ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ
ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ರೆಸಾರ್ಟ್ಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರು ದಿಢೀರ್ ಭೇಟಿ ನೀಡಿ ಎಲ್ಲ ದಾಖಲಾತಿಗಳನ್ನೂ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ರೈತ ಸಂಘಟನೆಯವರು, ಮುಖಂಡರು, ಪ್ರಜ್ಞಾವಂತರು, ಮಾಧ್ಯಮದವರು ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಅಕ್ರಮ ರೆಸಾರ್ಟ್ಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಶಾಸಕ ಅನಿಲ್ ಚಿಕ್ಕಮಾದುರವರು ಸಭೆ ನಡೆಸಿ ತಾಲ್ಲೂಕಿನಲ್ಲಿರುವ ಪ್ರತಿಯೊಂದೂ ರೆಸಾರ್ಟ್ಗಳ ಸಮಗ್ರ ತನಿಖೆ ನಡೆಸಲು ಸಮಿತಿ ರಚಿಸಿದ್ದಾರೆ.
ಅದರಂತೆ ಪಟ್ಟಣದ ಆಡಳಿತ ಸೌಧದಲ್ಲಿ ಸಮಿತಿಯ ಮುಖ್ಯಸ್ಥರಾದ ಹುಣಸೂರಿನ ಎಸಿ ಕಾವ್ಯರಾಣಿ ಮತ್ತು ತಹಸಿಲ್ದಾರ್ ಶ್ರೀನಿವಾಸ್ ನೇತೃತ್ವದಲ್ಲಿ ನೀರಾವರಿ, ಸರ್ವೆ, ಕಂದಾಯ, ತಾಪಂ, ಪರಿಸರ, ಅರಣ್ಯ ಇಲಾಖೆಗಳ ಅಧಿಕಾರಿಗಳೊಡನೆ ಸುದೀರ್ಘವಾಗಿ ಸಭೆ ನಡೆಸಿ ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿರುವ ೧೩ ರೆಸಾರ್ಟ್ಗಳು ೭ ಹೋಂಸ್ಟೇಗಳಿಗೆ ಅಧಿಕಾರಿಗಳೊಡನೆ ಭೇಟಿ ನೀಡಿ ರೆಸಾರ್ಟ್ಗಳ ದಾಖಲಾತಿ ಪಡೆದು ಪರಿಶೀಲಿಸುತ್ತಿದ್ದಾರೆ.
ರೆಸಾರ್ಟ್ ಅರಣ್ಯ ವ್ಯಾಪ್ತಿಗೆ ಬರುತ್ತದೆಯೇ, ಜಮೀನು ಒತ್ತುವರಿಯಾಗಿದೆಯೇ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿದ್ದಾರೆಯೇ ಎಂಬ ಕುರಿತು ರೆಸಾರ್ಟ್ನ ಮಾಲೀಕರು, ವ್ಯವಸ್ಥಾಪಕರಿಂದ ಮಾಹಿತಿ ಪಡೆದಿದ್ದಾರೆ.
ಹುಣಸೂರಿನ ಎಸಿ ಕಾವ್ಯರಾಣಿ, ತಹಸಿಲ್ದಾರ್ ಶ್ರೀನಿವಾಸ್, ಅರಣ್ಯ ಅಧಿಕಾರಿಗಳಾದ ಮಧು, ಮಹೇಶ್, ಸಿದ್ದರಾಜು, ತಾಪಂ ಇಒ ಧರಣೇಶ, ನೀರಾವರಿ ಇಲಾಖೆ ಅಧಿಕಾರಿ ಗಣೇಶ್, ಕಂದಾಯ ಇಲಾಖೆ ಅಧಿಕಾರಿಗಳಾದ ಸಂಜೀವ್ ಕುಮಾರ್, ಯೋಗೇಶ್, ಗೌಸ್ ಶಂಕರ್, ಲಿಂಗ, ನಾಗರಾಜು, ಸರ್ವೆ ಇಲಾಖೆಯ ಬಸವರಾಜು, ಶಂಭು, ಎಸ್ಐ ಚಂದ್ರಹಾಸ್, ಇತರರು ಉಪಸ್ಥಿತರಿದ್ದರು.
” ಕಬಿನಿ ಹಿನ್ನೀರಿನ ಅರಣ್ಯ ವ್ಯಾಪ್ತಿಯಲ್ಲಿರುವ ರೆಸಾರ್ಟ್ಗಳು ಮತ್ತು ಹೋಂಸ್ಟೇಗಳ ಬಗ್ಗೆ ದೂರುಗಳು ಬಂದಿರುವುದರಿಂದ ಉನ್ನತ ಮಟ್ಟದ ಅಧಿಕಾರಿಗಳೊಡನೆ ಸಮಿತಿಯ ಮೂಲಕ ದಾಖಲಾತಿಗಳನ್ನು ಪಡೆದು ಪರಿಶೀಲಿಸಲಾಗುತ್ತಿದೆ. ತನಿಖೆ ನಡೆದ ನಂತರ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಯವರಿಗೆ ನೀಡಲಾಗುವುದು.”
-ಶ್ರೀನಿವಾಸ್, ತಹಸಿಲ್ದಾರ್
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…