Andolana originals

ಚಿಕ್ಕಮಂದಗೆರೆ ಕೊಪ್ಪಲು ಶಾಲೆಯಲ್ಲಿ ನಿರುಪಯುಕ್ತ ಶೌಚಾಲಯ

ಮಹೇಶ್ ಕಿಕ್ಕೇರಿ

ಕಿಕ್ಕೇರಿ: ಇಲ್ಲಿಗೆ ಸಮೀಪದ ಚಿಕ್ಕಮಂದಗೆರೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಆದರೆ, ಶಾಲೆಯಲ್ಲಿ ನಿರ್ಮಾಣಗೊಂಡ ಶೌಚಾಲಯ ಕಳೆದ ನಾಲ್ಕು ವರ್ಷಗಳಿಂದ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಬಹಳ ತೊಂದರೆ ಅನುಭವಿಸುವಂತಾಗಿದೆ.

ಶಾಶ್ವತ ಶೌಚಾಲಯ ನಿರ್ಮಾಣ ಕಾಮಗಾರಿಗೆ  ಲಕ್ಷಾಂತರ ರೂ.ಅನುದಾನ ಲಭಿಸಿತ್ತು. ಹೊರಗೆ ಮಾತ್ರ ಕಟ್ಟಡ ಇರುವಂತೆ ತೋರಿಸಿ, ಒಳಗೆ ಮೂಲ ಸೌಲಭ್ಯಗಳನ್ನು ಒದಗಿಸದೆ ಕಾಮಗಾರಿಯನ್ನು ಮುಗಿಸಲಾಗಿದೆ. ಆದರೂ ಬಿಲ್ ಪಾವತಿ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಶೌಚಾಲಯಕ್ಕೆ ಬಾಗಿಲುಗಳೇ ಇಲ್ಲ, ಒಳಗಡೆ ನೀರಿನ ಸಂಪರ್ಕವಿಲ್ಲ, ನೀರಿನ ಪೈಪ್‌ಲೈನ್ ಕಾರ್ಯ ನಿರ್ವಹಿಸದಿರುವುದರಿಂದ ದುರ್ವಾಸನೆ ಬೀರುತ್ತಿದೆ. ಹೀಗಾಗಿ ಹೆಸರಿಗೆ ಮಾತ್ರ ಶೌಚಾಲಯವಿದ್ದು, ಉಪಯೋಗಕ್ಕೆ ಬಾರದಂತಾಗಿದೆ.

ವಿದ್ಯಾರ್ಥಿಗಳ ಆಕ್ರೋಶ: ಇಂತಹ ಸ್ಥಿತಿಯಲ್ಲಿ ನಾವು ಶಾಲೆಗೆ ಹೋಗಿ, ಅಲ್ಲಿನ ಶೌಚಾಲಯವನ್ನು ಬಳಸುವುದು ಹೇಗೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸುತ್ತಾರೆ. ನಾವು ಶೌಚಕ್ಕಾಗಿ ಹೊರಗೆ ಹೋಗಬೇಕಾದ ಪರಿಸ್ಥಿತಿ ಇದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಶಿಕ್ಷಕರ ಬೇಸರ: ಶೌಚಾಲಯ ಇದೆ ಆದರೆ ಉಪಯೋಗಕ್ಕೆ ಬರುತ್ತಿಲ್ಲ. ಕಾಮಗಾರಿ ನಿರ್ವಹಿಸಿದವರು ಗುಣಮಟ್ಟ ಪಾಲಿಸಿಲ್ಲ. ಇಂತಹ ಸ್ಥಿತಿಯಿಂದ ಮಕ್ಕಳ ಶಿಕ್ಷಣಕ್ಕೂ ಭಂಗ ಉಂಟಾಗಿದೆ ಎಂದು ಶಾಲೆಯ ಶಿಕ್ಷಕರೊಬ್ಬರು ಬೇಸರ ವ್ಯಕ್ತಪಡಿಸಿದರು. ಗ್ರಾಮಸ್ಥರು ಈ ಬಗ್ಗೆ ಗ್ರಾ.ಪಂ. ಅಧಿಕಾರಿಗಳಿಗೆ, ಕ್ಷೇತ್ರದ ಜನ ಪ್ರತಿನಿಽಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು. ಶೌಚಾಲಯ ಬಳಸಲು ಅನುಕೂಲವಾಗುವಂತೆ ತುರ್ತು ನವೀಕರಣ ಕೈಗೊಳ್ಳಬೇಕು, ಪೈಪ್‌ಲೈನ್ ಸಂಪರ್ಕ ಕಲ್ಪಿಸಿ ನೀರಿನ ವ್ಯವಸ್ಥೆ ಮಾಡಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago