Andolana originals

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ

ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರು ದಿಢೀರ್ ಭೇಟಿ ನೀಡಿ ಎಲ್ಲ ದಾಖಲಾತಿಗಳನ್ನೂ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ರೈತ ಸಂಘಟನೆಯವರು, ಮುಖಂಡರು, ಪ್ರಜ್ಞಾವಂತರು, ಮಾಧ್ಯಮದವರು ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಅಕ್ರಮ ರೆಸಾರ್ಟ್‌ಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಶಾಸಕ ಅನಿಲ್ ಚಿಕ್ಕಮಾದುರವರು ಸಭೆ ನಡೆಸಿ ತಾಲ್ಲೂಕಿನಲ್ಲಿರುವ ಪ್ರತಿಯೊಂದೂ ರೆಸಾರ್ಟ್‌ಗಳ ಸಮಗ್ರ ತನಿಖೆ ನಡೆಸಲು ಸಮಿತಿ ರಚಿಸಿದ್ದಾರೆ.

ಅದರಂತೆ ಪಟ್ಟಣದ ಆಡಳಿತ ಸೌಧದಲ್ಲಿ ಸಮಿತಿಯ ಮುಖ್ಯಸ್ಥರಾದ ಹುಣಸೂರಿನ ಎಸಿ ಕಾವ್ಯರಾಣಿ ಮತ್ತು ತಹಸಿಲ್ದಾರ್ ಶ್ರೀನಿವಾಸ್ ನೇತೃತ್ವದಲ್ಲಿ ನೀರಾವರಿ, ಸರ್ವೆ, ಕಂದಾಯ, ತಾಪಂ, ಪರಿಸರ, ಅರಣ್ಯ ಇಲಾಖೆಗಳ ಅಧಿಕಾರಿಗಳೊಡನೆ ಸುದೀರ್ಘವಾಗಿ ಸಭೆ ನಡೆಸಿ ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿರುವ ೧೩ ರೆಸಾರ್ಟ್‌ಗಳು ೭ ಹೋಂಸ್ಟೇಗಳಿಗೆ ಅಧಿಕಾರಿಗಳೊಡನೆ ಭೇಟಿ ನೀಡಿ ರೆಸಾರ್ಟ್‌ಗಳ ದಾಖಲಾತಿ ಪಡೆದು ಪರಿಶೀಲಿಸುತ್ತಿದ್ದಾರೆ.

ರೆಸಾರ್ಟ್ ಅರಣ್ಯ ವ್ಯಾಪ್ತಿಗೆ ಬರುತ್ತದೆಯೇ, ಜಮೀನು ಒತ್ತುವರಿಯಾಗಿದೆಯೇ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿದ್ದಾರೆಯೇ ಎಂಬ ಕುರಿತು ರೆಸಾರ್ಟ್‌ನ ಮಾಲೀಕರು, ವ್ಯವಸ್ಥಾಪಕರಿಂದ  ಮಾಹಿತಿ ಪಡೆದಿದ್ದಾರೆ.

ಹುಣಸೂರಿನ ಎಸಿ ಕಾವ್ಯರಾಣಿ, ತಹಸಿಲ್ದಾರ್ ಶ್ರೀನಿವಾಸ್, ಅರಣ್ಯ ಅಧಿಕಾರಿಗಳಾದ ಮಧು, ಮಹೇಶ್, ಸಿದ್ದರಾಜು, ತಾಪಂ ಇಒ ಧರಣೇಶ, ನೀರಾವರಿ ಇಲಾಖೆ ಅಧಿಕಾರಿ ಗಣೇಶ್, ಕಂದಾಯ ಇಲಾಖೆ ಅಧಿಕಾರಿಗಳಾದ ಸಂಜೀವ್ ಕುಮಾರ್, ಯೋಗೇಶ್, ಗೌಸ್ ಶಂಕರ್, ಲಿಂಗ, ನಾಗರಾಜು, ಸರ್ವೆ ಇಲಾಖೆಯ ಬಸವರಾಜು, ಶಂಭು, ಎಸ್‌ಐ ಚಂದ್ರಹಾಸ್, ಇತರರು ಉಪಸ್ಥಿತರಿದ್ದರು.

” ಕಬಿನಿ ಹಿನ್ನೀರಿನ ಅರಣ್ಯ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳ ಬಗ್ಗೆ ದೂರುಗಳು ಬಂದಿರುವುದರಿಂದ ಉನ್ನತ ಮಟ್ಟದ ಅಧಿಕಾರಿಗಳೊಡನೆ ಸಮಿತಿಯ ಮೂಲಕ ದಾಖಲಾತಿಗಳನ್ನು ಪಡೆದು ಪರಿಶೀಲಿಸಲಾಗುತ್ತಿದೆ. ತನಿಖೆ ನಡೆದ ನಂತರ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಯವರಿಗೆ ನೀಡಲಾಗುವುದು.”

-ಶ್ರೀನಿವಾಸ್, ತಹಸಿಲ್ದಾರ್

 

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

14 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

17 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

17 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

17 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

17 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

17 hours ago