Andolana originals

ವಿರಾಜಪೇಟೆ ಸ್ವಚ್ಛತೆ: ಪುರಸಭೆ ಪ್ರಯತ್ನಕ್ಕೆ ಸಿಗದ ಮನ್ನಣೆ

ಕಾಂಗೀರ ಬೋಪಣ್ಣ

ಸಾಕಷ್ಟು ಕ್ರಮ ಕೈಗೊಂಡರೂ ಎಚ್ಚೆತ್ತುಕೊಳ್ಳದ ಜನತೆ; ಎಲ್ಲೆಂದರಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ವಿರಾಜಪೇಟೆ: ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡದಂತೆ ವಿರಾಜಪೇಟೆ ಪುರಸಭೆಯಿಂದ ಸಾಕಷ್ಟು ಕ್ರಮ ಕೈಗೊಂಡರೂ ಜನತೆ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಎಲ್ಲೆಂದರಲ್ಲಿ ಕಸ ಎಸೆಯುವ ಚಾಳಿಯನ್ನು ಕೆಲವರು ಮುಂದುವರಿಸಿದ್ದು, ಪೊಲೀಸ್ ಇಲಾಖೆ ಮೂಲಕ ಕ್ರಮ ಕೈಗೊಳ್ಳಬೇಕೆನ್ನುವ ಒತ್ತಾಯ ಕೇಳಿ ಬಂದಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದಂತೆ ಪುರಸಭೆಯಿಂದ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಮೊದಲ ಪ್ರಯತ್ನವಾಗಿ ಕಸ ಎಸೆಯುತ್ತಿದ್ದ ಸ್ಥಳದಲ್ಲಿ ಹೂಕುಂಡಗಳನ್ನಿಟ್ಟು ಕಸ ಎಸೆಯದಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಕಸ ಎಸೆಯುವವರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ನೀಡುವ ಪ್ರಯತ್ನವೂ ಸಫಲತೆ ಕಂಡಿಲ್ಲ. ಇದೀಗ ಸಿಸಿ ಕ್ಯಾಮೆರಾ ಅಳವಡಿಸಿದರೂ ಕೆಲವರು ಅದೇ ಚಾಳಿಯನ್ನು ಮುಂದುವರಿಸಿದ್ದು, ಪಟ್ಟಣದ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ತಂದು ಸುರಿಯಲಾಗುತ್ತಿದೆ.

ಕಸ ಎಸೆಯುವವರಿಗೆ ಸಣ್ಣ ಪ್ರಮಾಣದ ದಂಡ ವಿಧಿಸುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಇವರ ಮನೋಭಾವ ಬದಲಾಯಿಸಲು ಇವರಿಗೆ ದಂಡದ ಜೊತೆಗೆ ಪೊಲೀಸ್ ಇಲಾಖೆಗೂ ದೂರು ನೀಡಿ ಕಠಿಣ ಕ್ರಮ ಜರುಗಿಸಬೇಕೆಂಬುದು ಪಟ್ಟಣದ ಪ್ರಜ್ಞಾವಂತ ನಾಗರಿಕರ ಆಗ್ರಹವಾಗಿದೆ.

ಕೊಡಗಿನಲ್ಲಿ ಇತ್ತೀಚೆಗೆ ಹೋಂಸ್ಟೇ ಮತ್ತು ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಅಭಿಯಾನ ನಡೆಸಿ ರಾಶಿ ರಾಶಿ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಲಾಗಿತ್ತು. ಆದರೆ ಮತ್ತೆ ಹೆದ್ದಾರಿ ಬದಿಯಲ್ಲಿ ಕಸ ರಾರಾಜಿಸುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರ ಕೊಡುಗೆಯೂ ಇದರಲ್ಲಿ ಬಹುಪಾಲು ಇದೆ. ಇದನ್ನು ತಡೆಯಲು ಸ್ಥಳೀಯ ಗ್ರಾ.ಪಂ.ಗಳು ಇನ್ನಿಲ್ಲದ ಕಸರತ್ತು ನಡೆಸಿದರೂ ಪ್ರಯೋಜನವಾಗುತ್ತಿಲ್ಲ.

