Andolana originals

ತಂತ್ರಜ್ಞಾನದ ಬಳಕೆ; ʼಸಕಾಲದಲ್ಲಿʼ ದಾಖಲೆ ಲಭ್ಯ

ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ನಾಡಕಚೇರಿಯ ಕಾರ್ಯವೈಖರಿಗೆ ಮೆಚ್ಚುಗೆ

ಕೆ.ಟಿ.ಮೋಹನ್‌ ಕುಮಾರ್‌

ಸಾಲಿಗ್ರಾಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿದ್ದರೂ ಕೂಡ ಸಾರ್ವಜನಿಕರ ಕೆಲಸಗಳು ನಿಗದಿತ ಸಮಯದಲ್ಲಿ ಸರಿಯಾಗಿ ಆಗುತ್ತಿಲ್ಲ. ಜನಸಾಮಾನ್ಯರಿಗೆ ಬೇಕಾದ ಅಗತ್ಯ ದಾಖಲೆಗಳು ಸಕಾಲಕ್ಕೆ ಸಿಗುವುದಿಲ್ಲ ಎಂಬ ಜನರ ಆರೋಪಗಳ ನಡುವೆಯೂ ‘ಸಕಾಲ’ ಯೋಜನೆಯಡಿ ವಿವಿಧ ಪ್ರಕಾರಗಳ ದಾಖಲೆ ಗಳನ್ನು ಕೆಲವೇ ಗಂಟೆಗಳಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡುವ ಮೂಲಕ ತಾಲ್ಲೂಕಿನ ಮಿರ್ಲೆ ನಾಡಕಚೇರಿಯು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸಲ್ಲಿಸಬೇಕು. ಹೀಗೆ ಮಾಡಿದಾಗ ಕೆಲಸವನ್ನು ಸಕಾಲದಲ್ಲಿ ಮಾಡಲು ಸಹಕಾರವಾಗುತ್ತದೆ. ಆ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಕಂದಾಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕಂದಾಯ ಇಲಾಖೆಯ ‘ಸಕಾಲ’ದಲ್ಲಿ ಆದಾಯ ಪ್ರಮಾಣ ಪತ್ರ, ವಾಸ ಸ್ಥಳ, ವಂಶವೃಕ್ಷ, ವ್ಯವಸಾಯ ದೃಢೀಕರಣ ಪತ್ರ ಸೇರಿದಂತೆ ಹಲವು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಸಂಬಂಧಿಸಿದ ದಾಖಲಾತಿ ಪಡೆಯಲು ಹಲವು ದಿನಗಳು ಕಳೆದರೂ ಕೂಡ ಅವುಗಳು ದೊರೆಯುತ್ತಿ ರಲಿಲ್ಲ. ಆದರೆ ಇಂದು ‘ಸಕಾಲ’ದಲ್ಲಿ ತಂತ್ರ ಜ್ಞಾನವನ್ನು ಅಳವಡಿಸಿಕೊಂಡು ಸಂಬಂಧ ಪಟ್ಟ ಅರ್ಜಿಯನ್ನು ಒಂದೇ ದಿನದಲ್ಲಿ ವಿಲೇ ವಾರಿ ಮಾಡಿ ಅರ್ಜಿದಾರರಿಗೆ ದಾಖಲಾತಿ ಸಿಗುವಂತೆ ಮಾಡಲು ಕಂದಾಯ ಇಲಾಖೆಯು ಮುಂದಾಗಿದೆ.

ಕಂದಾಯ ಇಲಾಖೆಯಲ್ಲಿ ದಾಖಲಾತಿ ಗಳಿಗಾಗಿ ‘ಸಕಾಲ’ದಲ್ಲಿ ಅರ್ಜಿ ಸಲ್ಲಿಸುವಾಗ ಅರ್ಜಿಯ ಜೊತೆಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ಅರ್ಜಿಯ ಜೊತೆಯಲ್ಲಿ ನೀಡಬೇಕಾಗಿತ್ತು. ಆದರೆ ಈಗ ಅರ್ಜಿ ಸಲ್ಲಿಸುವಾಗ ನೀಡಬೇಕಾದ ದಾಖಲೆಗಳ ಮೂಲ ಪ್ರತಿಗಳನ್ನು ನೀಡಿದರೆ ಅವುಗಳನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡುವುದರಿಂದ ಅಧಿಕಾರಿಗಳು ಅರ್ಜಿ ಮತ್ತು ಅದರ ಜೊತೆಯಲ್ಲಿನ ದಾಖಲೆಗಳನ್ನು ತಾವು ಇದ್ದ ಸ್ಥಳದಲ್ಲೇ ಪರಿಶೀಲಿಸಿ ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿಯನ್ನು ವರ್ಗಾಯಿಸುವುದರಿಂದ ಈ ಪ್ರಕ್ರಿಯೆಯು ಕೆಲವೇ ಗಂಟೆಗಳಲ್ಲಿ ಪೂರ್ಣಗೊಂಡು ಅರ್ಜಿದಾರರಿಗೆ ಒಂದೇ ದಿನದಲ್ಲಿ ದಾಖಲಾತಿ ಲಭ್ಯವಾಗಲಿದೆ.

ಈ ಹಿಂದೆ ‘ಸಕಾಲ’ದಲ್ಲಿ ಅರ್ಜಿ ಸಲ್ಲಿಸಿದಾಗ ಅರ್ಜಿಗಳು ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು ಒಬ್ಬ ಅಧಿಕಾರಿಯಿಂದ ಮತ್ತೊಬ್ಬ ಅಧಿಕಾರಿಗೆ ತಲುಪಿಸುವ ಪದ್ಧತಿ ಇದ್ದುದರಿಂದ ಎಲ್ಲಾ ಅಧಿಕಾರಿಗಳಿಗೂ ಒಂದೇ ದಿನದಲ್ಲಿ ಅರ್ಜಿಯನ್ನು ತಲುಪಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಈಗ ‘ಸಕಾಲ’ದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒಂದೇ ದಿನದಲ್ಲಿ ಪಡೆಯಬಹುದಾಗಿದೆ. ಅರ್ಜಿಗಳ ಜೊತೆಗೆ ಅದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಅಪ್ಲೋಡ್ ಮಾಡುವುದರಿಂದ ಅಧಿಕಾರಿಗಳು ಅವರು ಇರುವ ಸ್ಥಳದಲ್ಲೇ ಅರ್ಜಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ವರ್ಗಾಯಿಸಲು ಅವಕಾಶವಿದೆ. ಹಾಗಾಗಿ ಒಂದೇ ದಿನದಲ್ಲಿ ಅರ್ಜಿ ವಿಲೇವಾರಿಯಾಗಿ ಸಂಬಂಧ ಪಟ್ಟ ದಾಖಲಾತಿಯು ಅರ್ಜಿದಾರರಿಗೆ ಸಿಗುವಂತಾಗಿದೆ. -ಆರ್. ಎ. ಮಹೇಶ್, ಉಪ ತಹಸಿಲ್ದಾರ್, ಮಿರ್ಲೆ ನಾಡಕಚೇರಿ

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

12 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

12 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

17 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago