Andolana originals

ವಾಹನ ತಪಾಸಣೆ ಕಾಯಕ; ಆಗದಿರಲಿ ಜೀವಕ್ಕೆ ಮಾರಕ

ಎಚ್.ಎಸ್.ದಿನೇಶ್ ಕುಮಾರ್

ತಪಾಸಣೆ ವೇಳೆ ಕೈಗೊಳ್ಳಬಹುದಾದ ಕ್ರಮಗಳು

* ವಾಹನ ತಪಾಸಣೆ ಸ್ಥಳದಿಂದ ನೂರು ಮೀಟರ್ ಹಿಂದೆ ಸೂಚನಾ ಫಲಕದೊಂದಿಗೆ ಬ್ಯಾರಿಕೇಡ್ ಅಳವಡಿಕೆ

* ಪ್ರಮುಖ ರಸ್ತೆ, ವೃತ್ತಗಳಲ್ಲಿ ಸಿಸಿ ಟಿವಿಗಳ ಸಂಖ್ಯೆ ಹೆಚ್ಚಳ

* ಸಂಚಾರ ಪೊಲೀಸರಿಗೆ ಆಧುನಿಕ ತಂತ್ರ ಜ್ಞಾನದ ಕ್ಯಾಮೆರಾ ಒದಗಿಸುವುದು

ಮೈಸೂರು: ಮಂಡ್ಯದಲ್ಲಿ ಸೋಮವಾರ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಡೆದ ದುರಂತದಲ್ಲಿ ೩ ವರ್ಷದ ಹೆಣ್ಣು ಮಗು ಪ್ರಾಣ ಕಳೆದುಕೊಂಡ ಘಟನೆಯ ಬೆನ್ನಲ್ಲೇ, ಪೊಲೀಸರು ನಡೆಸುವ ವಾಹನ ತಪಾಸಣೆ ಹೇಗಿರಬೇಕು? ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಅದಕ್ಕಿಂತ ಹೆಚ್ಚಾಗಿ ಅದು ಜೀವ ರಕ್ಷಕ ಎಂಬುದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಿದೆ. ಆ ಜವಾಬ್ದಾರಿ ಯಾರದ್ದು? ಎಂಬ ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ.

ಮಂಡ್ಯದಲ್ಲಿ ನಡೆದ ಪ್ರಕರಣದಲ್ಲಿ ಹೆಲ್ಮೆಟ್ ಧರಿಸದ ಕಾರಣ ಸಂಚಾರ ಪೊಲೀಸರು ವಾಹನ ತಪಾಸಣೆ ಮಾಡುವಾಗ ಅನಿರೀಕ್ಷಿತವಾಗಿ ಬೈಕ್‌ಗೆ ಟ್ಯಾಂಕರ್ ಗುದ್ದಿದ ಪರಿಣಾಮವಾಗಿ, ಬೈಕ್ ಸವಾರ ಸಹಿತ ಮೂವರು ಕೆಳಗೆ ಬಿದ್ದಿದಾರೆ. ಅವರ ಪೈಕಿ ೩ ವರ್ಷದ ಮಗುವು ಪ್ರಾಣ ಕಳೆದುಕೊಂಡಿತು.

ಮೈಸೂರಿನಲ್ಲಿ ಕೂಡ ಹಿಂದೆ ಇಂತಹ ಘಟನೆಗಳು ನಡೆದಿವೆ. ೨೦೨೨ರ ಮಾರ್ಚ್‌ನಲ್ಲಿ ಹಿನಕಲ್ ವರ್ತುಲ ರಸ್ತೆಯ ಬಳಿ ಸಂಚಾರ ಪೊಲೀಸರು ಮಾಡಿದ ಎಡ ವಟ್ಟಿನಿಂದ ಬೈಕ್ ಸವಾರರೊಬ್ಬರು ಲಾರಿಗೆ ಸಿಲುಕಿ ಸಾವಿಗೀಡಾಗಿದ್ದರು.

ಇಂತಹ ಘಟನೆಗಳು ವಾಹನ ಸವಾರರಿಗೆ ಎಚ್ಚರಿಕೆಯ ಘಂಟೆಯಾಗಬೇಕು. ಜೊತೆಗೆ ರಸ್ತೆಯಲ್ಲಿ ನಿಂತು ಏಕಾಏಕಿ ಚಲಿಸುತ್ತಿರುವ ವಾಹನಗಳಿಗೆ ಸಂಚಾರ ಪೊಲೀಸರು ಕೈ ಅಡ್ಡವಿಟ್ಟು ವಾಹನಗಳನ್ನು ನಿಲ್ಲಸಲು ಮುಂದಾದಲ್ಲಿ ಆಗಬಹುದಾದ ಅನಾಹುತ ಎಂತಹುದು ಎಂಬುದು ಪೊಲೀಸರಿಗೂ ಗೊತ್ತಾಗಬೇಕು.

ಸಂಚಾರ ನಿಯಮ ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅಡ್ಡಾದಿಡ್ಡಿ ವಾಹನ ನಿಲ್ಲಿಸುವುದು, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಚಾಲನೆ ವೇಳೆ ಮೊಬೈಲ್ ಬಳಕೆ ಮುಂತಾದ ಅಪಾಯಕಾರಿ ನಡವಳಿಕೆಗಳನ್ನು ಬಿಡಬೇಕು. ಇವುಗಳು ಅಪಘಾತಕ್ಕೆ ಕಾರಣವಾಗುತ್ತವೆ ಎಂಬುದರಲ್ಲಿ ಎರಡು ಮಾತಿಲ್ಲ. ನಗರದಲ್ಲಿ ಕೆಲ ವರ್ಷಗಳ ಹಿಂದೆ ಸಂಚಾರ ನಿಯಮ ಉಲ್ಲಂಸುವ ವಾಹನ ಸವಾರರ ಫೋಟೋಗಳನ್ನು ನಾಗರಿಕರೇ ತೆಗೆದು ಪೊಲೀಸರಿಗೆ ಕಳುಹಿಸುವ ‘ಪಬ್ಲಿಕ್ ಐ’ ಎಂಬ ಯೋಜನೆಯೊಂದು ಜಾರಿಯಾಗಿತ್ತು.

ಆದರೆ, ಅದು ಕಾರಣಾಂತರಗಳಿಂದ ಸ್ಥಗಿತಗೊಂಡಿತು. ಇನ್ನು ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಇಂಟರ್ ಸೆಪ್ಟರ್ ಸಂಚರಿಸುತ್ತಲೇ ಇರುತ್ತದೆ. ಆದರೂ ಸಂಚಾರ ನಿಯಮ ಉಲ್ಲಂಸುವವರನ್ನು ನಿಯಂತ್ರಿಸುವುದು ಸಾಧ್ಯವಾಗದಿರುವುದು ವಿಪರ್ಯಾಸ.

ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ನೀಡಿದರೆ, ಭವಿಷ್ಯದಲ್ಲಿ ಅವರು ಸಂಚಾರ ನಿಯಮ ಪಾಲಿಸುತ್ತಾರೆ. ಮಾತ್ರವಲ್ಲ ಅವರು ತಮ್ಮ ಪೋಷಕರಿಗೂ ತಿಳಿಹೇಳುತ್ತಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ಅದು ಮತ್ತಷ್ಟು ವೇಗಪಡೆದುಕೊಳ್ಳುವ ಅವಶ್ಯಕತೆ ಇದೆ.

ಇನ್ನು ಸಂಚಾರ ವಿಭಾಗದ ಪೊಲೀಸರಿಗೂ ಮೇಲಧಿಕಾರಿಗಳು ತಿಳಿಹೇಳುವ ಅಗತ್ಯ ಇದೆ. ಇಂದು ದೇಶ ವೈಜ್ಞಾನಿಕವಾಗಿ ಸಾಕಷ್ಟು ಸಾಧನೆ ಮಾಡಿದೆ. ಆ ವೈಜ್ಞಾನಿಕ ಸಾಧನಗಳನ್ನು ಬಳಸಿಕೊಂಡು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿದೆ. ೨೦೧೫ರಲ್ಲಿ ಬಿ.ದಯಾನಂದ್ ಅವರು ನಗರ ಪೊಲೀಸ್ ಆಯುಕ್ತರಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ನೋಟಿಸ್ ಜಾರಿಗೊಳಿಸುವ ನಿಯಮವನ್ನು ಜಾರಿಗೆ ತಂದಿದ್ದರು. ಇದರಿಂದ ಸಂಚಾರ ನಿಯಮ ಉಲ್ಲಂಘಿಸಿದವರ ಮನೆಗಳಿಗೆ ನೋಟಿಸ್ ಹೋಗುತ್ತಿತ್ತು. ತಪ್ಪು ಮಾಡಿದವರು ಆಯಾ ವ್ಯಾಪ್ತಿಯ ಠಾಣೆಗಳಿಗೆ ತೆರಳಿ ದಂಡ ಪಾವತಿಸುತ್ತಿದ್ದರು. ಸರತಿಯಲ್ಲಿ ನಿಂತು ದಂಡ ಪಾವತಿಸಿದ ಉದಾಹರಣೆಗಳೂ ಇವೆ. ಆದರೀಗ ಇಲಾಖೆಯ ಆಂತರಿಕ ಕಾರಣಗಳಿಂದಾಗಿ ನೋಟಿಸ್ ನೀಡುವ ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿದೆ.

ಇಂದಿನ ಪ್ರಭಾರ ಡಿಜಿಪಿ ಡಾ.ಎಂ.ಎ.ಸಲೀಂ ಅವರು ೨೦೧೩ರಲ್ಲಿ ಮೈಸೂರು ಪೊಲೀಸ್ ಆಯುಕ್ತರಾಗಿದ್ದರು. ಆ ಸಂದರ್ಭದಲ್ಲಿ ಸಂಚಾರ ವಿಭಾಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದ್ದರು. ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಚುರುಕು ಮುಟ್ಟಿಸಲು ಕ್ರಮ ತೆಗೆದುಕೊಂಡಿದ್ದರು.

ನಗರದಾದ್ಯಂತವಿರುವ ಎಲ್ಲ ಸಂಚಾರ ಠಾಣೆಗಳ ಪೊಲೀಸರಿಗೆ ಇಲಾಖೆ ವತಿಯಿಂದಲೇ ಕ್ಯಾಮೆರಾಗಳನ್ನು ನೀಡಿದ್ದರು. ನಿಯಮ ಉಲ್ಲಂಘಿಸುವವರ ವಾಹನಗಳ ಫೋಟೋ ತೆಗೆದು ಅವರ ವಿಳಾಸಕ್ಕೆ ನೋಟಿಸ್ ತಲುಪುವಂತೆ ನೋಡಿಕೊಂಡಿದ್ದರು. ಆದರೀಗ ಕ್ಯಾಮೆರಾಗಳು ನಾಪತ್ತೆಯಾಗಿವೆ. ಹೀಗಾಗಿ ಪೊಲೀಸರು ಹಳೇ ಪದ್ಧತಿಯಲ್ಲಿಯೇ ವಾಹನ ತಪಾಸಣೆಗೆ ಮುಂದಾಗಿದ್ದಾರೆ. ಈಗಲಾದರೂ ಪೊಲೀಸರು ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

” ಇಂದು ನಾವು ವೈಜ್ಞಾನಿಕವಾಗಿ ಸಾಕಷ್ಟು ಮುಂದಿದ್ದೇವೆ. ನಗರದ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಸಿಸಿಕ್ಯಾಮೆರಾಗಳನ್ನು ಹೆಚ್ಚು ಮಾಡಬಹುದು. ಪೊಲೀಸರಿಗೆ ಒಳ್ಳೆಯ ಕ್ಯಾಮೆರಾಗಳನ್ನು ನೀಡಬೇಕು. ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ತಪಾಸಣೆ ಬಿಟ್ಟು ಉಳಿದ ತಪಾಸಣೆಗಳನ್ನು ದೈಹಿಕವಾಗಿ ಮಾಡುವುದು ಸರಿಯಲ್ಲ. ಹಾಗೇನಾದರೂ ರಸ್ತೆಯಲ್ಲಿ ನಿಂತು ತಪಾಸಣೆ ಮಾಡಲೇ ಬೇಕು ಎಂದಾದಲ್ಲಿ ನೂರು ಮೀಟರ್ ಹಿಂದೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನ ತಪಾಸಣೆ ಮಾಡುತ್ತಿದ್ದೇವೆ ಎಂದು ಜನರಿಗೆ ಫಲಕಗಳ ಮೂಲಕ ತಿಳಿವಳಿಕೆ ನೀಡಬೇಕು. ಸಂಚಾರ ಪೊಲೀಸರು ಇರುವುದು ಅಪಘಾತಗಳನ್ನು ತಪ್ಪಿಸಲು ಮಾತ್ರ. ಆದರೆ, ಅವರೇ ಅಪಘಾತಕ್ಕೆ ಕಾರಣವಾದರೆ, ಜನರಿಗೆ ಎಂತಹ ಸಂದೇಶ ರವಾನೆಯಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.”

-ಶಂಕರೇಗೌಡ, ನಿವೃತ್ತ ಎಸ್‌ಪಿ

ಆಂದೋಲನ ಡೆಸ್ಕ್

Recent Posts

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

11 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

1 hour ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

3 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

3 hours ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

4 hours ago