Andolana originals

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ 

ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು ಆಟೋಗಳ ಮೂಲಕ ಬಡಾವಣೆಗಳ ಮನೆ ಮನೆಗಳಿಂದ ಕಸ ಸಂಗ್ರಹ ಮಾಡುತ್ತಿದೆ. ಆದರೆ, ಇತ್ತೀಚೆಗೆ ಸರಿಯಾಗಿ ನಿರ್ವಹಣೆ ಮಾಡದೆ ಕಸ ಸಂಗ್ರಹ ಆಟೋಗಳು ಪದೇ ಪದೆ ರಿಪೇರಿಗೆ ಬರುತ್ತಿವೆ.

ಕೆಲವು ಬಡಾವಣೆಗಳಿಗೆ ಕಸ ಸಂಗ್ರಹಕ್ಕಾಗಿ ಬರುತ್ತಿದ್ದ ಆಟೋಗಳು ಕೆಟ್ಟು ಹೋಗಿ ಗ್ಯಾರೇಜ್ ಸೇರಿ ೨-೩ ತಿಂಗಳಾದರೂ ರಿಪೇರಿ ಆಗಿಲ್ಲ. ಆದ್ದರಿಂದ ಬಡಾವಣೆಗಳ ಜನರು ಕಸವನ್ನು ಪ್ಲಾಸ್ಟಿಕ್ ಕವರ್ ಹಾಗೂ ಚೀಲಕ್ಕೆ ಕಟ್ಟಿ ರಸ್ತೆ ಬದಿಗಳಿಗೆ, ಖಾಲಿ ನಿವೇಶನಗಳಿಗೆ ಬಿಸಾಡುತ್ತಿದ್ದಾರೆ.

ನಗರದ ೧೦ನೇ ವಾರ್ಡ್‌ನಲ್ಲಿ ಕಸ ಸಂಗ್ರಹ ಮಾಡುತ್ತಿದ್ದ ವಾಹನ ಕೆಟ್ಟು ೨ ತಿಂಗಳಾಗಿದೆ. ರಿಪೇರಿಗೆಂದು ಗ್ಯಾರೇಜ್‌ಗೆ ಬಿಟ್ಟಿದ್ದರೂ ಇನ್ನು ದುರಸ್ತಿಯಾಗಿಲ್ಲ. ಈ ಆಟೋದ ಬಾಡಿ ಹಾಳಾಗಿದ್ದು ಬದಲಾಯಿಸುವ ಕೆಲಸ ಗ್ಯಾರೇಜ್‌ನಲ್ಲಿ ನಿಧಾನ ಗತಿಯಲ್ಲಿ ಸಾಗಿದೆ.

ನಗರದ ಗ್ಯಾರೇಜ್‌ನಲ್ಲಿ ನಗರಸಭೆಯ ೨ ಆಟೋಗಳು ರಿಪೇರಿಗೆಂದು ನಿಂತಿವೆ. ಇವೆರಡಕ್ಕೂ ಬಾಡಿ ಬದಲಾಯಿಸಬೇಕಿದೆ. ಗ್ಯಾರೇಜ್‌ನವರು ಇಲ್ಲಿಯ ತನಕ ೪ ಆಟೋಗಳನ್ನು ರಿಪೇರಿ ಮಾಡಿ ನಗರಸಭೆಗೆ ಕಳುಹಿಸಿದ್ದಾರೆ.

೨ ಆಟೋಗಳ ರಿಪೇರಿ ಶುಲ್ಕ ಮತ್ತು ಬಿಡಿಭಾಗಗಳ ಹಣವನ್ನು ನಗರಸಭೆಯು ಪಾವತಿ ಮಾಡುವುದು ವಿಳಂಬವಾಗಿದೆ. ಆದ್ದರಿಂದ ಈ ಆಟೋಗಳಿಗೆ ಬಾಡಿ ಕಟ್ಟಿ ನಗರಸಭೆಗೆ ಹಸ್ತಾಂತರಿಸುವ ಕೆಲಸ ಮಂದಗತಿಯಲ್ಲಿ ಸಾಗಿದೆ.

ಕೆಟ್ಟುಹೋದ ಕಸದ ಆಟೋವನ್ನು ರಿಪೇರಿ ಮಾಡಿಸಲು ಕನಿಷ್ಠ ಒಂದು ವಾರ ಸಾಕು. ೨-೩ ತಿಂಗಳು ಬೇಕೇನು ಎಂಬುದು ಸಾರ್ವಜನಿಕರ ಪ್ರಶ್ನೆ. ನಗರಸಭೆಯ ಅಧಿಕಾರಿಗಳು ಕಾಳಜಿ ವಹಿಸಿದರೆ ರಿಪೇರಿ ಮಾಡಿಸುವುದು ಕಷ್ಟದ ಕೆಲಸವಲ್ಲ ಎಂದು ನಾಗರಿಕರು ಹೇಳುತ್ತಿದ್ದಾರೆ.

ಕಸ ಸಾಗಣೆ ಆಟೋಗಳನ್ನು ಶುಚಿಯಾಗಿ ಇಟ್ಟುಕೊಳ್ಳದೆ ಹಾಗೂ ಸರಿಯಾಗಿ ನಿರ್ವಹಣೆ ಮಾಡದ ಕಾರಣ ಪದೇ ಪದೆ ರಿಪೇರಿಗೆ ಬರುತ್ತಿವೆ. ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಸ ಹಾಕಿ ಬಂದ ನಂತರ ಶುಚಿಗೊಳಿಸುತ್ತಿಲ್ಲ. ಆದ್ದರಿಂದ ಗಲೀಜಾಗಿ ಕೆಟ್ಟು ಹೋಗುತ್ತಿವೆ ಎಂದು ನಗರಸಭೆಯ ಸಿಬ್ಬಂದಿಯೇ ಹೇಳುತ್ತಿದ್ದಾರೆ.

ಸಾಂಕ್ರಾಮಿಕ ರೋಗ ಭೀತಿ: 

ಕಸದ ಆಟೋ ಬಡಾವಣೆಗೆ ಬಾರದೆ ನಾಗರಿಕರು ಕಸವನ್ನು ಬೀದಿಗೆ ಬಿಸಾಡುತ್ತಿದ್ದಾರೆ. ಈ ಕಸ ಕೊಳೆತು ಅನೈರ್ಮಲ್ಯ ವಾತಾವರಣ ನಿರ್ಮಾಣವಾಗುತ್ತಿದೆ. ಹಸುಗಳು, ಹಂದಿಗಳು, ನಾಯಿಗಳು ಕಸದ ಚೀಲವನ್ನು ರಸ್ತೆಗೆ ಎಳೆದು ತಂದು ಹಾಕುತ್ತಿವೆ. ಇದರಿಂದ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭೀತಿ ಶುರುವಾಗಿದೆ.

” ಕೆಟ್ಟು ಹೋಗಿರುವ ೨ ಆಟೋಗಳನ್ನು ಗ್ಯಾರೇಜ್‌ಗೆ ಬಿಡಲಾಗಿದೆ. ಸಣ್ಣ ಪುಟ್ಟ ರಿಪೇರಿ ಕೆಲಸ ಮುಗಿದಿದೆ. ಇನ್ನು ೩-೪ ದಿನಗಳಲ್ಲಿ ಬಾಡಿಗಳನ್ನು ಅಳವಡಿಸಿ ಕಸ ಸಂಗ್ರಹಕ್ಕೆ ಕಳುಹಿಸಲಾಗುವುದು.”

 – ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕರು, ನಗರಸಭೆ

 

 

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 mins ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

48 mins ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

1 hour ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

1 hour ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

4 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

5 hours ago