ಮಹೇಶ ಕೋಗಿಲವಾಡಿ
ಪಿರಿಯಾಪಟ್ಟಣ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇ ರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆಯು ತಾಲ್ಲೂಕು ಮಟ್ಟದಿಂದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ತಲುಪಿದ್ದು, ಇತ್ತ ತಾಲ್ಲೂಕಿನಲ್ಲಿ ರೈತರು ತಮ್ಮ ದಾಖಲಾತಿಗಳಿಗೆ ಪ್ರತಿನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ.
ರೈತರು ಪ್ರತಿನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ತಾಲ್ಲೂಕು ಕಚೇರಿಗೆ ಆಗಮಿಸಿ ಬರಿಗೈಯಲ್ಲಿ ಸಾರ್ವಜನಿಕರು ತಮ್ಮ ಮೂಲ ಆಗುತ್ತಿದ್ದಾರೆ. ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವಂತಹ ಪಹಣಿ, ವಿವಿಧ ಇಲಾಖೆಗಳಿಗೆ ಬೇಕಾಗಿರುವ ದಾಖಲಾತಿಗಳ ಪ್ರಮಾಣಪತ್ರಗಳು, ವಿದ್ಯಾರ್ಥಿಗಳಿಗೆ ಬೇಕಾದ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳಿಗೆ ಅಧಿಕಾರಿಯ ಸಹಿ ಮುಂತಾದ ಅನೇಕ ಕೆಲಸಗಳು ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯ ಪರಿಣಾಮ ಸ್ಥಗಿತವಾಗಿವೆ.
ಸಾರ್ವಜನಿಕರು ತಮ್ಮ ಮೂಲ ದಾಖಲಾತಿಗಳಿಗೆ ಮತ್ತು ಸಹಿಗಳಿಗಾಗಿ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಪ್ರತಿನಿತ್ಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಹುಡುಕಿಕೊಂಡು ಅವರನ್ನು ಭೇಟಿ ಮಾಡಲು ಬಂದರೆ ಕಚೇರಿಗಳು ಖಾಲಿ ಹೊಡೆಯುತ್ತಿದ್ದು, ಬರಿಗೈಯಲ್ಲಿ ವಾಪಸ್ ಆಗುತ್ತಿರುವುದು ಕಂಡುಬರುತ್ತಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಧಿಕಾರಿಗಳು ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಚೇರಿಗಳಲ್ಲಿ ಬರೀ ಖಾಲಿ ಕುರ್ಚಿಗಳು ಮತ್ತು ಕಂಪ್ಯೂಟರ್ಗಳು ಮಾತ್ರ ಕಂಡುಬರುತ್ತಿದ್ದು, ಬಿಕೋ ಎನ್ನುತ್ತಿದೆ.
ಆದ್ದರಿಂದ ಸರ್ಕಾರ ಶೀಘ್ರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಬಗ್ಗೆ ಗಮನಹರಿಸಿ ಅವುಗಳಿಗೆ ಪರಿಹಾರ ಸೂಚಿಸಿ ಸಾರ್ವಜನಿಕರಿಗೆ ಕೆಲಸ ಕಾರ್ಯ ಗಳು ಸುಗಮವಾಗಿ ನಡೆಯುವಂತೆ ಮಾಡಲು ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…