Andolana originals

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ 

ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು ಆಟೋಗಳ ಮೂಲಕ ಬಡಾವಣೆಗಳ ಮನೆ ಮನೆಗಳಿಂದ ಕಸ ಸಂಗ್ರಹ ಮಾಡುತ್ತಿದೆ. ಆದರೆ, ಇತ್ತೀಚೆಗೆ ಸರಿಯಾಗಿ ನಿರ್ವಹಣೆ ಮಾಡದೆ ಕಸ ಸಂಗ್ರಹ ಆಟೋಗಳು ಪದೇ ಪದೆ ರಿಪೇರಿಗೆ ಬರುತ್ತಿವೆ.

ಕೆಲವು ಬಡಾವಣೆಗಳಿಗೆ ಕಸ ಸಂಗ್ರಹಕ್ಕಾಗಿ ಬರುತ್ತಿದ್ದ ಆಟೋಗಳು ಕೆಟ್ಟು ಹೋಗಿ ಗ್ಯಾರೇಜ್ ಸೇರಿ ೨-೩ ತಿಂಗಳಾದರೂ ರಿಪೇರಿ ಆಗಿಲ್ಲ. ಆದ್ದರಿಂದ ಬಡಾವಣೆಗಳ ಜನರು ಕಸವನ್ನು ಪ್ಲಾಸ್ಟಿಕ್ ಕವರ್ ಹಾಗೂ ಚೀಲಕ್ಕೆ ಕಟ್ಟಿ ರಸ್ತೆ ಬದಿಗಳಿಗೆ, ಖಾಲಿ ನಿವೇಶನಗಳಿಗೆ ಬಿಸಾಡುತ್ತಿದ್ದಾರೆ.

ನಗರದ ೧೦ನೇ ವಾರ್ಡ್‌ನಲ್ಲಿ ಕಸ ಸಂಗ್ರಹ ಮಾಡುತ್ತಿದ್ದ ವಾಹನ ಕೆಟ್ಟು ೨ ತಿಂಗಳಾಗಿದೆ. ರಿಪೇರಿಗೆಂದು ಗ್ಯಾರೇಜ್‌ಗೆ ಬಿಟ್ಟಿದ್ದರೂ ಇನ್ನು ದುರಸ್ತಿಯಾಗಿಲ್ಲ. ಈ ಆಟೋದ ಬಾಡಿ ಹಾಳಾಗಿದ್ದು ಬದಲಾಯಿಸುವ ಕೆಲಸ ಗ್ಯಾರೇಜ್‌ನಲ್ಲಿ ನಿಧಾನ ಗತಿಯಲ್ಲಿ ಸಾಗಿದೆ.

ನಗರದ ಗ್ಯಾರೇಜ್‌ನಲ್ಲಿ ನಗರಸಭೆಯ ೨ ಆಟೋಗಳು ರಿಪೇರಿಗೆಂದು ನಿಂತಿವೆ. ಇವೆರಡಕ್ಕೂ ಬಾಡಿ ಬದಲಾಯಿಸಬೇಕಿದೆ. ಗ್ಯಾರೇಜ್‌ನವರು ಇಲ್ಲಿಯ ತನಕ ೪ ಆಟೋಗಳನ್ನು ರಿಪೇರಿ ಮಾಡಿ ನಗರಸಭೆಗೆ ಕಳುಹಿಸಿದ್ದಾರೆ.

೨ ಆಟೋಗಳ ರಿಪೇರಿ ಶುಲ್ಕ ಮತ್ತು ಬಿಡಿಭಾಗಗಳ ಹಣವನ್ನು ನಗರಸಭೆಯು ಪಾವತಿ ಮಾಡುವುದು ವಿಳಂಬವಾಗಿದೆ. ಆದ್ದರಿಂದ ಈ ಆಟೋಗಳಿಗೆ ಬಾಡಿ ಕಟ್ಟಿ ನಗರಸಭೆಗೆ ಹಸ್ತಾಂತರಿಸುವ ಕೆಲಸ ಮಂದಗತಿಯಲ್ಲಿ ಸಾಗಿದೆ.

ಕೆಟ್ಟುಹೋದ ಕಸದ ಆಟೋವನ್ನು ರಿಪೇರಿ ಮಾಡಿಸಲು ಕನಿಷ್ಠ ಒಂದು ವಾರ ಸಾಕು. ೨-೩ ತಿಂಗಳು ಬೇಕೇನು ಎಂಬುದು ಸಾರ್ವಜನಿಕರ ಪ್ರಶ್ನೆ. ನಗರಸಭೆಯ ಅಧಿಕಾರಿಗಳು ಕಾಳಜಿ ವಹಿಸಿದರೆ ರಿಪೇರಿ ಮಾಡಿಸುವುದು ಕಷ್ಟದ ಕೆಲಸವಲ್ಲ ಎಂದು ನಾಗರಿಕರು ಹೇಳುತ್ತಿದ್ದಾರೆ.

ಕಸ ಸಾಗಣೆ ಆಟೋಗಳನ್ನು ಶುಚಿಯಾಗಿ ಇಟ್ಟುಕೊಳ್ಳದೆ ಹಾಗೂ ಸರಿಯಾಗಿ ನಿರ್ವಹಣೆ ಮಾಡದ ಕಾರಣ ಪದೇ ಪದೆ ರಿಪೇರಿಗೆ ಬರುತ್ತಿವೆ. ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಸ ಹಾಕಿ ಬಂದ ನಂತರ ಶುಚಿಗೊಳಿಸುತ್ತಿಲ್ಲ. ಆದ್ದರಿಂದ ಗಲೀಜಾಗಿ ಕೆಟ್ಟು ಹೋಗುತ್ತಿವೆ ಎಂದು ನಗರಸಭೆಯ ಸಿಬ್ಬಂದಿಯೇ ಹೇಳುತ್ತಿದ್ದಾರೆ.

ಸಾಂಕ್ರಾಮಿಕ ರೋಗ ಭೀತಿ: 

ಕಸದ ಆಟೋ ಬಡಾವಣೆಗೆ ಬಾರದೆ ನಾಗರಿಕರು ಕಸವನ್ನು ಬೀದಿಗೆ ಬಿಸಾಡುತ್ತಿದ್ದಾರೆ. ಈ ಕಸ ಕೊಳೆತು ಅನೈರ್ಮಲ್ಯ ವಾತಾವರಣ ನಿರ್ಮಾಣವಾಗುತ್ತಿದೆ. ಹಸುಗಳು, ಹಂದಿಗಳು, ನಾಯಿಗಳು ಕಸದ ಚೀಲವನ್ನು ರಸ್ತೆಗೆ ಎಳೆದು ತಂದು ಹಾಕುತ್ತಿವೆ. ಇದರಿಂದ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭೀತಿ ಶುರುವಾಗಿದೆ.

” ಕೆಟ್ಟು ಹೋಗಿರುವ ೨ ಆಟೋಗಳನ್ನು ಗ್ಯಾರೇಜ್‌ಗೆ ಬಿಡಲಾಗಿದೆ. ಸಣ್ಣ ಪುಟ್ಟ ರಿಪೇರಿ ಕೆಲಸ ಮುಗಿದಿದೆ. ಇನ್ನು ೩-೪ ದಿನಗಳಲ್ಲಿ ಬಾಡಿಗಳನ್ನು ಅಳವಡಿಸಿ ಕಸ ಸಂಗ್ರಹಕ್ಕೆ ಕಳುಹಿಸಲಾಗುವುದು.”

 – ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕರು, ನಗರಸಭೆ

 

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

6 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

9 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

9 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

9 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

9 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

9 hours ago