Andolana originals

ಪಿಎನ್‌ಜಿ ಬಳಕೆದಾರರಿಗೆ ಎಚ್ಚರಿಕೆ

ಹೆಚ್.ಎಸ್.ದಿನೇಶ್‌ಕುಮಾರ್

ಸಿಲಿಂಡರ್ ಹಿಂತಿರುಗಿಸದಿದ್ದರೆ ಎಫ್ಐಆರ್ ದಾಖಲು

ಸಿಲಿಂಡರ್‌ಗಳ ಕಾಳಸಂತೆ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ; ೫ಕೆಜಿ ಸಿಲಿಂಡರ್‌ಗೂ ಇನ್ನು ಮುಂದೆ ಒಟಿಪಿ ಕಡ್ಡಾಯ

ಮೈಸೂರು: ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ)ಬಳಕೆ ಜೊತೆಗೆ ಸಿಲಿಂಡರ್‌ಗಳನ್ನು ಕೂಡ ಗ್ರಾಹಕರು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಯಲ್ಲಿ ಸಿಲಿಂಡರ್ ಗಳನ್ನು ವಾಪಸ್ ನೀಡದವರ ವಿರುದ್ಧ ಎಫ್ ಐಆರ್ ದಾಖಲಿಸಲು ಇಂಧನ ಸಚಿವಾಲಯ ನಿಯಮ ರೂಪಿಸಿದೆ.

ನಗರದ ಕೆಲವೆಡೆ ಈಗಾಗಲೇ ನೂರಾರು ಮನೆಗಳಿಗೆ ಪೈಪ್‌ಲೈನ್ ಮೂಲಕ ಅನಿಲ ಸರಬರಾಜು ಮಾಡಲಾಗುತ್ತಿದೆ. ಆದರೆ, ಅವರುಗಳು ಈ ಹಿಂದೆ ಪಡೆದಿದ್ದ ಸಿಲಿಂಡರ್ಗಳನ್ನು ಆಯಾ ಏಜೆನ್ಸಿಗಳಿಗೆ ಹಿಂತಿರುಗಿಸಿಲ್ಲ. ಹೀಗೆ ಪಡೆದುಕೊಳ್ಳುವ ಸಿಲಿಂಡರ್‌ಗಳನ್ನು ಅನ್ಯರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿರುವುದು ಏಜೆನ್ಸಿಗಳ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅಂತಹವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ವಿತರಣೆಗೆ ಕೇಂದ್ರ ಸರ್ಕಾರ ಮತ್ತಷ್ಟು ನಿಯಮಗಳನ್ನು ಜಾರಿಗೆ ತಂದಿದ್ದು, ಇನ್ನು ಮುಂದೆ ೫ ಕೆಜಿ ಸಿಲಿಂಡರ್ ಪಡೆಯಲೂ ಒಟಿಪಿ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಿದೆ.

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ಆರಂಭವಾದಾಗಿನಿಂದ ಅನಿಲ ಪೂರೈಕೆಯಲ್ಲಿ ಸಾಕಷ್ಟು ವ್ಯತ್ಯಯಗಳು ಉಂಟಾಗಿವೆ. ಗ್ರಾಹಕರಿಗೆ ಅನಿಲ ಸಿಲಿಂಡರ್ ವಿತರಣೆಗೆ ಸಾಕಷ್ಟು ಹೊಸ ನಿಯಮಗಳನ್ನೂ ಜಾರಿಗೊಳಿಸಲಾಗಿದೆ.

ಇಷ್ಟು ದಿನ ೫ ಕೆಜಿ ಸಿಲಿಂಡರ್‌ಗಳನ್ನು ೧೫.೫ ಕೆಜಿ ಸಿಲಿಂಡರ್‌ಗೆ ಪರ್ಯಾಯವಾಗಿ ಜನರು ಬಳಸುತ್ತಿದ್ದರು. ಸಿಲಿಂಡರ್ ಬುಕ್ ಮಾಡಿದಲ್ಲಿ ೨೦ ದಿನಗಳ ನಂತರ ಸಿಲಿಂಡರ್ ನೀಡುವ ಪದ್ಧತಿ ಜಾರಿಯಾದ ನಂತರ ೫ ಕೆಜಿ ಸಿಲಿಂಡರ್‌ಗೆ ಬೇಡಿಕೆ ಹೆಚ್ಚಾಗಿತ್ತು. ಯಾವುದೇ ದಾಖಲೆಗಳೂ ಇಲ್ಲದೆ ೫ ಕೆಜಿ ಸಿಲಿಂಡರ್‌ಗಳನ್ನು ಪಡೆಯಬಹುದಾಗಿತ್ತು. ಆದರೆ, ಈ ಸಿಲಿಂಡರ್ ಗಳಿಗೂ ಬೇಡಿಕೆ ಹೆಚ್ಚಾದ ಹಿನ್ನೆಯಲ್ಲಿ ಸರ್ಕಾರ ಒಟಿಪಿ ಕಡ್ಡಾಯ ಗೊಳಿಸುವುದರ ಜೊತೆಗೆ ೧೦ ದಿನಗಳ ಅಂತರದಲ್ಲಿ ಒಂದು ಸಿಲಿಂಡರ್ ನೀಡಲು ನಿಯಮ ರೂಪಿಸಿದೆ. ಇನ್ನು ವಾಣಿಜ್ಯ ಸಿಲಿಂಡರ್‌ಗಳಿಗಂತೂ ಸಾಕಷ್ಟು ಬೇಡಿಕೆ ಇದೆ. ಬೇಡಿಕೆಗೆ ಅನುಸಾರವಾಗಿ ಶೇ.೫೦ ರಿಂದ ೬೦ ರಷ್ಟು ಸಿಲಿಂಡರ್‌ಗಳನ್ನು ಹೋಟೆಲ್ ಹಾಗೂ ಇನ್ನಿತರ ವಾಣಿಜ್ಯ ಚಟುವಟಿಕೆಗೆ ನೀಡಲಾಗುತ್ತಿತ್ತು. ಆದರೆ, ಇನ್ನು ಮುಂದೆ ವಾಣಿಜ್ಯ ಸಿಲಿಂಡರ್‌ಗಳನ್ನು ಪಡೆಯಲು ಒಟಿಪಿ ಕಡ್ಡಾಯಗೊಳಿಸಲಾಗಿದೆ. ಇದರ ಜೊತೆಗೆ ಗೃಹ ಬಳಕೆ ಸಿಲಿಂಡರ್‌ಗೆ ನೀಡಿರುವ ಮೊಬೈಲ್ ಸಂಖ್ಯೆಯನ್ನು ವಾಣಿಜ್ಯ ಬಳಕೆ ಸಿಲಿಂಡರ್ ಪಡೆಯಲು ನೀಡುವಂತಿಲ್ಲ. ಇದಕ್ಕೆ ಪ್ರತ್ಯೇಕ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ.

ದರ ಹೆಚ್ಚಳ ಸಾಧ್ಯತೆ: 

ಮೂಲಗಳ ಪ್ರಕಾರ ಮುಂದಿನ ಒಂದು ವಾರದಲ್ಲಿ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳವಾಗುವ ಸಾಧ್ಯತೆಗಳಿವೆ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗೆ ೩೦೦ ರೂ. ಹಾಗೂ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ೫೦ ರೂ. ನಿಂದ ೬೦ ರೂ.ಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಏಜೆನ್ಸಿಗಳ ಮಾಲೀಕರು ತಿಳಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

2 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

2 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

2 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

4 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

4 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

4 hours ago