Andolana originals

ನಾಳೆ ತರಕಾರಿ ಮಾರುಕಟ್ಟೆ ಲೋಕಾರ್ಪಣೆ

ಹೇಮಂತ್‌ಕುಮಾರ್

ತರಕಾರಿ ತರುವ ವಾಹನಗಳ ಸುಗಮ ಸಂಚಾರವೇ ದುರ್ಗಮ; ಸಂಪರ್ಕ ರಸ್ತೆ, ಪಾರ್ಕಿಂಗ್ ವ್ಯವಸ್ಥೆಗೆ ಕಾಯಕಲ್ಪ ಅತ್ಯಗತ್ಯ

ಮಂಡ್ಯ: ಮಂಡ್ಯ ನಗರದ ತರಕಾರಿ ಮಾರುಕಟ್ಟೆಯನ್ನು ಲೋಕಾರ್ಪಣೆಗೊಳ್ಳಲಿದ್ದು, ಮಂಡ್ಯ ಸಂಸದರು, ಕೇಂದ್ರ ಬೃಹತ್ ಕೈಗಾರಿಕಾ ಸಚಿವರೂ ಆದ ಎಚ್. ಡಿ.ಕುಮಾರಸ್ವಾಮಿ ಅವರು ಅ.೧೬ ರಂದು ಉದ್ಘಾಟಿಸುವರು.

ಸುಮಾರು ೯ ಕೋಟಿ ರೂ. ವೆಚ್ಚದಲ್ಲಿ ಏಳು ತಿಂಗಳ ಅವಧಿಯಲ್ಲಿ ನಿರ್ಮಾಣಗೊಂಡಿರುವ ೧೧೭ ಮಳಿಗೆಗಳುಳ್ಳ ತರಕಾರಿ ಮಾರುಕಟ್ಟೆ ಉದ್ಘಾಟನೆಗೆ ಸಜ್ಜಾಗಿದ್ದು, ಈ ಭಾಗದ ಸಾರ್ವಜನಿಕರಿಗೆ ಉಪಯುಕ್ತವಾಗಲಿದೆ ಎಂಬುದು ನಗರಸಭೆ ಅಧ್ಯಕ್ಷರ ಆಶಯ. ಆದರೆ, ೯ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ತರಕಾರಿ ಮಾರುಕಟ್ಟೆಗೆ ಕೃಷಿ ಉತ್ಪನ್ನಗಳನ್ನು ಹೊತ್ತು ತರುವ ವಾಹನಗಳಿಗೆ ಸೂಕ್ತ ಸಂಪರ್ಕ ರಸ್ತೆಯೇ ಇಲ್ಲದಂತಾಗಿದೆ.

ರಾಜ್ಯ, ಹೊರ ರಾಜ್ಯಗಳು ಹಾಗೂ ವಿವಿಧ ಕಡೆಗಳಿಂದ ತರಕಾರಿ, ಸೊಪ್ಪು, ಬಾಳೆ, ಹಣ್ಣುಗಳು, ಕಾಯಿ, ಹೂವು, ಈರುಳ್ಳಿ ಮುಂತಾದ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಲು ವಾಹನಗಳು ಆಗಮಿಸಬೇಕಾದರೆ ಮೂರು ಮಾರ್ಗಗಳಿವೆ. ಒಂದು ಮಹಾವೀರ ವೃತ್ತದಿಂದ ರೈಲ್ವೆ ಅಂಡರ್ ಪಾಸ್ ಮೂಲಕ, ಮತ್ತೊಂದು ಪೇಟೆ ಬೀದಿ ಮೂಲಕ, ಹಾಗೆಯೇ ನಂದಾ ವೃತ್ತ ಮೂಲಕ ಬ್ರಿಡ್ಜ್ ಇಳಿದು ಪೇಟೆ ಬೀದಿ ಬಳಸಿ ಮಾರುಕಟ್ಟೆ ತಲುಪಬೇಕಾಗುತ್ತದೆ. ವಾಸ್ತವದಲ್ಲಿ ಮಹಾವೀರ ವೃತ್ತದಿಂದ ಅಂಡರ್ ಪಾಸ್ನಲ್ಲಿ ತೆರಳಲು ಲಾರಿಗಳಿರಲಿ, ಬಾಳೆ ಹೊತ್ತು ತರುವ ಸಣ್ಣ ಟೆಂಪೋಗಳು ಕೂಡ ಸಂಚರಿಸಲು ಸಾಧ್ಯವಿಲ್ಲ.

ಮತ್ತೊಂದೆಡೆ ಪೇಟೆ ಬೀದಿ ಮೂಲಕ ಸೆಂಟ್ರಲ್ ಸ್ಟ್ರೀಟ್ ಹಾದು ತರಕಾರಿ ಮಾರುಕಟ್ಟೆಗೆ ಬರಲು ಲಾರಿಗಳು ತಿರುವು ಪಡೆಯಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ. ಪೇಟೆ ಬೀದಿಯಿಂದ ಸೆಂಟ್ರಲ್ ಸ್ಟ್ರೀಟ್‌ಗೆ ಲಾರಿಗಳು ತಿರುವು ಪಡೆಯಲು ಮುಂಜಾನೆ ವೇಳೆ ಸಂಚಾರ ದಟ್ಟಣೆ ಇಲ್ಲದ ಸಮಯ ವಾದರೆ ಗಲ್ಲಿಯಂತಹ ಈ ರಸ್ತೆಯಲ್ಲಿ ಹೇಗೋ ನುಸುಳಿ ಹೋಗಬಹುದು. ಬೆಳಿಗ್ಗೆ ಏಳೆಂಟು ಗಂಟೆಯಾದರೆ ಹರಸಾಹಸ ನಡೆಸಬೇಕಾಗುತ್ತದೆ.

ಇನ್ನು ಜೆಸಿ ವೃತ್ತದಿಂದ ಡಿಸಿಸಿ ಬ್ಯಾಂಕ್ ರೈಲ್ವೆ ಅಂಡರ್ ಪಾಸ್ ಹಾಗೂ ಹೊಳಲು ವೃತ್ತಬಳಸಿ ಸಿಹಿ ನೀರು ಕೊಳ ಸುತ್ತಿಕೊಂಡು ಡಿಸಿಸಿ ಬ್ಯಾಂಕ್ ಬ್ರಿಡ್ಜ್ ಮೂಲಕ ತರಕಾರಿ ಮಾರುಕಟ್ಟೆಗೆ ತಲುಪಲು ಟೆಂಪೋಗಳಿಗೂ ಇಕ್ಕಟ್ಟಿನ ದಾರಿ. ಹೀಗಿರುವಾಗ ಹೊಸ ಮಾರುಕಟ್ಟೆಗೆ ಸರಕು ತರುವ ಮಾರ್ಗವಾದರೂ ಯಾವುದು ಎಂಬುದು ಈಗ ಜನಸಾಮಾನ್ಯರ ಪ್ರಶ್ನೆಯಾಗಿದೆ. ಇನ್ನು ಸೆಂಟ್ರಲ್ ಸ್ಟ್ರೀಟ್ ಹಾಗೂ ತರಕಾರಿ ಮಾರುಕಟ್ಟೆ ಮುಂಭಾಗದ ರಸ್ತೆ ಗುಂಡಿ ಬಿದ್ದು ಹಾಳಾಗಿದೆ. ಇಲ್ಲಿ ಜನಸಾಮಾನ್ಯರೇ ಸಂಚರಿಸಲು ಪರದಾಡುವಂತಹ ಸ್ಥಿತಿ ಇದೆ. ಇನ್ನು ವಾಹನಗಳು ಇಲ್ಲಿ ಸಂಚರಿಸಲು ಸಾಧ್ಯವೇ? ಬೆಳಿಗ್ಗೆ ೯ ಗಂಟೆಗೆ ಪೇಟೆ ಬೀದಿಯಲ್ಲಿ ಸೈಕಲ್ ಓಡಿಸಲು ಕೂಡ ಸಾಧ್ಯವಿಲ್ಲದ ಸಂಚಾರ ದಟ್ಟಣೆ ಇರುವಾಗ, ಮಾರುಕಟ್ಟೆಗೆ ಸರಕುಗಳನ್ನು ತರುವ ಮಾತು ವಿಚಿತ್ರವೆನಿಸುತ್ತದೆ.

ವಾಹನಗಳ ಪಾರ್ಕಿಂಗ್ ಕಥೆ ಏನು?: ಮಾರುಕಟ್ಟೆಗೆ ತರಕಾರಿ, ಹೂವು, ಹಣ್ಣು ಖರೀದಿಸಲು ಬರುವ ಸಾರ್ವಜನಿಕರಿಗೆದ್ವಿಚಕ್ರ ವಾಹನಗಳು, ಆಟೋ, ಕಾರುಗಳನ್ನು ಪಾರ್ಕಿಂಗ್ ಮಾಡಲು ಯಾವುದೇ ಸ್ಥಳಾವಕಾಶ ಇಲ್ಲಿಲ್ಲ. ಹಬ್ಬ ಹರಿದಿನಗಳು ಬಂತೆಂದರೆ ಕೇಳುವುದೇ ಬೇಡ. ರಜಾ ದಿನಗಳಲ್ಲೇ ಪೇಟೆ ಬೀದಿಯಲ್ಲಿ ಸಂಚರಿಸಲು ಸಾಧ್ಯವಾಗದ ಸ್ಥಿತಿ ಇರುತ್ತದೆ. ಇನ್ನು ಯುಗಾದಿ, ಪಿತೃ ಪಕ್ಷ, ವರಮಹಾಲಕ್ಷ್ಮಿ, ಸಂಕ್ರಾಂತಿ ಹೀಗೆ ಬರುವ ಹಬ್ಬ ಹರಿದಿನಗಳಲ್ಲಿ ಪೇಟೆ ಬೀದಿ ಒಳಗೆ ಕಾಲಿಡಲೂ ಸಾಧ್ಯವಿಲ್ಲದ ಸ್ಥಿತಿ ಕಂಡುಬರುತ್ತದೆ. ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲದೆ, ಮೂಲ ಸಂಪರ್ಕ ರಸ್ತೆಯೂ ಇಲ್ಲದೆ ಮಾರುಕಟ್ಟೆ ಮತ್ತೊಮ್ಮೆ ಅವ್ಯವಸ್ಥೆಯ ಆಗರವಾಗಲಿದೆ ಎಂಬ ಕಳವಳ ನಾಗರಿಕರದು.

” ಇದು ಮಿನಿ ಮಾರುಕಟ್ಟೆ, ಎಪಿಎಂಸಿ ಆವರಣದಲ್ಲಿ ಸಗಟು ಮಾರುಕಟ್ಟೆಯಿದೆ. ಆದ್ದರಿಂದ ದೊಡ್ಡ ದೊಡ್ಡ ಲಾರಿಗಳು ಅಲ್ಲಿಗೆ ಹೋಗುತ್ತವೆ. ಇಲ್ಲಿಗೆ ಆಟೋ, ಮಿನಿ ಟೆಂಪೋಗಳಷ್ಟೇ ಬರಲಿವೆ. ಆದ್ದರಿಂದ ವಾಹನಗಳು ಬರಲು ಯಾವುದೇ ಅಡ್ಡಿಯಾಗದು. ನನ್ನ ಅಧಿಕಾರಾವಧಿ ಪೂರ್ಣಗೊಳ್ಳುವ ಮುನ್ನ ಮಾರುಕಟ್ಟೆ ಉದ್ಘಾಟನೆ ಮಾಡಿಸುವ ಆಶಯ ನನ್ನದು. ಬಳಿಕ ಅಧಿಕಾರಿಗಳಿಗೆ ಉಳಿದ ಕೆಲಸಗಳನ್ನು ಪೂರ್ಣಗೊಳಿಸುವ ಹೊಣೆಗಾರಿಕೆ ಬರಲಿದೆ. ಅಲ್ಲದೆ, ಬಾಕಿ ಉಳಿದಿರುವ ಕಾಮಗಾರಿ ಕೈಗೊಳ್ಳಲು ಅನುದಾನವೂ ಅಲ್ಲೆ ಇದೆ. ಅದರಲ್ಲೇ ಸಂಪರ್ಕ ರಸ್ತೆಗಳ ಅಭಿವೃದ್ಧಿಗೂ ಚಾಲನೆ ಸಿಗಲಿದೆ.”

-ಎಂ.ವಿ.ಪ್ರಕಾಶ್(ನಾಗೇಶ್), ಅಧ್ಯಕ್ಷರು, ನಗರಸಭೆ, ಮಂಡ್ಯ

” ಮಾರುಕಟ್ಟೆಯನ್ನು ನಿರ್ಮಿಸಿದ್ದಾರೆ. ಆದರೆ ಮೂಲ ಸೌಲಭ್ಯಗಳಾಗಿ ಸಂಪರ್ಕ ರಸ್ತೆ ಮತ್ತು ಗ್ರಾಹಕರಿಗೆ ಅತ್ಯಗತ್ಯವಾಗಿ ಬೇಕಾದಪಾರ್ಕಿಂಗ್ ವ್ಯವಸ್ಥೆ ಇಲ್ಲದಿದ್ದರೆ ಜನ ಇಲ್ಲಿಗೇಕೆ ಬರುತ್ತಾರೆ? ಇದರ ಬದಲು ಎಪಿಎಂಸಿ ಯಾರ್ಡ್‌ನತ್ತ ಮುಖ ಮಾಡುವುದೇ ಹೆಚ್ಚು. ಆದ್ದರಿಂದ ಮುನಿಸಿಪಲ್ ಹೈಸ್ಕೂಲ್ ಮುಂಭಾಗದಿಂದ ಮಾರುಕಟ್ಟೆ ಆವರಣಕ್ಕೆ ಫ್ಲೈ ಓವರ್ ರೂಪದಲ್ಲಿ ಸಂಪರ್ಕ ಕಲ್ಪಿಸಿದರೆ ಗ್ರಾಹಕರಿಗೆ ಕೆಳಗಡೆ ಪಾರ್ಕಿಂಗ್ ಮಾಡಿ ಮಾರುಕಟ್ಟೆಗೆ ಖರೀದಿಗೆ ಹೋಗಲು ಸಾಧ್ಯವಿದೆ. ಇದಕ್ಕಾಗಿ ಮುನ್ಸಿಪಲ್ ಹೈಸ್ಕೂಲ್ ಮುಂಭಾಗದ ಪಾರ್ಕ್‌ನಲ್ಲಿ ಅವಕಾಶ ಮಾಡಿಕೊಡಬಹುದಾಗಿದೆ.”

-ಎಂ.ಎಲ್.ತುಳಸಿಧರ್, ಸಾಮಾಜಿಕ ಕಾರ್ಯಕರ್ತರು, ಮಂಡ್ಯ

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

5 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

6 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

6 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

6 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

6 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

7 hours ago