ಕಾಡಾನೆ, ಹುಲಿ ದಾಳಿಯಿಂದ ಹೈರಾಣಾದ ರೈತರು; ಶಾಶ್ವತ ಪರಿಹಾರಕ್ಕೆ ಒತ್ತಾಯ
ಕಾಂಗೀರ ಬೋಪಣ್ಣ
ವಿರಾಜಪೇಟೆ: ಸಮೀಪದ ಮಗ್ಗುಲ, ಐಮಂಗಲ, ಚೆಂಬೆಬೆಳ್ಳೂರು, ಕೂಕ್ಲೂರು ಭಾಗದಲ್ಲಿ ರೈತರು ವನ್ಯಮೃಗಗಳ ಹಾವಳಿಯಿಂದ ಬೆಳೆಗಳನ್ನು ಕಳೆದುಕೊಂಡು ಹೈರಾಣಾತ್ತಿದ್ದಾರೆ.
ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಬೆಳೆಗಳು ಹಾನಿಗೊಳಗಾಗುತ್ತಿವೆ. ಅಲ್ಲದೆ, ಹುಲಿ ದಾಳಿ ಕೂಡ ಹೆಚ್ಚಾಗುತ್ತಿದ್ದು, ರೈತರು ತೋಟಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಇತ್ತೀಚೆಗೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಇಲಾಖೆಯ ತಂಡ ಈ ಭಾಗದಲ್ಲಿ ಹುಲಿಯನ್ನು ಸೆರೆಹಿಡಿ ಯುವ ಕಾರ್ಯಾಚರಣೆ ನಡೆಸಿತ್ತು. ಆದರೆ ಹುಲಿ ಕಾಡು ಸೇರಿದೆ ಎಂದು ಹೇಳಿ ಕೈತೊಳೆದುಕೊಂಡಿದ್ದು, ಅರಣ್ಯ ಇಲಾಖೆ ಕಾರ್ಯ ವೈಖರಿಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಭತ್ತದ ಕೃಷಿ ಮಾಡು ವವರ ಸಂಖ್ಯೆ ಕಡಿಮೆಯಾಗಿದೆ. ಕಾರ್ಮಿಕರ ಕೊರತೆ, ಕಾಡಾನೆ ಹಾವಳಿ, ಕಾಡು ಹಂದಿಗಳ ದಾಂದಲೆಯಿಂದ ರೈತರು ಕೃಷಿಯಿಂದ ದೂರ ಸರಿಯುತ್ತಿದ್ದಾರೆ. ಬೆಳೆ ಕೈಗೆ ಬಂದಾಗ ವನ್ಯಜೀವಿಗಳು ದಾಂಗುಡಿ ಇಟ್ಟು ಬೆಳೆಯನ್ನು ನಾಶ ಮಾಡುತ್ತಿವೆ. ಕ್ರಮ ಕೈಗೊಳ್ಳಬೇಕಾದ ಅರಣ್ಯ ಇಲಾಖೆ ಸಿಬ್ಬಂದಿ ಕಾಟಾ ಚಾರಕ್ಕೆ ಬಂದು ಹೋಗುತ್ತಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು, ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಅವರ ಕಾರ್ಯವೈಖರಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಡುಪ್ರಾಣಿಗಳಿಂದ ನಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಫಸಲು ಕಳೆದುಕೊಂಡು ಖರ್ಚು ಮಾಡಿದ ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಇಲಾಖೆಯ ಪರಿಹಾರ ಗಗನ ಕುಸುಮವಾಗಿದ್ದು, ಸಿಕ್ಕಿದರೆ ಸಿರುಂಡೆ ಎನ್ನುವಂತಾಗಿದೆ. ಆನೆ ಗಳು ಪ್ರತ್ಯೇಕ ಗುಂಪಾಗಿ ಬಂದು ಕೃಷಿ ಹಾನಿ ಮಾಡುತ್ತವೆ. ಇನ್ನೊಂದೆಡೆ ಹುಲಿ ಆಗಾಗ ಬಂದು ಜನರಿಗೆ ಜೀವ ಭಯ ಮೂಡಿಸುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರು ಕೇವಲ ಪ್ರಚಾರಕ್ಕಾಗಿ ಮಾತ್ರ ಬರುತ್ತಾರೆ. ಆನೆ-ಮಾನವ ಸಂಘರ್ಷ ಕೆಲವು ಬಾರಿ ಮಾನವ ಜೀವಕ್ಕೂ ಕುತ್ತು ತರುತ್ತದೆ. ಯಾವುದೇ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ಮತ್ತು ಸ್ಥಳಿಯ ಶಾಸಕರು ಸಂಪೂರ್ಣ ವಿಫಲವಾಗಿದ್ದಾರೆ.
-ಬೊಳ್ಳಚಂಡ ಪ್ರಕಾಶ್, ಚೆಂಬೆಬೆಳ್ಳೂರು, ಕೃಷಿಕರು
ಕಾಡಾನೆಗಳ ಹಾವಳಿ ಇರುವ ಕಡೆ ಟಾಸ್ಕ್ ಪೋರ್ಸ್ ಕಾರ್ಯಾಚರಣೆ ನಡೆಸುತ್ತದೆ. ದೂರು ಬಂದ ತಕ್ಷಣ ಕಾರ್ಯಾಚರಣೆ ಮಾಡುತ್ತಿದ್ದೇವೆ. ಆದರೆ ಕಾಡಾನೆಗಳು ನಿರ್ದಿಷ್ಟ ಸ್ಥಳವನ್ನು ವಾಸಸ್ಥಾನವಾಗಿ ಮಾಡಿಕೊಡು ಅಲ್ಲಿಯೆ ಇರುತ್ತವೆ. ಓಡಿಸಿದರೆ ಮತ್ತೆ ಅಲ್ಲಿಗೆ ಬರುತ್ತವೆ. ಆದ್ದರಿಂದ ಅರಣ್ಯದಂಚಿಗೆ ರೈಲ್ವೆ ಬ್ಯಾರಿಕೇಡ್ ಅಳವಡಿಸಿದರೆ ಆನೆ ಹಾವಳಿ ನಿಯಂತ್ರಣಕ್ಕೆ ಬರಬಹುದು.
-ಶಿವರಾಂ, ವಲಯ ಅರಣ್ಯಧಿಕಾರಿ, ವಿರಾಜಪೇಟೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…