Andolana originals

ಕುಡಿಯಲು ಶುದ್ಧ ನೀರಿಲ್ಲದೆ ಆಲಗೂಡು ಗ್ರಾಮಸ್ಥರ ಪರದಾಟ

ಸಿದ್ದೇಗೌಡ ಕೊಡಿಯಾಲ

ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಆಲಗೂಡು ಗ್ರಾಮದಲ್ಲಿ ಎಲ್ಲ ಜನಾಂಗಗಳೂ ಸೇರಿ ಸುಮಾರು ಎರಡು ಸಾವಿರ ಜನಸಂಖ್ಯೆ ಇದೆ. ಗ್ರಾಮದಲ್ಲಿ ಶೇ. ೮೦ ದಲಿತ ಕುಟುಂಬಗಳು ವಾಸಿಸುತ್ತಿದ್ದು,ಈ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಲಾಗಿದೆ. ನೀರು ಶೇಖರಣೆ ಟ್ಯಾಂಕ್ ಹಾಗೂ ಮೋಟಾರನ್ನು ಅಳವಡಿಸಲಾಗಿದೆ. ಆದರೆ, ಈ ಘಟಕವು ಎರಡು ಮೂರು ವರ್ಷ ಗಳಿಂದ ಕಾರ್ಯನಿರ್ವಹಿಸದೆ, ಉಪಕರಣಗಳು ತುಕ್ಕು ಹಿಡಿದು ನಿರುಪಯುಕ್ತವಾಗಿವೆ.

ಗ್ರಾಮದ ಮತ್ತೊಂದು ಶುದ್ಧ ಕುಡಿಯುವ ನೀರಿನ ಘಟಕವೂ ನೀರಿನ ಪೂರೈಕೆ ಇಲ್ಲದೆ ಕೆಟ್ಟು ನಿಂತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಶುದ್ಧ ಕುಡಿಯುವ ನೀರು ಎಲ್ಲಿಂದ ತರುತ್ತೀರಾ ಎಂದು ಗ್ರಾಮದ ಮಹಿಳೆಯೊಬ್ಬರನ್ನು ಕೇಳಿದರೆ, ಬೋರ್‌ವೆಲ್‌ನಿಂದ ನೇರವಾಗಿ ಓವರ್‌ಹೆಡ್ ಟ್ಯಾಂಕ್‌ಗೆ ಸರಬರಾಜಾಗುತ್ತದೆ. ನಂತರ ನಲ್ಲಿಗಳಿಗೆ ನೀರು ಬರುತ್ತದೆ. ಈ ನೀರನ್ನೇ ನಾವು ಕುಡಿಯುವುದಕ್ಕೆ ಬಳಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡರು.

ಜಲಜೀವನ್ ಮಿಷನ್ ವತಿಯಿಂದ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸ ಲಾಗುವುದು ಎಂಬ ಘೋಷಣೆ ಯೊಂದಿಗೆ ಆಲಗೂಡು ಗ್ರಾಮದಲ್ಲಿ ಪೈಪ್‌ಲೈನ್ ಅಳವಡಿಸಿ ಎಲ್ಲರ ಮನೆ ಮುಂದೆ ನಳಗಳನ್ನು ಅಳವಡಿಸಿ ಮೂರು ತಿಂಗಳು ಕಳೆದರೂ ಶುದ್ಧ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ. ನಮ್ಮ ಗ್ರಾಮದ ಸುತ್ತಮುತ್ತ ಯಾವುದೇ ಜಲಮೂಲಗಳಿಲ್ಲ. ನಮ್ಮ ಗ್ರಾಮದ ಟ್ಯಾಂಕ್‌ಗೆ ಪಕ್ಕದ ಗ್ರಾಮವಾದ ಚೆನ್ನನಕೆರೆ ಗ್ರಾಮದಿಂದ ನೀರು ಸರಬರಾಜು ಆಗುತ್ತದೆ. ಈ ನೀರು ಶುದ್ಧೀಕರಣ ಆಗಿರುವುದಿಲ್ಲ. ಇದೇ ನೀರನ್ನು ಬಳಸುತ್ತಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ನೀರಿನಲ್ಲಿ ಉಪ್ಪಿನ ಸಾಂದ್ರತೆ ಬಗ್ಗೆ ಗ್ರಾಮದ ಜನರಿಗೆ ತಿಳಿದಿಲ್ಲ. ಈ ಬಗ್ಗೆ ಗ್ರಾಮದ ಮುಖಂಡರನ್ನು ಮಾತನಾಡಿಸಿದಾಗ, ‘ನಮ್ಮ ಗ್ರಾಮವು ಮಳೆ ಆಶ್ರಿತ ಪ್ರದೇಶವಾಗಿದ್ದು, ಗ್ರಾಮದ ಪಕ್ಕ ವಿಶ್ವೇಶ್ವರಯ್ಯ ಲಿಂಕ್ ಕಾಲುವೆ ಇದೆ. ವರ್ಷದಲ್ಲಿ ಆರು ತಿಂಗಳು ಮಾತ್ರ ಈ ಕಾಲುವೆಯಲ್ಲಿ ಕಾವೇರಿ ನೀರು ಹರಿಯುತ್ತದೆ. ಈ ಕಾಲುವೆಯಿಂದ ನೀರನ್ನು ಶುದ್ಧೀಕರಣ ಮಾಡಿ ಕುಡಿಯಲು ಸರಬರಾಜು ಮಾಡಿದರೆ ನಮ್ಮ ಊರಿಗೆ ಕುಡಿಯುವ ನೀರಿನ ಬವಣೆ ತಪ್ಪುತ್ತದೆ ಎಂದು ಅಳಲು ತೋಡಿಕೊಂಡರು. ಕ್ಷೇತ್ರದ ಶಾಸಕ ಎ. ಬಿ. ರಮೇಶ್‌ಬಾಬು ಬಂಡಿಸಿದ್ದೇಗೌಡ ಅವರು ಇತ್ತ ಗಮನಹರಿಸಿ, ಗ್ರಾಮದ ಜನಕ್ಕೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಲಗೂಡು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

18 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

18 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

18 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

18 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

18 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

18 hours ago