Andolana originals

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕನಗೋನಹಳ್ಳಿ ಪರಮೇಶ್‌ಗೌಡ ಹೇಳಿದರು.

ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಹಿತಿ ನೀಡಿದ ಅವರು, ಬ್ರಹ್ಮೋತ್ಸವದ ಪ್ರಮುಖ ಉತ್ಸವವಾದ ಮಾ.೨೮ರ ರಾತ್ರಿ ನಡೆಯುವ ವೈರಮುಡಿ ಕಿರೀಟಧಾರಣ ಮಹೋತ್ಸವ, ಮಾ.೩೧ರ ಮಹಾರಥೋತ್ಸವ ಹಾಗೂ ಏ.೧ರಂದು ರಾತ್ರಿ ಕಲ್ಯಾಣಿಯಲ್ಲಿ ನಡೆಯುವ ತೆಪ್ಪೋತ್ಸವವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಆಕರ್ಷಕ ದೀಪಾಲಂಕಾರ ಹಾಗೂ ಪುಷ್ಪಾಲಂಕಾರ ಮಾಡಲಾಗುತ್ತದೆ ಎಂದರು.

ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ ನಡೆಯುವ ಬೀದಿಗಳ ಎರಡೂ ಕಡೆಗಳಲ್ಲಿ ಉದ್ದಕ್ಕೂ ತೆರೆದ ಚರಂಡಿಗಳಿವೆ. ವೈರಮುಡಿಯಂದು ಭಕ್ತರು ನೂಕುನುಗ್ಗಲಿನಲ್ಲಿ ಚರಂಡಿಗೆ ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ.

ಈ ವರ್ಷ ಅದನ್ನು ತಪ್ಪಿಸಲು ಕ್ರಮವಹಿಸಿದ್ದೇವೆ. ಬ್ರಹ್ಮೋತ್ಸವದ ವೇಳೆ ಉತ್ಸವಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಯೋಜಿಸಿದ್ದು, ಸೇವೆ ಮಾಡಲು ಭಕ್ತರಿಗೂ ಅವಕಾಶ ಕಲ್ಪಿಸಿದ್ದೇವೆ. ಭಕ್ತರು ಪುಷ್ಪಾಲಂಕಾರ, ಪ್ರಸಾದ, ದೀಪಾಲಂಕಾರ ಸೇರಿದಂತೆ ಯಾವುದೇ ಸೇವೆಗಳನ್ನು ಮಾಡಬಹುದಾಗಿದ್ದು, ಸೇವಾರ್ಥದಾರರ ಹೆಸರನ್ನು ವೈರಮುಡಿ ಉತ್ಸವದ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸುವುದರ ಜತೆಗೆ ವಿಶೇಷ ಗೌರವ ಸಮರ್ಪಣೆಯನ್ನೂ ಮಾಡಲಾಗುತ್ತದೆ ಎಂದು ಹೇಳಿದರು.

ಪ್ರತಿ ವರ್ಷ ಬ್ರಹ್ಮೋತ್ಸವದಲ್ಲಿ ಮಾಡುತ್ತಿದ್ದ ದೀಪಾಲಂಕಾರವನ್ನು ಬದಲಾಯಿಸಿ ಆಕರ್ಷಕವಾಗಿ ದೀಪಾಲಂಕಾರ ಮಾಡಲಾಗುತ್ತದೆ. ಕಲ್ಯಾಣಿ, ಬೆಟ್ಟ ಹಾಗೂ ರಾಜಬೀದಿ ಸ್ಮಾರಕಗಳಿಗೆ ನಯನಮನೋಹರ ದೀಪಾಲಂಕಾರ ಮಾಡಲಾಗುತ್ತದೆ. ಸರಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತದೆ ಎಂದರು.

ವ್ಯವಸ್ಥಾಪನಾ ಸಮಿತಿ ಸದಸ್ಯ ವಕೀಲ ಕಾಡೇನಹಳ್ಳಿ ಸತೀಶ್ ಮಾತನಾಡಿ, ದೇವಾಲಯ ಮುಂಭಾಗದ ಚಪ್ಪರವನ್ನು ಆಕರ್ಷಕವಾಗಿ ಶಾಶ್ವತವಾಗಿ ನಿರ್ಮಾಣ ಮಾಡಲಾಗುತ್ತದೆ. ದೇವಾಲಯದ ಮುಂಭಾಗವಿರುವ ಹಳೆಯ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಎಸ್.ಎಸ್. ಬ್ಯಾರಿಕೇಡ್ ಹಾಕಲಾಗುತ್ತದೆ.

ಅನಗತ್ಯ ನಾಮಫಲಕಗಳು, ಕಬ್ಬಿಣದ ಕಂಬಗಳನ್ನುತೆರವುಗೊಳಿಸಲಾಗುತ್ತದೆ. ಬ್ರಹ್ಮೋತ್ಸವ ವೇಳೆ ಉತ್ಸವ ಬೀದಿಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗುವುದು. ಮೇಲುಕೋಟೆಯಲ್ಲಿ ವಾಸಿಸುತ್ತಿರುವ ಕೋತಿಗಳನ್ನು ಹಿಡಿಸಲಾಗುತ್ತದೆ. ಬಿಡಾಡಿ ದನಗಳು, ಆಡುಗಳ ಕಾಟದಿಂದಲೂ ಭಕ್ತರಿಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗುತ್ತದೆ. ಈ ವರ್ಷ ವೈರಮುಡಿ ಜಾತ್ರೆ ಆಹ್ವಾನ ಪತ್ರಿಕೆಯ ವಿನ್ಯಾಸವನ್ನು ಹೊಸತನಕ್ಕೆ ಬದಲಾಯಿಸಿ ಆಕರ್ಷಕವಾಗಿ ಮುದ್ರಿಸಲಾಗುತ್ತದೆ ಎಂದು ವಿವರಿಸಿದರು.

ಸ್ವಚ್ಛತೆ ಹಾಗೂ ಕುಡಿಯುವ ನೀರಿಗೆ ಆದ್ಯತೆ ಜಾತ್ರಾ ಮಹೋತ್ಸವದ ವೇಳೆ ಉತ್ಸವ ಬೀದಿ ದೇವಾಲಯದ ಹೊರ ಹಾಗೂ ಒಳ ಆವರಣಗಳು, ಸ್ಮಾರಕಗಳ ಬಳಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, ನಿರಂತರ ಸ್ವಚ್ಛತೆಗೆ ಕ್ರಮವಹಿಸಲಾಗಿದೆ. ಭಕ್ತರಿಗೆ ಶುದ್ಧೀಕರಿಸಿದ ಕುಡಿಯುವ ನೀರು ನೀಡಲು ಪ್ರಯತ್ನಿಸಲಾಗುತ್ತದೆ. ಉಳಿದಂತೆ ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಲಿದೆ ಎಂದು ಸಮಿತಿಯ ಸದಸ್ಯರು ತಿಳಿಸಿದರು.

ಹಿರಿಯ ಸದಸ್ಯರಾದ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಡಾ.ವೆಂಕಟರಾಮೇಗೌಡ ಮಾತನಾಡಿದರು. ಸದಸ್ಯರಾದ ಶೋಭಾ, ಡಾ.ಪ್ರೀತಿ ಮಹದೇವ್, ವೆಂಕಟೇಶ್, ರಾಜು, ಕೆ.ಎಚ್. ಪುಟ್ಟಸ್ವಾಮಿ, ದೇವಾಲಯದ ಕಾರ್ಯನಿರ್ವಾಹಕ ಅಽಕಾರಿ ಶೀಲಾ ಭಾಗವಹಿಸಿದ್ದರು.

ಕಲ್ಯಾಣಿ ಪೂಜಾ ಶುಲ್ಕ ರದ್ದು:  ಸಾಮಾನ್ಯ ಭಕ್ತರ ಒತ್ತಾಯಕ್ಕೆ ಮನ್ನಣೆ ನೀಡಿ ಕಲ್ಯಾಣಿ ಪೂಜೆಗೆ ನಿಗದಿ ಮಾಡಿದ್ದ ೨೦ ರೂ. ಶುಲ್ಕವನ್ನು ರದ್ದು ಮಾಡಲಾಗಿದೆ ಎಂದಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪರಮೇಶ್‌ಗೌಡ, ಜಾತ್ರಾ ಅವಽಯಲ್ಲಿ ವಿಶೇಷ ದರ್ಶನಕ್ಕೆ ಸಾವಿರ ರೂ. ಶುಲ್ಕ ನಿಗದಿ ಮಾಡಲಾಗಿದೆ. ದೇವಾಲಯದ ಚಿನ್ನದ ಗೋಪುರದ ಬಳಿ ವಿಶೇಷ ಹುಂಡಿ ಇಡಲು ತೀರ್ಮಾನಿಸಲಾಗಿದೆ ಎಂದರು.

 

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

9 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

10 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

10 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

10 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

11 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

11 hours ago