Andolana originals

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ
ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಪುರಸಭೆಗೆ ನೋಟಿಸ್ ಜಾರಿ ಮಾಡಿದೆ.

ಗೌರಿ ಕೆರೆಯು ಐತಿಹಾಸಿಕ ಗೌರಿ-ಗಣೇಶೋತ್ಸವದ ವೇಳೆ ಮೂರ್ತಿಗಳ ವಿಸರ್ಜನೆಗೆ ಬಳಕೆಯಾಗುತ್ತಿದೆ. ಇನ್ನೊಂದು ರಾಜರ ಆಡಳಿತದಲ್ಲಿ ಅಂದು ದಣಿದು ಬರುವ ಜನರಿಗೆ ಛತ್ರ ನಿರ್ಮಿಸಿ ಪಕ್ಕದಲ್ಲಿ ಒಂದು ಕರೆ ಕಟ್ಟಿಸಲಾಗಿತ್ತು. ಅದೇ ಇಂದಿನ ಛತ್ರ ಕೆರೆಯಾಗಿ ಕರೆಯಲ್ಪಡುತ್ತಿದೆ. ಆದರೆ ಈ ಎರಡೂ ಕೆರೆಗಳು ಒತ್ತುವರಿಯಾಗಿರುವ ರೋಪ ಹಿಂದಿನಿಂದಲೂ ಕೇಳಿ ಬರುತ್ತಿದೆ.

ಈ ಸಂಬಂಧ ವಿರಾಜಪೇಟೆ ಸಾಮಾಜಿಕ ಕಾರ್ಯಕರ್ತ ಮಾಳೇಟಿರ ಕಾಳಯ್ಯ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದಾರೆ. ಖಾಸಗಿ ವ್ಯಕ್ತಿಗಳು ಐತಿಹಾಸಿಕ ಕೆರೆಗಳ ಜಾಗವನ್ನು ಕಬಳಿಕೆ ಮಾಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ೨ ಕೆರೆಗಳ ಒತ್ತುವರಿ ಸಂಬಂಧ ಸಮಗ್ರ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಈ ಹಿಂದೆ ಪುರಸಭೆಯ ಆಡಳಿತ ಮಂಡಳಿಯ ಮಾಸಿಕ ಕಲಾಪದಲ್ಲಿ ಐತಿಹಾಸಿಕ ಗೌರಿ ಕೆರೆಯ ಜಾಗವನ್ನು ಪಕ್ಷವೊಂದರ ಪ್ರಮುಖ ಮತ್ತು ಪ. ಪಂ. ಹಿರಿಯ ಸದಸ್ಯರು ಒತ್ತುವರಿ ಮಾಡಿದ ಕುರಿತು ಭಾರೀ ಚರ್ಚೆ ನಡೆದಿತ್ತಲ್ಲದೆ, ಅವರು ಅದರ ಸರ್ವೆ ಕಾರ್ಯಕ್ಕೆ ಅಡ್ಡಿ ಪಡಿಸುತ್ತಿರುವ ಕುರಿತು ಇತರ ಸದಸ್ಯರು ಆಕ್ಷೇಪಿಸಿದ್ದರು. ಸರ್ವೆ ಸಂಖ್ಯೆ ೩೮ರಲ್ಲಿ ಆರ್‌ಟಿಸಿಯಲ್ಲಿ ೧. ೩೦ ಎಕರೆ ಜಾಗ ಇದ್ದರೂ ಅರ್ಧ ಭಾಗ ಒತ್ತುವರಿ ಆಗಿರುವ ಶಂಕೆ ಇದೆ. ಇದನ್ನು ತೆರವುಗೊಳಿಸಲು ಪುರಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತಾದರೂ ಬಳಿಕ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಅದೇ ರೀತಿ ರಾಜರ ಆಡಳಿತದಲ್ಲಿ ಕೊಳವಂಡ ಕುಟುಂಬದವರು ಆ ಕಾಲದಲ್ಲಿ ಛತ್ರ ಕೆರೆಯ ಸಮೀಪದಲ್ಲಿ ಛತ್ರದಲ್ಲಿ ಅನ್ನದಾನ ನಡೆಸುತ್ತಿದ್ದರು. ಈಗ ಕೆರೆಯ ಜಾಗವನ್ನು ಹಾಗೂ ಅದರ ಬಫರ್ ಜೋನ್ ಜಾಗವನ್ನು ಉಳ್ಳವರು ಒತ್ತುವರಿ ಮಾಡಿ ಮನೆ, ವಾಣಿಜ್ಯ ಸಂಕಿರಣ ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪಟ್ಟಣದ ಕೆರೆಗಳು ಒತ್ತುವರಿಯಾಗುತ್ತಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಪ್ರಾಧಿಕಾರದಿಂದ ಪುರಸಭೆಗೆ ನೋಟಿಸ್ ನೀಡಲಾಗಿದ್ದು, ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago