Andolana originals

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ

ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರು ದಿಢೀರ್ ಭೇಟಿ ನೀಡಿ ಎಲ್ಲ ದಾಖಲಾತಿಗಳನ್ನೂ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ರೈತ ಸಂಘಟನೆಯವರು, ಮುಖಂಡರು, ಪ್ರಜ್ಞಾವಂತರು, ಮಾಧ್ಯಮದವರು ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಅಕ್ರಮ ರೆಸಾರ್ಟ್‌ಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಶಾಸಕ ಅನಿಲ್ ಚಿಕ್ಕಮಾದುರವರು ಸಭೆ ನಡೆಸಿ ತಾಲ್ಲೂಕಿನಲ್ಲಿರುವ ಪ್ರತಿಯೊಂದೂ ರೆಸಾರ್ಟ್‌ಗಳ ಸಮಗ್ರ ತನಿಖೆ ನಡೆಸಲು ಸಮಿತಿ ರಚಿಸಿದ್ದಾರೆ.

ಅದರಂತೆ ಪಟ್ಟಣದ ಆಡಳಿತ ಸೌಧದಲ್ಲಿ ಸಮಿತಿಯ ಮುಖ್ಯಸ್ಥರಾದ ಹುಣಸೂರಿನ ಎಸಿ ಕಾವ್ಯರಾಣಿ ಮತ್ತು ತಹಸಿಲ್ದಾರ್ ಶ್ರೀನಿವಾಸ್ ನೇತೃತ್ವದಲ್ಲಿ ನೀರಾವರಿ, ಸರ್ವೆ, ಕಂದಾಯ, ತಾಪಂ, ಪರಿಸರ, ಅರಣ್ಯ ಇಲಾಖೆಗಳ ಅಧಿಕಾರಿಗಳೊಡನೆ ಸುದೀರ್ಘವಾಗಿ ಸಭೆ ನಡೆಸಿ ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿರುವ ೧೩ ರೆಸಾರ್ಟ್‌ಗಳು ೭ ಹೋಂಸ್ಟೇಗಳಿಗೆ ಅಧಿಕಾರಿಗಳೊಡನೆ ಭೇಟಿ ನೀಡಿ ರೆಸಾರ್ಟ್‌ಗಳ ದಾಖಲಾತಿ ಪಡೆದು ಪರಿಶೀಲಿಸುತ್ತಿದ್ದಾರೆ.

ರೆಸಾರ್ಟ್ ಅರಣ್ಯ ವ್ಯಾಪ್ತಿಗೆ ಬರುತ್ತದೆಯೇ, ಜಮೀನು ಒತ್ತುವರಿಯಾಗಿದೆಯೇ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿದ್ದಾರೆಯೇ ಎಂಬ ಕುರಿತು ರೆಸಾರ್ಟ್‌ನ ಮಾಲೀಕರು, ವ್ಯವಸ್ಥಾಪಕರಿಂದ  ಮಾಹಿತಿ ಪಡೆದಿದ್ದಾರೆ.

ಹುಣಸೂರಿನ ಎಸಿ ಕಾವ್ಯರಾಣಿ, ತಹಸಿಲ್ದಾರ್ ಶ್ರೀನಿವಾಸ್, ಅರಣ್ಯ ಅಧಿಕಾರಿಗಳಾದ ಮಧು, ಮಹೇಶ್, ಸಿದ್ದರಾಜು, ತಾಪಂ ಇಒ ಧರಣೇಶ, ನೀರಾವರಿ ಇಲಾಖೆ ಅಧಿಕಾರಿ ಗಣೇಶ್, ಕಂದಾಯ ಇಲಾಖೆ ಅಧಿಕಾರಿಗಳಾದ ಸಂಜೀವ್ ಕುಮಾರ್, ಯೋಗೇಶ್, ಗೌಸ್ ಶಂಕರ್, ಲಿಂಗ, ನಾಗರಾಜು, ಸರ್ವೆ ಇಲಾಖೆಯ ಬಸವರಾಜು, ಶಂಭು, ಎಸ್‌ಐ ಚಂದ್ರಹಾಸ್, ಇತರರು ಉಪಸ್ಥಿತರಿದ್ದರು.

” ಕಬಿನಿ ಹಿನ್ನೀರಿನ ಅರಣ್ಯ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳ ಬಗ್ಗೆ ದೂರುಗಳು ಬಂದಿರುವುದರಿಂದ ಉನ್ನತ ಮಟ್ಟದ ಅಧಿಕಾರಿಗಳೊಡನೆ ಸಮಿತಿಯ ಮೂಲಕ ದಾಖಲಾತಿಗಳನ್ನು ಪಡೆದು ಪರಿಶೀಲಿಸಲಾಗುತ್ತಿದೆ. ತನಿಖೆ ನಡೆದ ನಂತರ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಯವರಿಗೆ ನೀಡಲಾಗುವುದು.”

-ಶ್ರೀನಿವಾಸ್, ತಹಸಿಲ್ದಾರ್

 

 

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

13 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

15 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

16 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

16 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

16 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

19 hours ago