ವಿರಾಜಪೇಟೆ ಪಟ್ಟಣದಲ್ಲಿ ವಾಹನಗಳು ಪ್ರತಿ ಮನೆ,ಅಂಗಡಿ ಮುಂಗಟ್ಟುಗಳ ಬಳಿ ಬಂದು ಹಸಿಕಸ, ಒಣಕಸವನ್ನು ಪ್ರತ್ಯೇಕವಾಗಿ ಸಂಗ್ರಹ ಮಾಡಿಕೊಂಡು ಹೋಗುತ್ತವೆ. ಆದರೆ ಕದ್ದು ಮುಚ್ಚಿ ತ್ಯಾಜ್ಯ ತಂದು ರಸ್ತೆ ಬದಿ ಎಸೆಯುವ ಕೆಲವು ಜನರ ಮನಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕಸ ಎಸೆಯುವವರನ್ನು ಗುರುತಿಸಿ ದಂಡ ವಿಧಿಸುವ ಜವಬ್ದಾರಿಯನ್ನು ಪುರಸಭೆಯ ಪರಿಸರ ಅಭಿಯಂತರ ನೀತು ಸಿಂಗ್ ಅವರು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಇವರಿಗೆ ಪುರಸಭೆ ಸದಸ್ಯರು ಮುಕ್ತವಾಗಿ ಕೆಲಸ ಮಾಡಲು ಬಿಡಬೇಕು ಮತ್ತು ಕಸ ಹಾಕುವವರು ಯಾವುದೇ ಪಕ್ಷದವರು ಅಥವಾ ಮುಖಂಡ ಎನ್ನುವ ಭೇದವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಪುರಸಭೆಯನ್ನು ಒತ್ತಾಯಿಸಿದ್ದಾರೆ.

” ಕಸದ ವಿಚಾರದಲ್ಲಿ ಪುರಸಭೆ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಎಲ್ಲೆಂದರಲ್ಲಿ ಕಸ ಹಾಕುವವರಿಗೆ ಸಾವಿರ ರೂ. ದಂಡ ಹಾಕುತ್ತಿದ್ದು, ಶೇ.೯೦ ಹತೋಟಿಗೆ ಬಂದಿದೆ. ಇದಕ್ಕಾಗಿ ನೂತನವಾಗಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದ್ದು, ಈಗಾಗಲೇ ೬ ಕಡೆ ಅಳವಡಿಸಲಾಗಿದೆ. ಸದ್ಯದಲ್ಲಿಯೇ ಇವು ಕಾರ್ಯನಿರ್ವಹಿಸಲಿವೆ. ಆದರೆ ಕೆಲವರು ವಿನಾಕಾರಣ ಈ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿರುವುದು ಸರಿಯಲ್ಲ. ಮನೆ ಮನೆ ಪ್ರಚಾರ ಮಾಡಿ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದು, ಜನರು ತಮ್ಮ ಮನೋಭಾವನೆಯನ್ನು ಬದಲಾಯಿಸಿಕೊಳ್ಳಬೇಕಿದೆ.”

-ನಾಚಪ್ಪ, ಪುರಸಭೆ ಮುಖ್ಯಾಧಿಕಾರಿ, ವಿರಾಜಪೇಟೆ

” ನಾವು ಕೆಲವರು ಸೇರಿ ಸಾಮಾಜಿಕ ಬದ್ಧತೆಯಿಂದ ಜನಜಾಗೃತಿಗಾಗಿ ಕೆಲವರು ಸೇರಿ ಪ್ರಮುಖವಾಗಿ ಕಸ ಬಿಸಾಡುವ ಜಾಗದಲ್ಲಿ ಹೂವಿನ ಕುಂಡ ಇಟ್ಟು ಬಂದಿದ್ದೆವು. ಆದರೆ ಜನರು ಅಲ್ಲಿ ಮತ್ತೆ ಕಸ ಹಾಕುತ್ತಿದ್ದಾರೆ. ಈ ಪ್ರವೃತಿ ಸರಿಯಲ್ಲ. ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಅದರಲ್ಲಿ ಸೆರೆಯಾಗುವ ದೃಶ್ಯವನ್ನು ಆಧರಿಸಿ ಕ್ರಮ ಕೈಗೊಳ್ಳುವ ಕಾರ್ಯ ಶೀಘ್ರದಲ್ಲೇ ಆರಂಭವಾಗಬೇಕು. ಪಟ್ಟಣದಲ್ಲಿ ವಾಯುಮಾಲಿನ್ಯ ಹಾಗೂ ಜಲ ಮಾಲಿನ್ಯವನ್ನು ತಡೆಯಬೇಕಿದೆ. ಇದರಲ್ಲಿ ೧೮ ವಾರ್ಡ್ ಸದಸ್ಯರೂ ಭಾಗಿಯಾಗಬೇಕು. ಇದು ಸಿಬ್ಬಂದಿ ಹೊಣೆ ಮಾತ್ರ ಅಲ್ಲ. ನಾಗರಿಕರ ಜವಾಬ್ದಾರಿಯೂ ಹೌದು.”

-ಯೋಗೀಶ್ ನಾಯ್ಡು, ಸಾಮಾಜಿಕ ಕಾರ್ಯಕರ್ತರು, ವಿರಾಜಪೇಟೆ

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago