Andolana originals

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು

ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಕಣದಲ್ಲಿ ಒಕ್ಕಣೆಗೆ ಹಾಕಿದ್ದ ೧೦ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ಸಂಪೂರ್ಣವಾಗಿ ಹಾಳಾಗಿದ್ದು, ಅಂದಾಜು ೮ ಲಕ್ಷ ರೂ. ನಷ್ಟವಾಗಿದೆ.

ರೈತರು ರಾಗಿ ಬೆಳೆಯನ್ನು ಕಣದಲ್ಲಿ ಒಕ್ಕಣೆಗೆ ಹಾಕಿದ್ದು, ಅವಳಿ ತಾಲ್ಲೂಕುಗಳ ಕೆಲವೆಡೆ ಕಳೆದ ರಾತ್ರಿ ಇದ್ದಕ್ಕಿದ್ದಂತೆ ಸುರಿದ ಭಾರೀ ಮಳೆಯಿಂದ ಸಂಪೂರ್ಣವಾಗಿ ಹಾನಿಯಾಗಿದೆ.

ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಸಮೀಪದ ಕಾವಲು ಹೊಸೂರು ಗ್ರಾಮದ ರೈತರು ರಾಗಿಯನ್ನು ಕಣದಲ್ಲಿ ಒಕ್ಕಣೆ ಮಾಡಿದ್ದರು. ಅಕಾಲಿಕ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ.

ರೈತರು ರಾಗಿ ಬೆಳೆಯನ್ನು ಮೆದೆ ಹಾಕಿರುತ್ತಾರೆ. ಮಳೆಗಾಲ ನಿಂತ ಮೇಲೆ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಜಮೀನಿನಲ್ಲಿ ಕಣ ಮಾಡಿಕೊಂಡು ರಾಗಿ ಒಕ್ಕಣೆ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ. ಅಕಾಲಿಕ ಮಳೆ ಸುರಿದಿರುವುದು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಅದೇ ರೀತಿ ಕಾವಲು ಹೊಸೂರು ಗ್ರಾಮದ ಹುಚ್ಚೇಗೌಡ, ರಾಮೇಗೌಡ, ಸಣ್ಣಸ್ವಾಮಿ, ಕೆಂಪಮ್ಮ, ಕೃಷ್ಣೇಗೌಡ, ಕುಮಾರ್ ಸೇರಿದಂತೆ ಹಲವು ರೈತ ಕುಟುಂಬಗಳವರು ಸುಮಾರು ೧೦ ಎಕರೆಯಲ್ಲಿ ರಾಗಿ ಬೆಳೆ ಬೆಳೆದು, ರಾಗಿ ಹುಲ್ಲನ್ನು ಕಣದಲ್ಲಿ ಹರಡಿದ್ದರು. ಆದರೆ ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆ ಕಣದಲ್ಲಿದ್ದ ರಾಗಿ ಮತ್ತು ಹುಲ್ಲನ್ನು ಕೊಚ್ಚಿಕೊಂಡು ಹೋಗಿದೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಶಾಸಕ ರವಿಶಂಕರ್ ಹಾಗೂ ತಹಸಿಲ್ದಾರ್ ಅವರು ಅಕಾಲಿಕ ಮಳೆಯಿಂದ ನಷ್ಟಕ್ಕೀಡಾದ ರೈತರಿಗೆ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳ ಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಂಪೆರೆದ ಮಳೆ: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಝಳದಿಂದ ಬಸವಳಿದಿದ್ದ ಜನರಿಗೆ ಹಾಗೂ ಭೂಮಿಗೆ ಮಳೆ ತಂಪೆರೆದಿದೆ. ಕೆ.ಆರ್.ನಗರ ತಾಲ್ಲೂಕಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾದರೆ, ಸಾಲಿಗ್ರಾಮ ತಾಲ್ಲೂಕಿನ ವಿವಿಧೆಡೆಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮವಾಗಿ ಮಳೆ ಸುರಿದಿದೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago