ಎಂ.ನಾರಾಯಣ
ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ ಉಂಟಾಗಿದೆ. ಈ ವಿಚಾರದ ಬಗ್ಗೆ ಪುರಸಭಾ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ದೂರವಾಣಿ ಕರೆ ಮಾಡಿ ತಿಳಿಸಿದರೂ ಪುರಸಭೆ ಸ್ಪಂದಿಸುತ್ತಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.
ಪುರಸಭಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಒಳಚರಂಡಿ ನೀರು ಕಳೆದ ಎರಡು ದಿನಗಳಿಂದ ರಸ್ತೆಯ ಮೇಲೆ ಹರಿಯುತ್ತಿದ್ದು, ಗಬ್ಬುನಾರುತ್ತಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಪುರಸಭೆಗೆ ದೂರವಾಣಿ ಕರೆ ಮಾಡಿ ತಿಳಿಸಿದಾಗ, ಇಂಜಿನಿಯರ್ ಸಿದ್ದಯ್ಯನವರು, ಇದು ನನ್ನ ವ್ಯಾಪ್ತಿಗೆ ಒಳಪಡುವುದಿಲ್ಲ. ಇಂಜಿನಿಯರ್ ಚಂದ್ರಶೇಖರ್ ಅವರ ವ್ಯಾಪ್ತಿಗೆ ಒಳಪಡುತ್ತದೆ. ಅವರಿಗೆ ಕರೆ ಮಾಡಿ ಎಂದು ತಿಳಿಸಿದರು. ಅದರಂತೆ ಅವರಿಗೆ ಅನೇಕ ಬಾರಿ ಕರೆ ಮಾಡಿ ಸಂಬಂಧಪಟ್ಟ ಫೋಟೋಗಳನ್ನು ಕಳಿಸಿದರೂ ಸ್ಪಂದಿಸಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳ ತವರು ಕ್ಷೇತ್ರ ವರುಣದಲ್ಲೇ ಈ ರೀತಿ ಆದರೆ ರಾಜ್ಯದ ಸಾಮಾನ್ಯ ಕ್ಷೇತ್ರದಲ್ಲಿ ಅಧಿಕಾರಿಗಳು ಇನ್ಯಾವ ರೀತಿ ನಡೆದುಕೊಳ್ಳುತ್ತಾರೆ ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ. ಪುರಸಭೆಯ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಉಪ ವಿಭಾಗಾಧಿಕಾರಿರವರನ್ನು ಆಡಳಿತ ಅಧಿಕಾರಿಯಾಗಿ ನೇಮಕ ಮಾಡಿದ್ದು ವಾರಕ್ಕೆ ಒಮ್ಮೆಯಾದರೂ ಪುರಸಭೆಗೆ ಆಗಮಿಸಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದ್ದರೆ ನೌಕರರಿಗೆ ಸಮಯ ಪ್ರಜ್ಞೆ ಹಾಗೂ ಕರ್ತವ್ಯ ನಿಷ್ಠೆ ಅರಿವಾಗುತ್ತಿತ್ತು. ಈಗಲಾದರೂ ಆಡಳಿತ ಅಧಿಕಾರಿಗಳು ವಾರಕ್ಕೆ ಒಮ್ಮೆಯಾದರೂ ಭೇಟಿ ನೀಡುವ ಮೂಲಕ ವಾರ್ಡುಗಳ ಸಮಸ್ಯೆಯನ್ನು ಪರಿಶೀಲಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
” ತಿ.ನರಸೀಪುರದ ೧೦ನೇ ವಾರ್ಡಿನ ವಿದ್ಯಾನಗರದಲ್ಲಿನ ರಸ್ತೆಯಲ್ಲಿ ಒಳಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಕೂಡಲೇ ಪುರಸಭೆ ಗಮನಕ್ಕೆ ತಂದು ಅವ್ಯವಸ್ಥೆಯನ್ನು ಸರಿಪಡಿಸಲಾಗುವುದು.”
-ಆಶಪ್ಪ, ಉಪವಿಭಾಗಾಧಿಕಾರಿ, ಪುರಸಭೆ ಆಡಳಿತಾಧಿಕಾರಿ
” ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಸಂಚರಿಸದಂತಾಗಿದೆ. ಈ ಕುರಿತು ತಿಳಿಸಲು ಪುರಸಭಾ ಕಚೇರಿಗೆ ಭೇಟಿ ನೀಡಿದರೆ ಮುಖ್ಯ ಅಧಿಕಾರಿಗಳ ಕಚೇರಿ ಮುಚ್ಚಿರುತ್ತದೆ. ಸಿಬ್ಬಂದಿಗಳನ್ನು ಕೇಳಿದರೆ ಮೀಟಿಂಗ್ಗೆ ಹೋಗಿದ್ದಾರೆ ಎನ್ನುತ್ತಾರೆ. ಆಡಳಿತ ಅಧಿಕಾರಿಗಳು ಕಚೇರಿಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ.”
-ಕೃಷ್ಣ, ವಿದ್ಯಾ ನಗರ ನಿವಾಸಿ
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…