Andolana originals

ಗ್ರಾಮೀಣ ಭಾಗಗಳಲ್ಲಿ ನಿಲ್ಲದ ವನ್ಯಮೃಗಗಳ ಹಾವಳಿ

ಕಾಫಿ,ಬಾಳೆ ಸೇರಿ ಹಲವು ಬೆಳೆಗಳಿಗೆ ಹಾನಿ; ಶಾಶ್ವತ ಪರಿಹಾರಕ್ಕೆ ಸ್ಥಳೀಯರ ಒತ್ತಾಯ

ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ವನ್ಯಮೃಗಗಳ ಹಾವಳಿ ಮಿತಿ ಮೀರಿದ್ದು, ಅಪಾರ ಪ್ರಮಾಣದ ಬೆಳೆಹಾನಿ ಉಂಟಾಗುತ್ತಿದೆ. ಅರಣ್ಯ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಿರಾಜಪೇಟೆ ಸಮೀಪದ ಬೊಳ್ಳರಿಮಾಡು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ತೀರಾ ಹೆಚ್ಚಾಗಿದೆ. ಈ ಹಿಂದೆ ಹುಲಿ ಹಾವಳಿ ಹೆಚ್ಚಾಗಿದ್ದ ಈ ಪ್ರದೇಶಗಳಲ್ಲಿ ಈಗ ಕಾಡಾನೆ ಹಾವಳಿ ಮಿತಿ ಮೀರಿದ್ದು, ಸ್ಥಳೀಯರು ಆತಂಕದಲ್ಲೇ ದಿನ ಕಳೆಯುವಂತಾಗಿದೆ. ಇದರೊಂದಿಗೆ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಕಾಡಾನೆಗಳ ಹಾವಳಿ ಹೆಚ್ಚಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

೬ ತಿಂಗಳುಗಳ ಹಿಂದೆ ಹುಲಿ ದಾಳಿಗೆ ಕರು ಬಲಿಯಾದರೆ, ವರ್ಷದ ಹಿಂದೆ ಹಸುವೊಂದು ಬಲಿಯಾಗಿತ್ತು. ಐಮಂಗಲಭಾಗದಿಂದ ಬರುವ ಹುಲಿಯು ಸಾಕು ಪ್ರಾಣಿಗಳು ಹಾಗೂ ಜಾನು ವಾರುಗಳ ಮೇಲೆ ದಾಳಿ ನಡೆಸಿ ಹೋಗುತ್ತಿದೆ.ಇದರ ಜೊತೆಗೆ ಕಾಡನೆಗಳ ನಿರಂತರ ಹಾವಳಿ ಮಿತಿ ಮೀರಿದೆ ಎಂದು ಆತಂಕ ವ್ಯಕ್ತಪಡಿಸುವ ಗ್ರಾಮಸ್ಥರು ರಾತ್ರಿ ವೇಳೆ ಭಯದಿಂದ ಕಾಲ ಕಳೆಯುವಂತಾಗಿದೆ ಎಂದು ನೋವನ್ನು ತೋಡಿಕೊಂಡಿದ್ದಾರೆ.

ಇದನ್ನು ಓದಿ : ಎನ್ಎಸ್ಎಸ್ ವಿದ್ಯಾರ್ಥಿಗಳ ಸೇವೆಯನ್ನು ಸಾರುತ್ತಿದೆ ಸರ್ಕಾರಿ ಶಾಲೆ

ತೋಟದಲ್ಲಿ ಬೆಳೆದಿರುವ ಕಾಫಿ, ಬಾಳೆ, ಏಲಕ್ಕಿ ಸೇರಿದಂತೆ ವಿವಿಧ ಬೆಳೆಗಳು ಕಾಡು ಪ್ರಾಣಿಗಳ ಪಾಲಾಗುತ್ತಿವೆ. ಇತ್ತೀಚೆಗೆ ಕಾಡಾನೆ ಹಿಂಡು ಕಬ್ಬಿಣದ ಗೇಟ್ ಮುರಿದು ದಾಂದಲೆ ನಡೆಸಿದಲ್ಲದೆ, ಮುನ್ನಚ್ಚರಿಕೆ ಕ್ರಮವಾಗಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾಗಳಿಗೂ ಹಾನಿ ಮಾಡಿದೆ. ಕಾಡಾನೆ ಸಂಚರಿ ಸಿದೆಲ್ಲೆಡೆ ಕಾಫಿ ಗಿಡಗಳು ಸಂಪೂರ್ಣ ನಾಶವಾಗಿವೆ.

