Andolana originals

ಸಂಚಾರ ನಿಯಮ ಉಲ್ಲಂಘನೆ: ವಾಹನ ಮಾಲೀಕರಿಗೆ ಸ್ಥಳದಲ್ಲೇ ದಂಡಾಸ್ತ್ರ ಪ್ರಯೋಗ

ಹೆಚ್.ಎಸ್.ದಿನೇಶ್ ಕುಮಾರ್

ಮೈಸೂರು: ಸಂಚಾರ ನಿಯಮ ಉಲ್ಲಂಘಿಸುವ ವಾಹನ ಮಾಲೀಕರಿಂದ ಅಂಚೆ ಮೂಲಕ ದಂಡ ವಸೂಲು ಮಾಡುವ ಕಾರ್ಯಕ್ಕೆ ಕೊಂಚ ಹಿನ್ನಡೆಯಾಗುತ್ತಿರುವುದರಿಂದ ಪೊಲೀಸ್ ಆಯುಕ್ತರು ವಿಶೇಷ ತಪಾಸಣೆ ಕೈಗೊಳ್ಳಲು ನಿರ್ಧರಿಸಿದ್ದು, ಈ ಮೂಲಕ ಸ್ಥಳದಲ್ಲಿಯೇ ದಂಡ ವಸೂಲು ಕಾರ್ಯಕ್ಕೆ ಮುಂದಾಗಿದ್ದಾರೆ.

ಇದು ವಾಹನ ಸವಾರರ ನಿರ್ಲಕ್ಷ ವೋ ಅಥವಾ ನಾವು ತಪ್ಪೇ ಮಾಡಿಲ್ಲ ಎಂಬ ಮನೋ ಭಾವನೆಯೋ ಒಟ್ಟಾರೆಯಾಗಿ ನೋಟಿಸ್ ಪಡೆದ ಬಹುತೇಕ ವಾಹನ ಮಾಲೀಕರು ದಂಡ ಪಾವತಿಸಲು ಮುಂದಾಗುತ್ತಿಲ್ಲ. ಹೀಗಾಗಿ ದಂಡ ವನ್ನು ವಸೂಲು ಮಾಡಿಯೇ ತೀರಬೇಕೆಂದು ನಿರ್ಧರಿಸಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ವಿಶೇಷ ತಪಾಸಣಾ ಕಾರ್ಯವನ್ನು ಆರಂಭಿಸಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪ್ರತೀ ದಿನ ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ನಗರ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ತಪಾಸಣಾ ಕಾರ್ಯ ಕೈಗೊಳ್ಳಲಾಗುತ್ತದೆ. ಈ ಮೊದಲು ವಾಹನ ಸವಾರರು ಶಿರಸ್ತ್ರಾಣ ಧರಿಸಿದವರ ವಾಹನಗಳನ್ನು ತಪಾಸಣೆ ಮಾಡುತ್ತಿರಲಿಲ್ಲ. ಕೆಲ ಸಂದರ್ಭಗಳಲ್ಲಿ ಮಾತ್ರ ಹೆಲ್ಮೆಟ್ ಧರಿಸಿದ್ದರೂ ಕೂಡ ವಾಹನಗಳ ದಾಖಲೆಗಳನ್ನು ಪರಿಶೀಲಿಸಲು ತಡೆದು ನಿಲ್ಲಿಸುತ್ತಿದ್ದರು.

ಆದರೆ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ಸೂಚನೆ ಮೇರೆಗೆ ಇನ್ನು ಮುಂದೆ ಹೆಲ್ಮೆಟ್ ಧರಿಸಿರಲಿ, ಧರಿಸಿಲ್ಲದಿರಲಿ ಎಲ್ಲ ವಾಹನಗಳನ್ನೂ ಪೊಲೀಸರು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಕಾರ್ಯಾಚರಣೆ ಹೇಗೆ…?

ಸಂಚಾರ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು ಸೇರಿದಂತೆ ನಗರ ವ್ಯಾಪ್ತಿಯ ಎಲ್ಲ ಠಾಣೆಗಳ ಪೊಲೀಸರು ಪ್ರತೀ ದಿನ ಬೆಳಿಗ್ಗೆ ಹಾಗೂ ಸಂಜೆ ಕಾರ್ಯಾಚರಣೆ ನಡೆಸಲಿದ್ದಾರೆ. ರಸ್ತೆಯಲ್ಲಿ ಸಾಗುವ ಎಲ್ಲ ದ್ವಿಚಕ್ರ ವಾಹನಗಳನ್ನೂ ತಡೆದು ನಿಲ್ಲಿಸುವ ಪೊಲೀಸರು, ಅವರ ವಾಹನಗಳ ಸಂಖ್ಯೆಯನ್ನು ಉಪಕರಣಕ್ಕೆ ನೀಡುತ್ತಾರೆ. ವಾಹನ ಸವಾರರು ಈ ಹಿಂದೆ ಎಲ್ಲಿಯಾದರೂ ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲಿ ಅದು ಯಂತ್ರದಲ್ಲಿ ದಾಖಲಾಗಿರುತ್ತದೆ. ಹೀಗಾಗಿ ವಾಹನದ ಸಂಖ್ಯೆಯನ್ನು ಉಪಕರಣಕ್ಕೆ ನೀಡಿದಲ್ಲಿ ವಾಹನ ಸವಾರರು ಎಷ್ಟು ಬಾರಿ ಹಾಗೂ ಯಾವ ಸ್ಥಳದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ದಾರೆ ಎಂಬ ಮಾಹಿತಿ ಹಾಗೂ ಎಷ್ಟು ದಂಡ ಪಾವತಿ ಬಾಕಿ ಇದೆ ಎಂಬುದನ್ನು ತೋರಿಸುತ್ತದೆ. ಪೊಲೀಸರು ದಂಡದ ಹಣವನ್ನು ಸ್ಥಳದಲ್ಲಿಯೇ ಪಾವತಿಸುವಂತೆ ಸೂಚನೆ ನೀಡಲಿದ್ದಾರೆ.

ಒಟ್ಟಾರೆ ನಿಯಮ ಉಲ್ಲಂಘಿಸಿದ್ದಲ್ಲದೆ, ದಂಡವನ್ನೂ ಪಾವತಿಸದೇ ವಾಹನ ಚಾಲನೆ ಮಾಡುವವರಿಗೆ ಪೊಲೀಸರು ಕಾನೂನಿನ ಪಾಠ ಹೇಳುವುದರ ಜೊತೆಗೆ ಬಾಕಿ ಉಳಿಸಿಕೊಂಡಿರುವ ದಂಡವನ್ನೂ ವಸೂಲಿ ಮಾಡುವ ಮೂಲಕ ಸವಾರರಿಗೆ ಚುರುಕು ಮುಟ್ಟಿಸಲು ಸಿದ್ಧತೆ ನಡೆಸಿದ್ದಾರೆ.

” ಸಂಚಾರ ನಿಯಮ ಉಲ್ಲಂಘಿಸುವುದು ತಪ್ಪು. ನೋಟಿಸ್ ಪಡೆದೂ ದಂಡ ಪಾವತಿಸದಿರುವುದು ಎರಡನೇ ತಪ್ಪು. ಸಂಚಾರ ನಿಯಮ ಉಲ್ಲಂಘಿಸಿದವರು ದಂಡ ಕಟ್ಟುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಮುಂದಿನ ದಿನಗಳಲ್ಲಿ ಸಂಚಾರ ತಪಾಸಣೆಯನ್ನು ಮತ್ತಷ್ಟು ಹೆಚ್ಚಿಸಿ ಬಾಕಿ ಉಳಿದಿರುವ ದಂಡವನ್ನು ಪಾವತಿಸಿಕೊಳ್ಳಲಾಗುವುದು. ದಂಡ ಪಾವತಿಸಲು ನಿರಾಕರಿಸಿದಲ್ಲಿ ವಾಹನವನ್ನು ವಶಕ್ಕೆ ಪಡೆಯಲಾಗುವುದು.”

-ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತರು

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

5 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

5 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

7 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

10 hours ago