಲಭ್ಯವಿವೆಯೇ?
ಅಶ್ವಿನ್: ಹೌದು, ನಮ್ಮಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲು ೧೬ ಜೆಟ್ಟಿಂಗ್ ಯಂತ್ರಗಳು, ೩೫ ಜೆಸಿಬಿ ಯಂತ್ರಗಳಿವೆ. ಮಳೆಯ ಸಂದರ್ಭದಲ್ಲಿ ರಾತ್ರಿ ಪಾಳಿಯಲ್ಲಿಯೂ ನಮ್ಮ ಸಿಬ್ಬಂದಿ ಕೆಲಸ ನಿರ್ವಹಿಸುತ್ತಾರೆ.

ಆಂದೋಲನ: ಮಳೆಗಾಲ ಆರಂಭಕ್ಕೂ ಮುನ್ನ ಯಾವ ರೀತಿ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತೀರಿ? ಅಶ್ವಿನ್: ಮಳೆಗಾಲ ಆರಂಭಕ್ಕೂ ಎರಡು ತಿಂಗಳು ಮುಂಚೆಯೇ ದೊಡ್ಡ ಹಾಗೂ ಸಣ್ಣ ಮೋರಿಗಳಲ್ಲಿ ಹೂಳು ಎತ್ತುವ ಕೆಲಸ ಮಾಡಲಾಗುತ್ತದೆ. ಇದರ ಜೊತೆಗೆ ಬಡಾವಣೆಗಳಲ್ಲಿಯೂ ಮೋರಿಗಳು ಹಾಗೂ ಒಳ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತದೆ.

ಆಂದೋಲನ: ನಗರಪಾಲಿಕೆ ವತಿಯಿಂದ ಹೆಚ್ಚುವರಿ ಯಂತ್ರಗಳ ಖರೀದಿ ಆಗುತ್ತಿದೆಯೇ? ಅಶ್ವಿನ್: ಹೌದು. ನಗರ ಹೆಚ್ಚು ಹೆಚ್ಚು ಬೆಳವಣಿಗೆ ಯಾಗುತ್ತಿದೆ. ಈಗಿರುವ ಜೊತೆಗೆ ಮತ್ತಷ್ಟು ಉಪ ಕರಣಗಳ ಅಗತ್ಯವಿದೆ. ಹೀಗಾಗಿ ೬ ಜೆಟ್ಟಿಂಗ್ ಯಂತ್ರಗಳ ಖರೀದಿಗೆ ಹಣ ಬಿಡುಗಡೆಯಾಗಿದೆ. ಜೆಸಿಬಿ ಯತ್ರಗಳ ಖರೀದೀಗೂ ಚಿಂತನೆ ನಡೆದಿದೆ. ಹೀಗಾದಲ್ಲಿ ಮುಂದಿನ ದಿನಗಳಲ್ಲಿ ಸಮಸ್ಯೆ ಕಡಿಮೆಯಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

1 hour ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

9 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

9 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago