Andolana originals

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ

ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ ಉಂಟಾಗಿದೆ. ಈ ವಿಚಾರದ ಬಗ್ಗೆ ಪುರಸಭಾ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ದೂರವಾಣಿ ಕರೆ ಮಾಡಿ ತಿಳಿಸಿದರೂ ಪುರಸಭೆ ಸ್ಪಂದಿಸುತ್ತಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.

ಪುರಸಭಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಒಳಚರಂಡಿ ನೀರು ಕಳೆದ ಎರಡು ದಿನಗಳಿಂದ ರಸ್ತೆಯ ಮೇಲೆ ಹರಿಯುತ್ತಿದ್ದು, ಗಬ್ಬುನಾರುತ್ತಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಪುರಸಭೆಗೆ ದೂರವಾಣಿ ಕರೆ ಮಾಡಿ ತಿಳಿಸಿದಾಗ, ಇಂಜಿನಿಯರ್ ಸಿದ್ದಯ್ಯನವರು, ಇದು ನನ್ನ ವ್ಯಾಪ್ತಿಗೆ ಒಳಪಡುವುದಿಲ್ಲ. ಇಂಜಿನಿಯರ್ ಚಂದ್ರಶೇಖರ್ ಅವರ ವ್ಯಾಪ್ತಿಗೆ ಒಳಪಡುತ್ತದೆ. ಅವರಿಗೆ ಕರೆ ಮಾಡಿ ಎಂದು ತಿಳಿಸಿದರು. ಅದರಂತೆ ಅವರಿಗೆ ಅನೇಕ ಬಾರಿ ಕರೆ ಮಾಡಿ ಸಂಬಂಧಪಟ್ಟ ಫೋಟೋಗಳನ್ನು ಕಳಿಸಿದರೂ ಸ್ಪಂದಿಸಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳ ತವರು ಕ್ಷೇತ್ರ ವರುಣದಲ್ಲೇ ಈ ರೀತಿ ಆದರೆ ರಾಜ್ಯದ ಸಾಮಾನ್ಯ ಕ್ಷೇತ್ರದಲ್ಲಿ ಅಧಿಕಾರಿಗಳು ಇನ್ಯಾವ ರೀತಿ ನಡೆದುಕೊಳ್ಳುತ್ತಾರೆ ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ. ಪುರಸಭೆಯ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಉಪ ವಿಭಾಗಾಧಿಕಾರಿರವರನ್ನು ಆಡಳಿತ ಅಧಿಕಾರಿಯಾಗಿ ನೇಮಕ ಮಾಡಿದ್ದು ವಾರಕ್ಕೆ ಒಮ್ಮೆಯಾದರೂ ಪುರಸಭೆಗೆ ಆಗಮಿಸಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದ್ದರೆ ನೌಕರರಿಗೆ ಸಮಯ ಪ್ರಜ್ಞೆ ಹಾಗೂ ಕರ್ತವ್ಯ ನಿಷ್ಠೆ ಅರಿವಾಗುತ್ತಿತ್ತು. ಈಗಲಾದರೂ ಆಡಳಿತ ಅಧಿಕಾರಿಗಳು ವಾರಕ್ಕೆ ಒಮ್ಮೆಯಾದರೂ ಭೇಟಿ ನೀಡುವ ಮೂಲಕ ವಾರ್ಡುಗಳ ಸಮಸ್ಯೆಯನ್ನು ಪರಿಶೀಲಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

” ತಿ.ನರಸೀಪುರದ ೧೦ನೇ ವಾರ್ಡಿನ ವಿದ್ಯಾನಗರದಲ್ಲಿನ ರಸ್ತೆಯಲ್ಲಿ ಒಳಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಕೂಡಲೇ ಪುರಸಭೆ ಗಮನಕ್ಕೆ ತಂದು ಅವ್ಯವಸ್ಥೆಯನ್ನು ಸರಿಪಡಿಸಲಾಗುವುದು.”

-ಆಶಪ್ಪ, ಉಪವಿಭಾಗಾಧಿಕಾರಿ, ಪುರಸಭೆ ಆಡಳಿತಾಧಿಕಾರಿ

” ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಸಂಚರಿಸದಂತಾಗಿದೆ. ಈ ಕುರಿತು ತಿಳಿಸಲು ಪುರಸಭಾ ಕಚೇರಿಗೆ ಭೇಟಿ ನೀಡಿದರೆ ಮುಖ್ಯ ಅಧಿಕಾರಿಗಳ ಕಚೇರಿ ಮುಚ್ಚಿರುತ್ತದೆ. ಸಿಬ್ಬಂದಿಗಳನ್ನು ಕೇಳಿದರೆ ಮೀಟಿಂಗ್‌ಗೆ ಹೋಗಿದ್ದಾರೆ ಎನ್ನುತ್ತಾರೆ. ಆಡಳಿತ ಅಧಿಕಾರಿಗಳು ಕಚೇರಿಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ.”

-ಕೃಷ್ಣ, ವಿದ್ಯಾ ನಗರ ನಿವಾಸಿ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

2 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

2 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

3 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

3 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

3 hours ago

ಕಾವೇರಿ ಕಣಿವೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ

ಕೆ.ಬಿ.ರಮೇಶನಾಯಕ ೨೦೧೫, ೨೦೧೬ರ ಅವಧಿಯಲ್ಲಿ ಇದ್ದಷ್ಟೇ ಈ ಬಾರಿಯೂ ಜಲಾಶಯಗಳಲ್ಲಿ ನೀರು ಮೈಸೂರು: ಕೇರಳದ ವಯನಾಡು, ಕೊಡಗಿನ ಭಾಗಮಂಡಲ ಭಾಗದಲ್ಲಿ…

3 hours ago