Andolana originals

ವಿಸಿ ನಾಲೆ ಆಧುನೀಕರಣ ನೆಪ: ನಾಲೆಗಳಿಗೆ ಬಾರದ ನೀರು

ಅಣ್ಣೂರು ಸತೀಶ್

ರೈತರು ಕಂಗಾಲು; ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಿರುವ ಅನ್ನದಾತರು

ಭಾರತೀನಗರ: ವಿಸಿ ನಾಲೆಗಳಲ್ಲಿ ನೀರು ಬಾರದ ಕಾರಣ ಕಬ್ಬಿನ ಬೆಳೆಗಳು ಒಣಗುತ್ತಿವೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ.

ವಿ.ಸಿ.ನಾಲೆಗಳಿಗೆ ನೀರು ಬಿಟ್ಟಿದ್ದೇವೆಂದು ನೀರಾವರಿ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಮದ್ದೂರು, ಮಂಡ್ಯ, ಮಳವಳ್ಳಿ ಭಾಗದ ನಾಲೆಗಳಲ್ಲಿ ಇದವರೆಗೂ ನೀರು ಬಂದಿಲ್ಲ. ಇದರಿಂದ ಆತಂಕದಲ್ಲಿ ರೈತರು ಬದುಕುವಂತಾಗಿದೆ.

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರು ತುಂಬಿದ್ದರೂ ನಾಲೆಯ ಆಧುನೀಕರಣ ನಡೆಯುತ್ತಿರುವ ನೆಪದಲ್ಲಿ ಇದುವರೆಗೂ ನೀರನ್ನು ಬಿಡುಗಡೆ ಮಾಡಿಲ್ಲದಿರುವುದರಿಂದ ರೈತರು ಬೆಳೆದಿರುವ ಕಬ್ಬಿನ ಬೆಳೆ ಒಣಗುತ್ತಿವೆ. ಜೂನ್-ಜುಲೈ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಮಯಕ್ಕೆ ರೈತರು ಕೃಷಿಯನ್ನು ಆರಂಭಿಸುವುದು ವಾಡಿಕೆ. ಆದರೆ ಈ ಬಾರಿ ಮುಂಗಾರು ಮಳೆ ವಾಡಿಕೆಯಷ್ಟು ಆಗದ ಕಾರಣ ವಿಸಿ ನಾಲೆಯ ನೀರನ್ನೇ ಎದುರು ನೋಡುವಂತಾಗಿದೆ.

ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿದ್ದರೂ ಕೂಡ ನಾಲೆಯ ಅಭಿವೃದ್ಧಿ ನೆಪದಲ್ಲಿ ನೀರು ಬಿಡಲು ಅಧಿಕಾರಿಗಳು ಮುಂದಾಗದಿರುವುದು ರೈತರ ಆಕ್ರೋಶಕ್ಕೆ ಗುರಿಯಾಗಿದೆ. ಈ ತಿಂಗಳಾಂತ್ಯದಲ್ಲಿ ಬಿತ್ತನೆ ಕಾರ್ಯ ಮುಕ್ತಾಯಗೊಂಡು ನಾಟಿಗೆ ಜಮೀನುಗಳು ಸಿದ್ಧವಾಗಬೇಕಿತ್ತು. ಆದರೆ ನಾಲೆಗಳ ದುರಸ್ತಿ ನೆಪದಲ್ಲಿ ನೀರು ಬಿಡಲು ವಿಳಂಬ ಮಾಡಿರುವುದು ಒಂದು ಕಡೆಯಾದರೆ, ಹೂಳು ತುಂಬಿರುವುದು ಮತ್ತೊಂದೆಡೆ ರೈತರ ಹಾದಿಯನ್ನು ದಿಕ್ಕುತಪ್ಪಿಸಿದೆ. ಕಾರ್ಖಾನೆಗೆ ಅಗತ್ಯವಾದಷ್ಟು ನೀರು ಸಿಗದ ಕಾರಣ ಕಾರ್ಖಾನೆ ಮಾಲೀಕರು ಮತ್ತು ರೈತರು ವಿಸಿ ನಾಲೆಯಲ್ಲಿ ನೀರು ಬರುವುದನ್ನೇ ಎದುರು ನೋಡುತ್ತಿದ್ದಾರೆ.

ವಿಸಿ ನಾಲೆಗೆ ನೀರು ಬಿಡುವಂತೆ ರೈತರು ೨ ತಿಂಗಳುಗಳಿಂದಲೂ ಆಗ್ರಹಿಸುತ್ತಿದ್ದಾರೆ. ಕನ್ನಂಬಾಡಿ ಅಣೆಕಟ್ಟೆಯಿಂದ ನೀರು ಬಿಟ್ಟರೂ ವಿಸಿ ನಾಲೆಯ ಕೊನೆಯ ಭಾಗಕ್ಕೆ ನೀರು ತಲುಪಬೇಕಾದರೆ ೧೫ ರಿಂದ ೨೦ ದಿನಗಳು ಬೇಕಾಗುತ್ತವೆ.

