Andolana originals

ಹೃದ್ರೋಗ ಘಟಕ ಶೀಘ್ರ ಆರಂಭಿಸಲು ಒತ್ತಾಯ

ನವೀನ್ ಡಿಸೋಜ

ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಚರ್ಚೆ; ಸರ್ಕಾರದ ಮಟ್ಟದಲ್ಲಿ ಅಂತಿಮವಾಗಬೇಕಿದೆ ಪ್ರಕ್ರಿಯೆ

ಮಡಿಕೇರಿ: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಉದ್ದೇಶಿತ ಹೃದ್ರೋಗ ಘಟಕ ಶೀಘ್ರ ಆರಂಭಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಹೃದಯಾಘಾತಕ್ಕೆ ಸಂಬಂಧಿಸಿದಂತೆ ಜನರಲ್ಲಿ ಹೆಚ್ಚಿನ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿಯೂ ಆಸ್ಪತ್ರೆಗಳಿಗೆ ಬರುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಮಡಿಕೇರಿಯಲ್ಲಿರುವ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಗೆ ಕೊಡಗು ಜಿಲ್ಲೆ ಜನತೆ ಮಾತ್ರವಲ್ಲದೆ ಹೊರಜಿಲ್ಲೆಯ ನಿವಾಸಿಗಳೂ ಬರುತ್ತಿದ್ದಾರೆ. ಇಂತಹ ಸಂದಭದಲ್ಲಿ ಹೃದ್ರೋಗ ತಪಾಸಣೆ, ಚಿಕಿತ್ಸೆಯ ಅಗತ್ಯತೆ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಕೋಯಿಮ್ಸ್‌ನಲ್ಲಿ ಯೋಜಿತ ಹೃದ್ರೋಗ ಘಟಕವನ್ನು ಶೀಘ್ರ ಆರಂಭಿಸ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ (ಜಿಲ್ಲಾ ಆಸ್ಪತ್ರೆ) ಸೇರಿದಂತೆ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಹೃದ್ರೋಗ ಘಟಕಗಳಿಲ್ಲ. ಒಂದೆರಡು ಖಾಸಗಿ ಆಸ್ಪತ್ರೆಗಳಲ್ಲಿ ನಿಯಮಿತವಾಗಿ ಬೇರೆ ಆಸ್ಪತ್ರೆಗಳ ಹೃದ್ರೋಗತಜ್ಞರು ಲಭ್ಯವಿರುತ್ತಾರಾದರೂ ಇಸಿಜಿ, ಎಕೋ ಸೇವೆ ಹೊರತುಪಡಿಸಿ ಹೆಚ್ಚಿನ ಚಿಕಿತ್ಸಾ ವ್ಯವಸ್ಥೆಯಿಲ್ಲ. ಎಕೋ ಇರುವುದೂ ಕೆಲವು ಖಾಸಗಿ ಸಂಸ್ಥೆಗಳಲ್ಲಿ ಮಾತ್ರ. ಹೀಗಾಗಿ ಹೃದಯಸಂಬಂಧಿ ತೊಂದರೆ ಕಾಣಿಸಿಕೊಂಡರೆ ಮೈಸೂರು, ಮಂಗಳೂರು ಭಾಗದ ಆಸ್ಪತ್ರೆಗಳತ್ತ ತೆರಳುವುದು ಜಿಲ್ಲೆಯ ಜನರಿಗೆ ಅನಿವಾರ್ಯವಾಗಿದೆ.

೨೦೨೪ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಯ ಕೋಯಿಮ್ಸ್‌ನಲ್ಲಿ ಹೃದ್ರೋಗ ಘಟಕ ಆರಂಭಿಸುವುದಾಗಿ ಘೋಷಿಸಿದ್ದರು. ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಘಟಕ ಆರಂಭಿಸುವುದು ಈ ಯೋಜನೆಯಾಗಿದ್ದು, ತಾಂತ್ರಿಕ ಕಾರಣಗಳಿಂದ ಹೃದ್ರೋಗ ಘಟಕ ಇನ್ನೂ ಆರಂಭವಾಗಿಲ್ಲ.

ಸರ್ಕಾರದಿಂದ ಉಪಕರಣಗಳನ್ನು ಅಳವಡಿಸಿ ವೈದ್ಯ ಸೇವೆಯನ್ನು ಖಾಸಗಿಯ ವರಿಂದ ಆರಂಭಿಸುವುದೇ ಅಥವಾ ಮೂಲ ಸೌಕರ್ಯಗಳನ್ನು ಒದಗಿಸಿ ಸಂಪೂರ್ಣವಾಗಿ ಖಾಸಗಿ ಸಂಸ್ಥೆಗಳಿಂದಲೇ ಘಟಕ ಆರಂಭಿಸುವುದೇ ಎಂಬುದರ ಕುರಿತು ಸದ್ಯ ವರದಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ಈ ಬಗ್ಗೆ ಅಂತಿಮ ನಿರ್ಧಾರವಾಗಬೇಕಿದೆ.

ಸದ್ಯ ಖಾಸಗಿ ಸಂಸ್ಥೆಯೊಂದು ಜಿಲ್ಲೆಯಲ್ಲಿ ಯಾವ ರೀತಿಯಲ್ಲಿ ಹೃದ್ರೋಗ ಘಟಕ ಆರಂಭಿಸಬಹುದು. ಇಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಏನೆಲ್ಲಾ ಸೌಲಭ್ಯಗಳು ಬೇಕಾಗಲಿವೆ ಎಂಬ ಕುರಿತು ವರದಿ ತಯಾರಿಸಿದೆ. ಮೂರು ಮಾದರಿಗಳಲ್ಲಿ ಘಟಕ ಆರಂಭಿಸುವ ಕುರಿತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ವರದಿ ಸಲ್ಲಿಸಿದೆ. ಇಲ್ಲಿಂದ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಗೆ ವರದಿ ಕಳುಹಿಸಲಾಗಿದ್ದು, ಘಟಕಕ್ಕೆ ಬೇಕಾಗುವ ಉಪಕರಣಗಳು ಮತ್ತು ಸೌಲಭ್ಯಗಳನ್ನು ಕಲ್ಪಿಸಲು ಅನುಮೋದನೆ ಸಿಗಬೇಕಾಗಿದೆ. ನಂತರದ ಹಂತದಲ್ಲಿ ಸರ್ಕಾರದಿಂದ ಟೆಂಡರ್ ಕರೆದು ಖಾಸಗಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡ ಬಳಿಕವಷ್ಟೇ ಹೃದ್ರೋಗ ಘಟಕ ಆರಂಭವಾಗಲಿದೆ. ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ ೪ ರಿಂದ ೬ ತಿಂಗಳು ಬೇಕು ಎಂದು ಕೋಯಿಮ್ಸ್ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ತಿಳಿಸಿದ್ದಾರೆ.

ಘಟಕ ಆರಂಭಕ್ಕೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಅನುಮೋದನೆಯೊಂದಿಗೆ ಉಪಕರಣಗಳ ಅಳವಡಿಕೆಗೆ ಅನುದಾನ, ಘಟಕಕ್ಕೆ ಮೂಲಸೌಲಭ್ಯಗಳನ್ನು ಕಲ್ಪಿಸುವುದು, ನಾನಾ ಹಂತಗಳಲ್ಲಿ ಟೆಂಡರ್ ಪ್ರಕ್ರಿಯೆ, ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ ಮತ್ತಿತರ ಪ್ರಕ್ರಿಯೆಗಳು ನಡೆಯಬೇಕಿದೆ. ಹೃದ್ರೋಗ ಘಟಕಕ್ಕೆ ಮೂಲಸೌಲಭ್ಯಗಳನ್ನು ಒದಗಿಸಿದ ಬಳಿಕ ಸರ್ಕಾರದ ಜಯದೇವ ಹೃದ್ರೋಗ ಆಸ್ಪತ್ರೆಯಿಂದಲೇ ಸೇವೆ ನೀಡುವ ನಿಟ್ಟಿನಲ್ಲಿಯೂ ಚಿಂತನೆ ನಡೆದಿದೆ. ಆದರೆ ಜಯದೇವ ಆಸ್ಪತ್ರೆಯಲ್ಲಿ ತಜ್ಞವೈದ್ಯರ ಕೊರತೆಯಿರುವುದು ಇದಕ್ಕೆ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ. ಹೃದ್ರೋಗ ಘಟಕ ಆರಂಭಕ್ಕೆ ಸಂಬಂಧಪಟ್ಟಂತೆ ತಾಂತ್ರಿಕ ಪ್ರಕ್ರಿಯೆಗಳು ನಡೆಯುತ್ತಿವೆ.

ಗುರುವಾರ ಇದೇ ವಿಚಾರವಾಗಿ ಸಚಿವರನ್ನು ಭೇಟಿಯಾಗಿ ಚರ್ಚಿಸಲಿದ್ದೇವೆ. ಖಾಸಗಿ ಸಂಸ್ಥೆಗೆ ಜವಾಬ್ದಾರಿ ನೀಡಿದರೂ ದೊಡ್ಡಮಟ್ಟದಲ್ಲಿ ಆಸ್ಪತ್ರೆಗಳನ್ನು ಹೊಂದಿರುವ ಸಂಸ್ಥೆಗಳಿಗೇ ನೀಡಬೇಕೆಂಬ ಚಿಂತನೆಯಿದೆ. ಸರ್ಕಾರದ ಮಟ್ಟದಲ್ಲಿ ಕೆಲವೊಂದು ಪ್ರಕ್ರಿಯೆಗಳು ಅಂತಿಮವಾಗಬೇಕಿದೆ.

” ಹೃದ್ರೋಗ ಘಟಕ ಆರಂಭಕ್ಕೆ ಸಂಬಂಧಪಟ್ಟಂತೆತಾಂತ್ರಿಕ ಪ್ರಕ್ರಿಯೆಗಳು ನಡೆಯುತ್ತಿವೆ. ಗುರುವಾರ ಇದೇ ವಿಚಾರವಾಗಿ ಸಚಿವರನ್ನು ಭೇಟಿಯಾಗಿ ಚರ್ಚಿಸಲಿದ್ದೇವೆ. ಖಾಸಗಿ ಸಂಸ್ಥೆಗೆ ಜವಾಬ್ದಾರಿ ನೀಡಿದರೂ ದೊಡ್ಡ ಮಟ್ಟದಲ್ಲಿ ಆಸ್ಪತ್ರೆಗಳನ್ನು ಹೊಂದಿರುವ ಸಂಸ್ಥೆಗಳಿಗೇ ನೀಡಬೇಕೆಂಬ ಚಿಂತನೆಯಿದೆ. ಸರ್ಕಾರದ ಮಟ್ಟದಲ್ಲಿ ಕೆಲವೊಂದು ಪ್ರಕ್ರಿಯೆಗಳು ಅಂತಿಮವಾಗಬೇಕಿದೆ.”

ಡಾ.ಎ.ಜೆ.ಲೋಕೇಶ್, ಡೀನ್ ಮತ್ತು ನಿರ್ದೇಶಕರು, ಕೋಯಿಮ್ಸ್ ಮಡಿಕೇರಿ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

4 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago