Andolana originals

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್.

ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ ನ್ಯೂ ಕಾಂತರಾಜ ಅರಸ್ ರಸ್ತೆಯಲ್ಲಿರುವ ಜನಬಿಡಪ್ರದೇಶಗಳಾದ ಬಂದಂ ತಮ್ಮ ಕಾಳಮ್ಮ ದೇವಸ್ಥಾನ, ಅದರ ಮುಂಭಾಗ ವಿರುವ ಐಗಿರಿ ಕೆಫೆ, ಸಮೀಪದ ಸುಜುಕಿ ಷೋರೂಂ, ಪೈ ಮೊಬೈಲ್ ಶಾಪ್ ಮುಂತಾದ ಕಡೆ ಫುಟ್‌ಪಾತ್ ಮೇಲೆ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಸಂಚಾರದಟ್ಟಣೆ ಉಂಟಾ ಗುತ್ತಿದೆ. ಪಾದಚಾರಿಗಳು ಜೀವದ ಹಂಗು ತೊರೆದು ಅನಿವಾರ್ಯವಾಗಿ ರಸ್ತೆಯಲ್ಲೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹಲವು ದಿನಗಳಿಂದಲೂ ಈ ಸಮಸ್ಯೆಯಿದ್ದು, ನಗರ ಪಾಲಿಕೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೂಕ್ತ ಪರಿಹಾರ ಕಲ್ಪಿಸಲು ಮುಂದಾಗಿಲ್ಲ ಎಂಬುದು ಹಲವರ ದೂರು.

ಅಂಗಡಿ ಮತ್ತು ಐಗಿರಿ ಕೆಫೆಯಿಂದಲೇ ಸಮಸ್ಯೆ: ರಸ್ತೆಯ ಅಕ್ಕಪಕ್ಕದಲ್ಲಿರುವ ಅಂಗಡಿ ಮತ್ತು ಹೋಟೆಲ್ ಮಾಲೀಕರು, ತಮ್ಮ ಅಂಗಡಿ ಮಳಿಗೆಗಳ ಮುಂದಿನ ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿ ಅಲ್ಲಿ ಅವರ ಮಾರಾಟ ವಸ್ತುಗಳು, ಜಾಹೀರಾತು ಫಲಕಗಳನ್ನು ಇರಿಸಲೋ ಅಥವಾ ವಾಹನಗಳನ್ನು ನಿಲ್ಲಿಸಿಕೊಳ್ಳಲೋ ಬಳಕೆ ಮಾಡಿಕೊಳ್ಳುವುದು ಪರಿಪಾಠವಾಗಿದೆ. ಅಂಗಡಿ ಮಳಿಗೆ ಎದುರಿನ ಜಾಗ ತಮ್ಮದೆಂಬಂತೆ ಮಾಲೀಕರು ವರ್ತಿಸುತ್ತಿದ್ದಾರೆ ಎಂಬ ಆರೋಪ ಕೆಲವು ಪ್ರಜ್ಞಾವಂತ ನಾಗರಿಕರಿಂದ ಕೇಳಿ ಬಂದಿದೆ.

ಜಟಾಪಟಿ: ಹೆಚ್ಚು ಜನದಟ್ಟಣೆ ಇರುವ ಸಮಯವಾದ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ನಗರದ ಪ್ರಮುಖ ರಸ್ತೆಗಳು ಗಿಜಿಗುಡುತ್ತವೆ. ನಡೆದು ಹೋಗುವಾಗ ಸಾರ್ವಜನಿಕರಿಗೆ ವಾಹನಗಳು ತಾಗುವುದು, ವಾಹನ ಸವಾರರು ಮತ್ತು ಪಾದಚಾರಿಗಳ ನಡುವೆ ಜಟಾಪಟಿ ನಿತ್ಯ ಸಾಮಾನ್ಯವಾಗಿದೆ. ಸಾರ್ವಜನಿಕರೂ ಪರಿಸ್ಥಿತಿಗೆ ಹೊಂದಿಕೊಂಡು, ತಮಗೆ ಅರಿವಿಲ್ಲದಂತೆಯೇ ರಸ್ತೆಗಳನ್ನೇ ಫುಟ್‌ಪಾತ್‌ಗಳಂತೆ ಬಳಸುತ್ತಿದ್ದಾರೆ. ಆದರೆ ಅಪಾಯವನ್ನು ತಮ್ಮ ಮೈಮೇಲೆಳೆದುಕೊಳ್ಳುತ್ತಿರುವುದರ ಅರಿವು ಹಲವರಿಗೆ ಇಲ್ಲದಾಗಿದೆ.

ಅಂಗಡಿ ಷೋರೂಂಗಳು ಮತ್ತು ಐಗಿರಿ ಕೆಫೆ ಹೋಟೆಲ್‌ಗಳು ತಮ್ಮ ಜಾಹೀರಾತು ಫಲಕಗಳನ್ನು ಪಾದಚಾರಿ ಮಾರ್ಗಗಳಿಗೆ ಅಡ್ಡಲಾಗಿ ಇಡುವುದರಿಂದ ರಾಜಾರೋಷವಾಗಿ ಫುಟ್ ಪಾತ್‌ಗಳ ಅತಿಕ್ರಮಣ ನಡೆಯುತ್ತಿದ್ದರೂ ನಗರ ಪಾಲಿಕೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಅಸಹಾಯಕರಾಗಿದ್ದಾರೆ

” ನಗರಪಾಲಿಕೆ ವತಿಯಿಂದ ಅಂಗಡಿ ಮಾಲೀಕರು ಹಾಗೂ ಬೀದಿಬದಿ ವ್ಯಾಪಾರಿಗಳ ಸಭೆ ನಡೆಸ ಅಂಗಡಿ ಬೋರ್ಡ್‌ಗಳನ್ನು ಸ್ವಲ್ಪ ಹಿಂದಕ್ಕೆ ಹಾಕಿಕೊಳ್ಳಲು ಸೂಚಿಸುವುದರ ಜೊತೆಗೆ ವಾಹನಗಳನ್ನು ಫುಟ್‌ಪಾತ್ ಮೇಲೆ ನಿಲ್ಲಿಸದಂತೆ ಹೇಳಿ, ಪಾದಚಾರಿಗಳ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಲಾಗುತ್ತದೆ.”

-ಶೇಖ್ ತನ್ವೀರ್ ಆಸಿಫ್, ನಗರಪಾಲಿಕೆ ಆಯುಕ್ತರು

” ಐಗಿರಿ ಕೆಫೆ ಮುಂಭಾಗದ ಈ ರಸ್ತೆಯಲ್ಲಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ಹೆಚ್ಚು ಜನದಟ್ಟಣೆ ಉಂಟಾಗುವುದರಿಂದ ವಯೋವೃದ್ಧರು, ಮಹಿಳೆಯರು, ಮಕ್ಕಳು, ಓಡಾಡುವುದೇ ದುಸ್ತರವಾಗುತ್ತದೆ. ಫುಟ್‌ಪಾತ್ ಗಳ ಮೇಲೆ ನಿಲ್ಲಿಸಲಾಗುವ ವಾಹನಗಳನ್ನು ತೆರವುಗೊಳಿಸಿದರೆ ಸುಗಮವಾಗಿ ನಡೆದು ಹೋಗಬಹುದು.”

-ಸೋಮು, ಜೆ.ಪಿ.ನಗರ ನಿವಾಸಿ

” ಸಾರ್ವಜನಿಕರ ಹಿತರಕ್ಷಣೆ ನಮ್ಮ ಕರ್ತವ್ಯ. ಹಾಗಾಗಿ ಸಮಸ್ಯೆ ಆಗಿರುವ ಐಗಿರಿ ಕೆಫೆ, ಪೈ ಮೊಬೈಲ್ ಶಾಪ್, ಸುಜುಕಿ ಷೋರೂಂಗಳ ಮುಂಭಾಗದಲ್ಲಿ ವಾಹನಗಳನ್ನು ನಿಲ್ಲಿಸದಂತೆ ಕಟ್ಟುನಿಟ್ಟಾಗಿ ಸೂಚನೆ ನೀಡುವುದರ ಜೊತೆಗೆ ಸಾರ್ವಜನಿಕರಿಗೆ, ವಯೋವೃದ್ಧರಿಗೆ ಸಮಸ್ಯೆ ಆಗದಂತೆ ಕ್ರಮವಹಿಸಲಾಗುವುದು.”

 -ಕೆ.ಎಸ್. ಸುಂದರ್‌ರಾಜ್, ಡಿಸಿಪಿ, ಅಪರಾಧ ಮತ್ತು ಸಂಚಾರ ವಿಭಾಭ 

 

 

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

36 seconds ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

8 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

14 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

19 mins ago

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

23 hours ago