ಹೂಳು ತುಂಬಿದ ನಾಲೆ: ಕ್ಯಾತಘಟ್ಟ, ಬೊಮ್ಮನದೊಡ್ಡಿ, ಅಜ್ಜಹಳ್ಳಿ, ಮಠದದೊಡ್ಡಿ, ಚಿಕ್ಕರಸಿನಕೆರೆ ಇತರೆ ಭಾಗದ ನಾಲೆಗಳಲ್ಲಿ ಹೂಳು ತುಂಬಿದೆ. ಒಂದು ವೇಳೆ ನೀರನ್ನು ಬಿಡುಗಡೆ ಮಾಡಿದರೂ ಕಾಲುವೆಗೆ ಹರಿಸಿದ ನೀರು ಕೊನೆಯ ಭಾಗದ ಬಯಲಿನ ಪ್ರದೇಶಕ್ಕೆ ತಲುಪದೆ ಪೋಲಾಗುವ ಸಾಧ್ಯತೆ ಇದೆ. ಈ ಕೂಡಲೇ ಅಧಿಕಾರಿಗಳು ಮತ್ತು ಸವಡೆಗಳು ಗಿಡ-ಗಂಟಿಗಳನ್ನು ತೆರವುಗೊಳಿಸಿ ಹೂಳು ತೆಗೆಯಲು ಕ್ರಮಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಕೊನೆಯ ಭಾಗಕ್ಕೆ ನೀರು ಹರಿಸಲು ಆಗ್ರಹ: ಮದ್ದೂರು ತಾಲ್ಲೂಕು ಚಿಕ್ಕರಸಿನಕೆರೆ ಹೋಬಳಿಯ ಉತ್ತರ ಮತ್ತು ದಕ್ಷಿಣ ಭಾಗದ ಕೊನೆಯ ಭಾಗಕ್ಕೆ ಪ್ರತಿ ಬಾರಿಯೂ ನೀರು ತಲುಪುತ್ತಿಲ್ಲ. ಈಗಾಗಲೇ ಕೃಷಿ ಚಟುವಟಿಕೆ ವಿಳಂಬವಾಗಿರುವುದರಿಂದ ಕೊನೆಯ ಭಾಗಕ್ಕೆ ನೀರು ತಲುಪಿಸುವ ಜವಾಬ್ದಾರಿಯನ್ನು ಇಲ್ಲಿನ ನೀರಾವರಿ ಇಲಾಖೆ ವಹಿಸಿಕೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ.

” ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಈಗಾಗಲೇ ನಾಲೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳುತ್ತಿತ್ತು. ನೀರಿಲ್ಲದೆ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿಲ್ಲ. ಹೀಗಾದರೆ ರೈತರ ಬದುಕು ಹೀನಾಯ ಸ್ಥಿತಿಗೆ ತಲುಪುತ್ತದೆ. ಇದಕ್ಕೆಲ್ಲಾ ಸರ್ಕಾರವೇ ಹೊಣೆಗಾರಿಕೆ ಹೊರಬೇಕಾಗುತ್ತದೆ.”

-ಬೋರಾಪುರ ಶಂಕರೇಗೌಡ, ನಿಕಟ ಪೂರ್ವ ಜಿಲ್ಲಾಧ್ಯಕ್ಷ, ರೈತಸಂಘ

” ಕೆಆರ್‌ಎಸ್‌ನಿಂದ ಈಗಾಗಲೇ ನೀರು ಬಿಟ್ಟಿದ್ದೇವೆ. ಕೆಲವು ಕಡೆ ವಿಸಿ ನಾಲೆಗಳಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ನೀರು ಬಿಡಲು ಸಾಧ್ಯವಾಗಿಲ್ಲ. ಸದ್ಯಕ್ಕೆ ಅಂತಹ ಸ್ಥಳಗಳಲ್ಲಿ ಜನ-ಜಾನುವಾರುಗಳಿಗೆ ಮತ್ತು ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಅಗತ್ಯ ಕ್ರಮಕೈಗೊಂಡಿದ್ದೇವೆ.”

-ರಘುರಾಮನ್, ಅಧಿಕ್ಷಕ ಅಭಿಯಂತರರು, ಕಾವೇರಿ ನೀರಾವರಿ ನಿಗಮ

” ರೈತರ ಬೆಳೆಗಳಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ನೀರು ಬಿಡಿಸಬೇಕೆಂಬುದು ಜಿಲ್ಲೆಯ ಶಾಸಕರ ಒತ್ತಾಯವಾಗಿದೆ. ಆದರೆ ನಾಲೆಗಳ ಆಧುನೀಕರಣ ನಡೆಯುತ್ತಿರುವುದರಿಂದ ಈಗಾಗಲೇ ವಿಳಂಬವಾಗಿವೆ. ಜರೂರಾಗಿ ಕೆಲಸ ಮುಗಿಸಿ ನಾಲೆಗಳಿಗೆ ನೀರು ಬಿಡಬೇಕೆಂದು ಸಚಿವರಲ್ಲಿ ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ.”

-ಮಧು ಜಿ.ಮಾದೇಗೌಡ, ವಿಧಾನ ಪರಿಷತ್ ಸದಸ್ಯರು

” ಪ್ರಸ್ತುತ ದಿನಗಳಲ್ಲಿ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿದೆ. ರೈತರು ಬೆಳೆದ ಕಬ್ಬನ್ನು ಕಾರ್ಖಾನೆಗೆ ಸಾಗಿಸಲಾಗದೆ ಇಳುವರಿ ಕುಂಠಿತಗೊಳ್ಳುತ್ತಿದೆ. ಇದನ್ನು ಅರ್ಥಮಾಡಿಕೊಂಡು ರಾಜ್ಯ ಸರ್ಕಾರ ತ್ವರಿತಗತಿಯಲ್ಲಿ ನಾಲೆಯ ಆಧುನೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕಿತ್ತು.”

ಡಿ.ಸಿ.ತಮ್ಮಣ್ಣ, ಮಾಜಿ ಸಚಿವರು

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

4 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago