Andolana originals

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್

ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ

ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು ಮಂದಗತಿಯಲ್ಲಿ ನಡೆಯುತ್ತಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿವೆ. ಪಟ್ಟಣದ ಶ್ರೀ ಬಣ್ಣಾರಿ ಅಮ್ಮನ್ ದೇವಾಲಯದ ಸಮೀಪ ಸೋಮವಾರ ಮತ್ತೊಂದು ಅಪಘಾತ ಸಂಭವಿಸಿದ್ದು, ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ (ಪಾಂಡವಪುರ ಸಮೀಪ) ಅಗಲೀಕರಣ ಕಾಮಗಾರಿಯು ಮಂದಿಗತಿಯಲ್ಲಿ ಸಾಗಿದೆ. ಹಲವು ತಿಂಗಳುಗಳಿಂದ ನಡೆಯುತ್ತಿದೆ. ಜಲ್ಲಿ ಪುಡಿ ಹಾಗೂ ಕಲ್ಲುಗಳ ರಾಶಿಯನ್ನು ರಸ್ತೆ ಬದಿಯಲ್ಲಿ ಸುರಿದು ಹಾಗೆಯೇ ಬಿಟ್ಟಿರುವುದು ವಾಹನ ಸವಾರರಿಗೆ ತೀವ್ರ ಅಪಾಯಕಾರಿಯಾಗಿ ಪರಿಣಮಿಸಿದೆ. ರಸ್ತೆ ಅಗಲೀಕರಣ ಕಾಮಗಾರಿಯು ಸಂಪೂರ್ಣ ಮಂದಗತಿಯಲ್ಲಿ ಸಾಗಿದೆ ಅಲ್ಲದೆ, ಯಾವುದೇ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಇರುವುದರಿಂದ ವಾಹನ ಚಾಲನೆ ಮಾಡುವುದು ಕಷ್ಟಕರವಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಸೋಮವಾರ ಬೆಳಿಗ್ಗೆ ಹಿರೇಮರಳ್ಳಿ ಗ್ರಾಮದ ತಿಮ್ಮೇಗೌಡ ಅವರ ಪುತ್ರ ರೈತ ವೆಂಕಟೇಶ್ ಎಂಬವರು ನಂಜನಗೂಡಿನಲ್ಲಿ ನಡೆದ ರಥೋತ್ಸವದಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದು,ಪೂಜೆ ಮುಗಿಸಿಕೊಂಡು ತಮ್ಮ ಅಳಿಯನೊಂದಿಗೆ ಬೈಕ್‌ನಲ್ಲಿ ಊರಿಗೆ ವಾಪಸ್ಸಾಗುತ್ತಿದ್ದ ವೇಳೆ, ಪಾಂಡವಪುರದ ಬಣ್ಣಾರಿಯಮ್ಮ ದೇವಸ್ಥಾನದ ಸಮೀಪ ರಸ್ತೆಯ ಮೇಲೆ ಹರಡಿದ್ದ ಜಲ್ಲಿ ಪುಡಿಯಿಂದಾಗಿ ಬೈಕ್ ನಿಯಂತ್ರಣ ತಪ್ಪಿ ವೆಂಕಟೇಶ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಅವರ ಕೈ ಮೂಳೆ ಮುರಿದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸದರೆ ಚೇತರಿಸಿಕೊಳ್ಳಲು ತಿಂಗಳುಗಳೇ ಬೇಕಾಗುತ್ತದೆ.

ಹೆಲ್ಮೆಟ್ ಧರಿಸಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ರಸ್ತೆಯ ದುಸ್ಥಿತಿ, ಅವ್ಯವಸ್ಥೆ ಇನ್ನಷ್ಟು ಅಪಘಾತಗಳಿಗೆ ಆಹ್ವಾನ ನೀಡುತ್ತಿದೆ ಎಂಬ ಆತಂಕ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುವನ್ನು ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಇಂತಹ ನಿರ್ಲಕ್ಷ್ಯದಿಂದ ಯಾರಾದರೂ ಜೀವ ಕಳೆದುಕೊಂಡರೆ ಯಾರು ಹೊಣೆ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕಾಮಗಾರಿ ನಡೆಸುವಾಗ ಕನಿಷ್ಠ ಸುರಕ್ಷತಾ ಕ್ರಮಗಳನ್ನೂ ಪಾಲಿಸದೆ ಸಾರ್ವಜನಿಕರ ಜೀವವನ್ನು ಅಪಾಯಕ್ಕೆ ತಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೂಡ ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ದಿನನಿತ್ಯ ಪ್ರಯಾಣಿಕರು ಸಂಕಷ್ಟ ಅನುಭವಿಸುತಿದ್ದಾರೆ. ರಸ್ತೆಯಲ್ಲಿ ಬೇಕಾಬಿಟಿ ರಾಶಿ ಬಿದ್ದಿರುವ ಜಲ್ಲಿ ಪುಡಿಯನ್ನು ತಕ್ಷಣ ತೆರವುಗೊಳಿಸಬೇಕು, ರಸ್ತೆಯನ್ನು ಸುಧಾರಣೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇಲ್ಲವಾದರೆ ಸಂಬಂಧಪಟ್ಟವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago