ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು
ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಕಣದಲ್ಲಿ ಒಕ್ಕಣೆಗೆ ಹಾಕಿದ್ದ ೧೦ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ಸಂಪೂರ್ಣವಾಗಿ ಹಾಳಾಗಿದ್ದು, ಅಂದಾಜು ೮ ಲಕ್ಷ ರೂ. ನಷ್ಟವಾಗಿದೆ.
ರೈತರು ರಾಗಿ ಬೆಳೆಯನ್ನು ಕಣದಲ್ಲಿ ಒಕ್ಕಣೆಗೆ ಹಾಕಿದ್ದು, ಅವಳಿ ತಾಲ್ಲೂಕುಗಳ ಕೆಲವೆಡೆ ಕಳೆದ ರಾತ್ರಿ ಇದ್ದಕ್ಕಿದ್ದಂತೆ ಸುರಿದ ಭಾರೀ ಮಳೆಯಿಂದ ಸಂಪೂರ್ಣವಾಗಿ ಹಾನಿಯಾಗಿದೆ.
ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಸಮೀಪದ ಕಾವಲು ಹೊಸೂರು ಗ್ರಾಮದ ರೈತರು ರಾಗಿಯನ್ನು ಕಣದಲ್ಲಿ ಒಕ್ಕಣೆ ಮಾಡಿದ್ದರು. ಅಕಾಲಿಕ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ.
ರೈತರು ರಾಗಿ ಬೆಳೆಯನ್ನು ಮೆದೆ ಹಾಕಿರುತ್ತಾರೆ. ಮಳೆಗಾಲ ನಿಂತ ಮೇಲೆ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಜಮೀನಿನಲ್ಲಿ ಕಣ ಮಾಡಿಕೊಂಡು ರಾಗಿ ಒಕ್ಕಣೆ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ. ಅಕಾಲಿಕ ಮಳೆ ಸುರಿದಿರುವುದು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಅದೇ ರೀತಿ ಕಾವಲು ಹೊಸೂರು ಗ್ರಾಮದ ಹುಚ್ಚೇಗೌಡ, ರಾಮೇಗೌಡ, ಸಣ್ಣಸ್ವಾಮಿ, ಕೆಂಪಮ್ಮ, ಕೃಷ್ಣೇಗೌಡ, ಕುಮಾರ್ ಸೇರಿದಂತೆ ಹಲವು ರೈತ ಕುಟುಂಬಗಳವರು ಸುಮಾರು ೧೦ ಎಕರೆಯಲ್ಲಿ ರಾಗಿ ಬೆಳೆ ಬೆಳೆದು, ರಾಗಿ ಹುಲ್ಲನ್ನು ಕಣದಲ್ಲಿ ಹರಡಿದ್ದರು. ಆದರೆ ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆ ಕಣದಲ್ಲಿದ್ದ ರಾಗಿ ಮತ್ತು ಹುಲ್ಲನ್ನು ಕೊಚ್ಚಿಕೊಂಡು ಹೋಗಿದೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.
ಶಾಸಕ ರವಿಶಂಕರ್ ಹಾಗೂ ತಹಸಿಲ್ದಾರ್ ಅವರು ಅಕಾಲಿಕ ಮಳೆಯಿಂದ ನಷ್ಟಕ್ಕೀಡಾದ ರೈತರಿಗೆ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳ ಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಂಪೆರೆದ ಮಳೆ: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಝಳದಿಂದ ಬಸವಳಿದಿದ್ದ ಜನರಿಗೆ ಹಾಗೂ ಭೂಮಿಗೆ ಮಳೆ ತಂಪೆರೆದಿದೆ. ಕೆ.ಆರ್.ನಗರ ತಾಲ್ಲೂಕಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾದರೆ, ಸಾಲಿಗ್ರಾಮ ತಾಲ್ಲೂಕಿನ ವಿವಿಧೆಡೆಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮವಾಗಿ ಮಳೆ ಸುರಿದಿದೆ.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…