Andolana originals

‘ಸಾವಿನ ನಂತರವೂ ಜನಮಾನಸದಲ್ಲಿ ಉಳಿದ ವೀರಭದ್ರಪ್ಪ’

ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ 

ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು ಕೆಲವೇ ಕೆಲವರು ಮಾಡುತ್ತಾರೆ. ಸಾವಿನ ನಂತರವೂ ಜನಮಾನಸದಲ್ಲಿ ಉಳಿಯುವವರೆ ನಿಜವಾದ ಸಾಧಕರಾಗಿದ್ದು ಅಂತಹವರ ಸಾಲಿನಲ್ಲಿ ದುಗ್ಗಹಟ್ಟಿ ಪಿ. ವೀರಭದ್ರಪ್ಪರವರೂ ಒಬ್ಬರಾಗಿದ್ದಾರೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಶುಕ್ರವಾರ ತಾಲ್ಲೂಕಿನ ದುಗ್ಗಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ದುಗ್ಗಹಟ್ಟಿ ಪಿ.ವೀರಭದ್ರಪ್ಪ ಅವರಿಗೆ ಹಮ್ಮಿಕೊಂಡಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವೀರಭದ್ರಪ್ಪ ಅವರು ತಮ್ಮ ಜೀವಿತಾವಧಿಯ ತುಂಬ ಸಮಾಜ ಸೇವೆಯನ್ನೇ ಮಾಡುತ್ತಾ ಬಂದಿದ್ದರು. ೧೯೬೦ರ ದಶಕದಲ್ಲಿ ಬಿಳಿಗಿರಿ ರಂಗನಬೆಟ್ಟಕ್ಕೆ ರಸ್ತೆ ಮಾಡಿಸಿ ಉಳಿಕೆ ಹಣವನ್ನು ಸರ್ಕಾರಕ್ಕೆ ವಾಪಸ್ ನೀಡಿದ ಅಪರೂಪದ ವ್ಯಕ್ತಿಯಾಗಿದ್ದರು. ಯಾವಾಗಲೂ ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಾಜಕೀಯದಲ್ಲಿ ಬೆಳೆಯುವ ಎಲ್ಲಾ ಅರ್ಹತೆಗಳಿದ್ದರೂ ಸಮಾಜ ಸೇವೆಯಲ್ಲೇ ತಮ್ಮ ಇಡೀ ಜೀವನ ಸವೆಸಿದ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು.

ಸುತ್ತೂರು ಮಠದ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ ಇವರು ಇಲ್ಲಿನ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಮಾಜಪರ ಕಳಕಳಿ, ಕಾಳಜಿ ಹೊಂದಿದ್ದರು. ಕೆಲಸದಲ್ಲಿ ಪ್ರಾಮಾಣಿಕರಾಗಿದ್ದರು. ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಾಲೆಯನ್ನು ತೆರೆದಿದ್ದರು. ಎಲ್ಲಾ ಜಾತಿ, ಧರ್ಮಗಳ ಜನರನ್ನು ಗೌರವಯುತವಾಗಿ ಕಾಣುವ ಅಪರೂಪದ ವ್ಯಕ್ತಿಯಾಗಿ ಜನಮನ್ನಣೆಯನ್ನು ಗಳಿಸಿದ್ದರು.

ಇವರು ಹಾಕಿಕೊಟ್ಟ ಮಾರ್ಗದಲ್ಲಿ ಇವರ ಕುಟುಂಬದವರು ನಡೆಯಬೇಕು. ಇಂತಹ ವ್ಯಕ್ತಿಗಳ ಮಾರ್ಗದರ್ಶನವನ್ನು ಎಲ್ಲರೂ ಅನುಸರಿಸಬೇಕು ಎಂದು ನುಡಿದರು. ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ಧೇಶ್ವರ ಸ್ವಾಮೀಜಿ ಮಾತನಾಡಿ, ಜೀವನದ ಸಾರ್ಥಕ್ಯ ಬದುಕಿನಾಚೆ ಇದೆ. ಮರಣವೇ ಮಹಾನವಮಿ. ಶರಣರ ಬದುಕು ಮರಣದಲ್ಲಿ ನೋಡು ಎಂಬಂತೆ ಬದುಕಿದ ಅಪರೂಪದ ವ್ಯಕ್ತಿ ಪಿ.ವೀರಭದ್ರಪ್ಪ ಆಗಿದ್ದರು. ತಮ್ಮ ಸೇವೆಗಳಿಂದ ಮನುಕುಲದ ಕೃತಾರ್ಥ ಮಾಡುವ ಕೆಲಸವನ್ನು ಇವರು ಮಾಡಿದ್ದಾರೆ. ಇವರ ತತ್ವಾದರ್ಶಗಳ ಪಾಲನೆಯನ್ನು ಎಲ್ಲರೂ ಅನುಸರಿಸಬೇಕು. ಮುಂದಿನ ಪೀಳಿಗೆ ಇಂತಹವರ ನೆರಳಿನಲ್ಲಿ ಸಾಗಬೇಕು ಎಂದರು.

ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ವೀರಭದ್ರಪ್ಪರವರಿಗೆ ರಾಜಕೀಯ ದಿಗ್ಗಜರ ಒಡನಾಟವಿತ್ತು. ಸಾಹಿತ್ಯಾಸಕ್ತರೂ ಆಗಿದ್ದರು. ೬೦ರ ದಶಕದಲ್ಲಿ ಕನಕಪುರದಲ್ಲಿ ನಡೆದ ಸಾಹಿತ್ಯ ಸಮ್ಮೇಳನವನ್ನು ಇಲ್ಲಿನ ಮಠದಲ್ಲಿ ಮಾಡಲು ನನಗೆ ಇವರು ನೈತಿಕ ಸ್ಥೈರ್ಯವನ್ನು ತುಂಬಿದ್ದರು. ಸದಾ ಆರೋಗ್ಯಕರ ಸಮಾಜದ ಕಡೆ ಇವರ ಮನಸ್ಸು ತುಡಿಯುತ್ತಿತ್ತು ಎಂದರು.

ಸಾಹಿತಿ ಚಟ್ನಹಳ್ಳಿ ಮಹೇಶ್ ನುಡಿನಮನ ಕಾರ್ಯಕ್ರಮ ನಡೆಸಿಕೊಟ್ಟರು. ವೀರಭದ್ರಪ್ಪ ಅವರ ಪುತ್ರ ವಿ. ಮಲ್ಲಿಕಾರ್ಜುನ ಸ್ವಾಮಿ ಆಶಯ ನುಡಿಗಳನ್ನಾಡಿದರು. ದೇವನೂರು ಮಹಾಂತ ಸ್ವಾಮೀಜಿ ಆಶೀರ್ವಚನ ನೀಡಿದರು. ತೊರವಳ್ಳಿ ಸೋಮಣ್ಣ ನೇತೃತ್ವದ ಗಾನ ಲಹರಿ ಕಲಾ ತಂಡದ ಸದಸ್ಯರು ವಚನ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

ದೇಗುಲ ಮಠದ ಡಾ.ಶ್ರೀ ಚೆನ್ನಬಸವ ಸ್ವಾಮೀಜಿ, ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಾರಾಪುರ ವಿರಕ್ತಮಠದ ಬಸವರಾಜಸ್ವಾಮಿ ಒಡೆಯರ್, ಹತ್ತಾರು ಮಠಗಳ ಶ್ರೀಗಳು, ವಿ.ಗಂಗಾಧರಸ್ವಾಮಿ, ದುಗ್ಗಹಟ್ಟಿ ರಾಜೇಶ್, ವಿಖ್ಯಾತ್, ಸಾವಿರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

” ಷಡಕ್ಷರ ದೇವರ ಗದ್ದುಗೆಯ ಪುನರುಜ್ಜೀವನ, ಗಂಗವಾಡಿ ವೀರಭದ್ರೇಶ್ವರ ದೇಗುಲದ ಜೀರ್ಣೋದ್ಧಾರ, ಬಿಳಿಗಿರಿರಂಗನ ಬೆಟ್ಟದ ಗಂಗಾಧರೇಶ್ವರ ದೇಗುಲ, ರಂಗನಾಥಸ್ವಾಮಿ ದೇಗುಲ ಸೇರಿದಂತೆ ಅನೇಕ ದೇಗುಲಗಳ ಅಭಿವೃದ್ಧಿಗೆ ವೀರಭದ್ರಪ್ಪನವರು ತಮ್ಮದೇ ಕಾಣಿಕೆಯನ್ನು ನೀಡಿದ್ದಾರೆ.”

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

21 seconds ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

14 mins ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

3 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

4 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

5 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

5 hours ago