Andolana originals

ವೀರಗಾಸೆಯ ವೀರ ಶೃಂಗಾರ ಶಾಸ್ತ್ರೀ

ಸರಗೂರು ದಾಸೇಗೌಡ

ಕಲೆ ಮತ್ತು ಸಾಹಿತ್ಯ ಪ್ರಕಾರಗಳು ಕಣ್ಮರೆಯಾಗುತ್ತಿರುವ ಈ ಹೊತ್ತಿನಲ್ಲಿಯೂ ಕಲೆಯನ್ನು ಉಳಿಸಿ ಪೋಷಿಸುತ್ತಿರುವವರು ಗ್ರಾಮೀಣ ಭಾಗದ ಜನರು ಎಂದರೆ ತಪ್ಪಾಗಲಾರದು. ಪ್ರತಿ ಗ್ರಾಮದಲ್ಲಿಯೂ ಒಂದಲ್ಲ ಒಂದು ಜಾನಪದ ಕಲೆ ಪ್ರಕಾರ ಇನ್ನೂ ಜೀವಂತವಾಗಿದೆ. ರಾಜ್ಯದಾದ್ಯಂತ ಅದನ್ನು ಪ್ರಚಾರ ಪಡಿಸುವ ಪ್ರಯತ್ನವೂ ಸಾಗಿದೆ. ಅಂಹತ ಒಂದು ಕಲೆಯಲ್ಲಿ ವೀರಗಾಸೆಯೂ ಒಂದು.

ವೀರಗಾಸೆ ಎಂಬುದು ಬರೀ ಕಲೆ ಅಲ್ಲ. ಅದು ದೈವ ಕಲೆ. ದುರುಳ ದಕ್ಷಬ್ರಹ್ಮನ ಶಿರವನ್ನು ಹರಿದು, ಹರಿದ ತಲೆಗೆ ಕುರಿಯ ತಲೆಯನ್ನು ಇಟ್ಟ ದೊರೆಯೆ ನಿನಗೆ ಯಾರು ಸರಿ. ಸರಿ ಸರಿ ಎಂದವರ ಸೊಕ್ಕನ್ನು ಮುರಿ, ಮಹಾರುದ್ರ
ಆಹಾರುದ ಆಹಾ ದೇವ, ದೇವ ದೇವ ಮಹಾದೇವ ಎಂದು ಖಡ್ಗ ಪ್ರವಚನವನ್ನು ನುಡಿಯುತ್ತ ವೀರ ಗಾಸೆಯ ದೈವ ಕಲೆ ಯನ್ನು ವಂಶ ಪಾರಂ ಪರಿಕವಾಗಿ ನಡೆದು ಕೊಂಡು ಬಂದಿರು ವಂತಹ ಸಾಂಪ್ರದಾ ಯವೇ ಈ ‘ವೀರ ಗಾಸೆ, ಇಂತಹ ಕಲೆಯನ್ನು ಚಿಕ್ಕ ವಯಸ್ಸಿನಲ್ಲೇ ಮೈಗೂಡಿಸಿಕೊಂಡು ರಾಜ್ಯದಾದ್ಯಂತ ಪ್ರದರ್ಶನಗಳನ್ನು ನೀಡುತ್ತಾ ಬಂದಿರುವ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರ ಸಂತೆ ಹೋಬಳಿಯ ಮಾಗುಡಿಲು ಗ್ರಾಮದ ಗೌರಮ್ಮ ಮತ್ತು ಶಿವಾರ್ಚಕ ಉಪೇಂದ್ರಪ್ಪನವರ ಪುತ್ರ ಶೃಂಗಾ‌ ಶಾಸ್ತ್ರೀ ರಾಜ್ಯದ ಹಲವೆಡೆ ಪ್ರದರ್ಶನ ನೀಡಿರುವು ದಲ್ಲದೇ ಹೊರ ರಾಜ್ಯಗಳಲ್ಲಿಯೂ ಪ್ರದರ್ಶನ ನೀಡಿ ಸೈ ಎನಿಸಿಕೊಂಡಿದ್ದಾರೆ. ಅಲ್ಲದೆ ಇತ್ತೀಚೆಗೆ ‘ಈಡನ್ಸ್ ನ್ಯೂಸ್ ವಾಹಿನಿಯಲ್ಲಿ ವೀರಭದ್ರ ಚರಿತ್ರೆ ಎಂಬ ಸಂದರ್ಶನವನ್ನು ನೀಡಿದ್ದಾರೆ. ಇದರೊಂದಿಗೆ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಎರಡು ಬಾರಿ ವೀರಗಾಸೆ ಪ್ರದರ್ಶನವನ್ನು ನೀಡಿರುವ ಕೀರ್ತಿ ಇವರಿಗಿದೆ. ಶೈವ ಸಾಂಪ್ರದಾಯವುಳ್ಳ ವಂಶ ಪಾರಂಪರಿಕವಾಗಿ ಬಂದಿ ರುವಂತಹ ಪವಿತ್ರ ಕುಣಿತವನ್ನು 26 ವರ್ಷ ವಯಸ್ಸಿನ ಶೃಂಗಾರ ಶಾಸ್ತ್ರೀಯವರು ಮೊಟ್ಟ ಮೊದಲ ಬಾರಿಗೆ 2004ರಲ್ಲಿ ತಾತ ಶಿವಾರ್ಚಕ ಬಸವಣ್ಣನವರ ಬಳಿ ಕಲಿತರು. ಅಲ್ಲದೆ ಮೊದಲ ಬಾರಿಗೆ ಚಾ.ನಗರ ಜಿಲ್ಲೆಯ ಅರಳಿಕಟ್ಟೆ ಎಂಬ ಗ್ರಾಮದ ಮದುವೆ ಒಂದರಲ್ಲಿ ಪ್ರದರ್ಶನ ಮಾಡಿದರು. ಅದರೊಂದಿಗೆ ಶಿಕ್ಷಣವನ್ನು ಮುಂದುವರಿಸುತ್ತಾ ರಜಾ ದಿನಗಳಲ್ಲಿ ವೀರಗಾಸೆಯನ್ನೂ ಮಾಡುತ್ತಾ ಪ್ರಸ್ತುತ ಮಾಗುಡಿ ಲಿನ ಶ್ರೀ ನೀಲಕಂಠೇಶ್ವರ ಸ್ವಾಮಿ ಮಾಗುಡಿಲು ದೇವಸ್ಥಾನದಲ್ಲಿ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವಂಶಪಾರಂಪರಿಕವಾಗಿ ಬಂದಿರುವಂತಹ ಈ ವೀರಗಾಸೆ ನೃತ್ಯವನ್ನು ಶಾಲೆಯಲ್ಲಿ ವ್ಯಾಸಂಗ ಮಾಡುವ ವೇಳೆ ಛದ್ಧವೇಶದಲ್ಲಿ ಧರಿಸಿ ಬಳಿಕ ಅದರ ಮೇಲಿನ ಆಸಕ್ತಿ ಹೆಚ್ಚಾಗಿ ಶಿಕ್ಷಣ ಮುಗಿಸಿದ ಬಳಿಕ ಅಲ್ಲಿಂದ ವೀರಗಾಸೆಯ ಬಗ್ಗೆ ಮತ್ತಷ್ಟು ಆಸಕ್ತಿ ಹೆಚ್ಚಾಗಿ ವೀರಗಾಸೆಯನ್ನೇ ವೃತ್ತಿ ಬದುಕಿನಲ್ಲಿ ಮುಂದುವರಿಸುತ್ತಾ ‘ಶ್ರೀ ವೀರಭದ್ರೇಶ್ವರ ಲಿಂಗದ ವೀರರ ವೀರಗಾಸೆ ನೃತ್ಯ ತಂಡ’ ಎಂದು ಮಾಡಿಕೊಂಡು ವೀರಗಾಸೆಯ ಕುಣಿತದ ಪ್ರದರ್ಶನಗಳನ್ನು ನೀಡುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾಂಪ್ರಾದಾಯಿಕ ಕುಣಿತಗಳು, ಸಾಹಿತ್ಯ, ಕಲೆ ಪ್ರಕಾರಗಳು ನಶಿಸಿ ಹೋಗುತ್ತಿವೆ. ನಮ್ಮ ಕಲೆ, ಸಾಹಿತ್ಯ ಪ್ರಕಾರಗಳನ್ನು ನಾವು ಪೋಷಿಸಿ ಬೆಳೆಸಬೇಕು. ವೀರಗಾಸೆ ನಮ್ಮ ವಂಶಪಾರಂಪರೆಯಾಗಿ ಬಂದ ಕುಣಿತವಾಗಿದ್ದು, ಅದನ್ನು ಮುಂದುವರಿಕೊಂಡು ಹೋಗುವುದು ನನ್ನ ಜವಾಬ್ದಾರಿ ಎಂದು ಭಾವಿಸಿದ್ದೇನೆ.

-ಶೃಂಗಾ‌ ಶಾಸ್ತ್ರೀ, ವೀರಗಾಸೆ ಕಲಾವಿಧ

 

ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

8 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

9 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

9 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

9 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

9 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

9 hours ago