Andolana originals

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್

ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ

ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು ಮಂದಗತಿಯಲ್ಲಿ ನಡೆಯುತ್ತಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿವೆ. ಪಟ್ಟಣದ ಶ್ರೀ ಬಣ್ಣಾರಿ ಅಮ್ಮನ್ ದೇವಾಲಯದ ಸಮೀಪ ಸೋಮವಾರ ಮತ್ತೊಂದು ಅಪಘಾತ ಸಂಭವಿಸಿದ್ದು, ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ (ಪಾಂಡವಪುರ ಸಮೀಪ) ಅಗಲೀಕರಣ ಕಾಮಗಾರಿಯು ಮಂದಿಗತಿಯಲ್ಲಿ ಸಾಗಿದೆ. ಹಲವು ತಿಂಗಳುಗಳಿಂದ ನಡೆಯುತ್ತಿದೆ. ಜಲ್ಲಿ ಪುಡಿ ಹಾಗೂ ಕಲ್ಲುಗಳ ರಾಶಿಯನ್ನು ರಸ್ತೆ ಬದಿಯಲ್ಲಿ ಸುರಿದು ಹಾಗೆಯೇ ಬಿಟ್ಟಿರುವುದು ವಾಹನ ಸವಾರರಿಗೆ ತೀವ್ರ ಅಪಾಯಕಾರಿಯಾಗಿ ಪರಿಣಮಿಸಿದೆ. ರಸ್ತೆ ಅಗಲೀಕರಣ ಕಾಮಗಾರಿಯು ಸಂಪೂರ್ಣ ಮಂದಗತಿಯಲ್ಲಿ ಸಾಗಿದೆ ಅಲ್ಲದೆ, ಯಾವುದೇ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಇರುವುದರಿಂದ ವಾಹನ ಚಾಲನೆ ಮಾಡುವುದು ಕಷ್ಟಕರವಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಸೋಮವಾರ ಬೆಳಿಗ್ಗೆ ಹಿರೇಮರಳ್ಳಿ ಗ್ರಾಮದ ತಿಮ್ಮೇಗೌಡ ಅವರ ಪುತ್ರ ರೈತ ವೆಂಕಟೇಶ್ ಎಂಬವರು ನಂಜನಗೂಡಿನಲ್ಲಿ ನಡೆದ ರಥೋತ್ಸವದಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದು,ಪೂಜೆ ಮುಗಿಸಿಕೊಂಡು ತಮ್ಮ ಅಳಿಯನೊಂದಿಗೆ ಬೈಕ್‌ನಲ್ಲಿ ಊರಿಗೆ ವಾಪಸ್ಸಾಗುತ್ತಿದ್ದ ವೇಳೆ, ಪಾಂಡವಪುರದ ಬಣ್ಣಾರಿಯಮ್ಮ ದೇವಸ್ಥಾನದ ಸಮೀಪ ರಸ್ತೆಯ ಮೇಲೆ ಹರಡಿದ್ದ ಜಲ್ಲಿ ಪುಡಿಯಿಂದಾಗಿ ಬೈಕ್ ನಿಯಂತ್ರಣ ತಪ್ಪಿ ವೆಂಕಟೇಶ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಅವರ ಕೈ ಮೂಳೆ ಮುರಿದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸದರೆ ಚೇತರಿಸಿಕೊಳ್ಳಲು ತಿಂಗಳುಗಳೇ ಬೇಕಾಗುತ್ತದೆ.

ಹೆಲ್ಮೆಟ್ ಧರಿಸಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ರಸ್ತೆಯ ದುಸ್ಥಿತಿ, ಅವ್ಯವಸ್ಥೆ ಇನ್ನಷ್ಟು ಅಪಘಾತಗಳಿಗೆ ಆಹ್ವಾನ ನೀಡುತ್ತಿದೆ ಎಂಬ ಆತಂಕ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುವನ್ನು ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಇಂತಹ ನಿರ್ಲಕ್ಷ್ಯದಿಂದ ಯಾರಾದರೂ ಜೀವ ಕಳೆದುಕೊಂಡರೆ ಯಾರು ಹೊಣೆ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕಾಮಗಾರಿ ನಡೆಸುವಾಗ ಕನಿಷ್ಠ ಸುರಕ್ಷತಾ ಕ್ರಮಗಳನ್ನೂ ಪಾಲಿಸದೆ ಸಾರ್ವಜನಿಕರ ಜೀವವನ್ನು ಅಪಾಯಕ್ಕೆ ತಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೂಡ ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ದಿನನಿತ್ಯ ಪ್ರಯಾಣಿಕರು ಸಂಕಷ್ಟ ಅನುಭವಿಸುತಿದ್ದಾರೆ. ರಸ್ತೆಯಲ್ಲಿ ಬೇಕಾಬಿಟಿ ರಾಶಿ ಬಿದ್ದಿರುವ ಜಲ್ಲಿ ಪುಡಿಯನ್ನು ತಕ್ಷಣ ತೆರವುಗೊಳಿಸಬೇಕು, ರಸ್ತೆಯನ್ನು ಸುಧಾರಣೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇಲ್ಲವಾದರೆ ಸಂಬಂಧಪಟ್ಟವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

35 mins ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

1 hour ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

2 hours ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

2 hours ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

3 hours ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

3 hours ago