Andolana originals

ಕಾವಾದಲ್ಲಿ ಮೊಬೈಲ್ ಗೀಳಿನ ಕಲೆಗಳ ಅನಾವರಣ

ಪ್ರಶಾಂತ್ ಎಸ್.

ತೊಗಲು ಗೊಂಬೆ ಭಿತ್ತಿ ಚಿತ್ರಕಲಾ ಶಿಬಿರ ಮತ್ತು ಮೈಸೂರು ಶೈಲಿಯ ಸಾಂಪ್ರದಾಯಿಕ ಚಿತ್ರಕಲೆ ಪ್ರದರ್ಶನಕ್ಕೆ ಚಾಲನೆ 

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಸಿದ್ದಾರ್ಥನಗರದ ಶ್ರೀ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು(ಕಾವಾ) ಆವರಣದಲ್ಲಿ ಆಯೋಜಿಸಿರುವ ತೊಗಲು ಗೊಂಬೆ ಭಿತ್ತಿ ಚಿತ್ರಕಲಾ ಶಿಬಿರ ಮತ್ತು ಮೈಸೂರು ಶೈಲಿಯ ಸಾಂಪ್ರದಾಯಿಕ ಚಿತ್ರಕಲೆ ಪ್ರದರ್ಶನಕ್ಕೆ ಚಾಲನೆ ದೊರೆಯಿತು.

ಲಲಿತಕಲೆ ಮತ್ತು ಕರಕುಶಲ ಕಲೆ ಉಪ ಸಮಿತಿ ವತಿಯಿಂದ ಪ್ರದರ್ಶಿಸಲಾದ ಭಿತ್ತಿ ಚಿತ್ತಾರ, ಗೋಡೆ ಚಿತ್ತಾರಗಳು ಸಾಮಾಜಿಕ ಸಂದೇಶವನ್ನು ಸಾರಿದವು. ಕಾವಾ ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಕೈಚಳಕ ದಲ್ಲಿ ಅರಳಿರುವ ಕಲಾ ಕೃತಿಗಳು ಮಕ್ಕಳ ಮೊಬೈಲ್ ಗೀಳಿನ ಬಗ್ಗೆ ತೆರೆದಿಟ್ಟವು.

ಆಟೋಟವಿಲ್ಲ, ಮೊಬೈಲೇ ಎಲ್ಲಾ!: ಇಂದಿನ ಮಕ್ಕಳಿಗೆ ಹೊರಾಂಗಣ ಆಟೋಟಗಳಿಗೆ ಅವಕಾಶ ಕಡಿಮೆಯಾಗಿರುವುದರಿಂದ ಅನಿವಾರ್ಯವಾಗಿ ಮನೆಯಲ್ಲೇ ಉಳಿಯುತ್ತಿದ್ದು, ಪೋಷಕರಿಂದ ಹಠ ಮಾಡಿ ಮೊಬೈಲ್ ಫೋನ್, ಟ್ಯಾಬ್‌ಗಳನ್ನು ಪಡೆಯುತ್ತಿದ್ದು, ಮೊಬೈಲ್ ವ್ಯಸನಕ್ಕೆ ಬಲಿಯಾಗುತ್ತಿರುವ ಮಕ್ಕಳ ಊಟ, ನಿದ್ರೆ ಮೊದಲಾದ ದೈನಂದಿನ ಚಟುವಟಿಕೆಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಮೊಬೈಲ್ ಸ್ಕ್ರೀನ್ ಮೇಲೆ ಆಗುವ ಬೆಳಕಿನ ವ್ಯತ್ಯಾಸಗಳು ಕಣ್ಣುಗಳ ಮುಖಾಂತರ ಮೆದುಳಿನ ಮೇಲೆ ಯಾವ ರೀತಿ ದುಷ್ಪರಿಣಾಮ ಬೀರುತ್ತದೆ ಎಂಬುದನ್ನು ಕಲಾಕೃತಿಗಳ ಮೂಲಕ ಕಲಾವಿದರು ಅನಾವರಣಗೊಳಿಸಿದರು.

ಕಾವಾ ಗೋಡೆಗಳಲ್ಲಿ ವಿಭಿನ್ನ ಕಲಾ ಪ್ರದರ್ಶನ: ವರ್ಲಿ ಕಲೆ, ಹಲವು ಶೈಲಿಯ ರೇಖಾ ಚಿತ್ರಗಳು, ಗಾಮೀಣ ಜನರ ಸಂಸ್ಕೃತಿ ಹಾಗೂ ಜೀವನ ಶೈಲಿಯನ್ನು ಪ್ರತಿಬಿಂಬಿಸುತ್ತಿದ್ದು, ಪ್ರೇಕ್ಷಕರ ಗಮನ ಸೆಳೆದವು.

ಕಾವಾ ಹುದ್ದೆಗಳ ಭರ್ತಿಗೆ ಕ್ರಮ: ತಂಗಡಗಿ

ಮೈಸೂರು: ಕಾವಾದಲ್ಲಿ ಈಗಾಗಲೇ ೫೯ ಹುದ್ದೆಗಳು ಖಾಲಿ ಇದ್ದು, ಈ ಪೈಕಿ ೧೬ ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದ ಹುದ್ದೆಗಳನ್ನು ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ ಸಂಗಪ್ಪ ಹೇಳಿದರು. ತೊಗಲು ಗೊಂಬೆ ಭಿತ್ತಿ ಚಿತ್ರಕಲಾ ಶಿಬಿರ ಮತ್ತು ಮೈಸೂರು ಶೈಲಿಯ ಸಾಂಪ್ರದಾಯಿಕ ಚಿತ್ರಕಲೆ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾವಾ ಕಾಲೇಜಿನ ಆವರಣದಲ್ಲಿಯೇ ಒಂದು ವಿಭಿನ್ನವಾದ ಕಲಾ ಗ್ಯಾಲರಿಯನ್ನು ನಿರ್ಮಾಣ ಮಾಡುವ ಚಿಂತನೆ ಇದೆ. ಕಾವಾ ಸಂಸ್ಥೆಯನ್ನು ಎಲ್ಲರ ಗಮನಸೆಳೆಯುವಂತೆ ಮಾಡಲು ಸಹಕರಿಸಲಾಗುವುದು ಎಂದು ಹೇಳಿದರು. ಶಾಸಕ ತನ್ವೀರ್ ಸೇಠ್ ಮಾತನಾಡಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ, ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೆ.ಎಂ. ಗಾಯತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎಂ.ವಿ.ವೆಂಕ ಟೇಶ್,ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ.ರಮೇಶ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

3 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

3 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

3 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

4 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

4 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

5 hours ago