ಕಾಡಾನೆಗಳ ನಿರಂತರ ಹಾವಳಿ ಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿ ದ್ದಾರೆ. ಕಾರ್ಮಿಕರು ತೋಟಗಳಿಗೆ ಬರಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳು ಮತ್ತು ಹುಲಿಯ ಹೆಜ್ಜೆ ಗುರುತುಗಳಿಂದ ಈ ವ್ಯಾಪ್ತಿಯ ನಿವಾಸಿಗಳು ಮನೆಯಿಂದ ಹೊರಬರಲೂ ಭಯಪಡುವಂತಾಗಿದೆ. ವನ್ಯಮೃಗಗಳ ಹಾವಳಿಯಿಂದ ಉಂಟಾದ ಬೆಳೆ ನಷ್ಟಕ್ಕೆ ಅರಣ್ಯ ಇಲಾಖೆ ಇಲ್ಲಿಯವರೆಗೆ ಸೂಕ್ತ ಪರಿಹಾರವನ್ನೂ ನೀಡಿಲ್ಲ. ಬೆಳೆಗಾರರು ಕಷ್ಟಪಟ್ಟು ದುಡಿದು ಬೆಳೆದ ಬೆಳೆ ಕೈಗೆ ಬರಬೇಕೆನ್ನುವ ಸಮಯದಲ್ಲಿ ವನ್ಯಮೃಗಗಳ ಪಾಲಾಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಲು ಹಿಂದೇಟು ಹಾಕಬೇಕಾಗುವ ಸನ್ನಿವೇಶ ನಿರ್ಮಾಣವಾಗಲಿದೆ.

ಕಾಡಾನೆಗಳನ್ನು ಕಾಡಿಗೆ ಅಟ್ಟಿದರೂ ಮತ್ತೆ ಮತ್ತೆ ತೋಟಗಳಿಗೆ ಬಂದು ದಾಂದಲೆ ನಡೆಸುತ್ತಿವೆ. ಅರಣ್ಯ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ರೂಪಿಸಬೇಕು. ಜೊತೆಗೆ ಬೆಳೆ ಹಾನಿಗೆ ಸಂಬಂಽಸಿದಂತೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

” ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಾಫಿ, ಬಾಳೆಗಿಡ, ಗೇಟ್, ಸಿಸಿ ಕ್ಯಾಮಾರಾ ಸೇರಿದಂತೆ ವಿವಿಧ ರೀತಿಯಲ್ಲಿ ನಷ್ಟ ಅನುಭವಿಸುವಂತಾಗಿದೆ. ಕಾರ್ಮಿಕರೂ ತೋಟಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದು, ಬೆಳೆಗಾರರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ತೋಟಗಳಲ್ಲಿ ಹುಲಿಯ ಹೆಜ್ಜೆ ಕೂಡ ಕಂಡುಬಂದಿದ್ದು, ಮತ್ತಷ್ಟು ಭಯದ ವಾತಾವರಣ ಸೃಷ್ಟಿಯಾಗಿದೆ. ವನ್ಯಮೃಗಗಳ ಹಾವಳಿ ತಡೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕು.”

-ಬಿದ್ದಂಡ ಕರುಂಬಯ್ಯ, ಬೆಳೆಗಾರ, ಬೊಳ್ಳರಿಮಾಡು ಗ್ರಾಮ

” ಕಾಡಾನೆಗಳ ಹಾವಳಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಗತ್ಯವಿರುವೆಡೆ ಸಿಬ್ಬಂದಿಯನ್ನು ನಿಯೋಜಿಸಿ ಕಾಡಾನೆಗಳನ್ನು ಕಾಡಿಗಟ್ಟುವ ಕೆಲಸ ಮಾಡಲಾಗುತ್ತಿದೆ. ಕಾಡಾನೆ ಹಾವಳಿ ಬಗ್ಗೆ ಮಾಹಿತಿ ಬಂದ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.”

-ಶಿವರಾಮ್, ವಲಯ ಅರಣ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

9 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

9 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

11 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

12 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

12 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

13 hours ago